AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು, 8ಕ್ಕೇರಿದ ಸಾವಿನ ಸಂಖ್ಯೆ

ಹುಬ್ಬಳ್ಳಿಯಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆ ಸೇರಿದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಆರು ಮಂದಿ ಈಗಾಗಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳುಸೋಮವಾರ ರಾತ್ರಿ ಮೃತಪಟ್ಟಿದ್ದು, ಇನ್ನೊಬ್ಬರು ಮಂಗಳವಾರ ನಸುಕಿನಲ್ಲಿ ಅಸುನೀಗಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಹುಬ್ಬಳ್ಳಿ: ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು, 8ಕ್ಕೇರಿದ ಸಾವಿನ ಸಂಖ್ಯೆ
ಪ್ರಕಾಶ ಬಾರಕೇರ ಮೃತಪಟ್ಟಿದ್ದು ಅವರ ಮಗನಿಗೆ ಚಿಕಿತ್ಸೆ ಮುಂದುವರಿದಿದೆ.
ಶಿವಕುಮಾರ್ ಪತ್ತಾರ್
| Edited By: |

Updated on:Dec 31, 2024 | 8:26 AM

Share

ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿ, ಡಿಸೆಂಬರ್ 31: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ.

ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​ ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, ಕಿಮ್ಸ್​​ನಲ್ಲಿ ಓರ್ವ ಗಾಯಾಳು ಮಾಲಾಧಾರಿಗೆ ಚಿಕಿತ್ಸೆ ಮುಂದುವರಿದಿದೆ.

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಯಲ್ಲಿ ಬೆಂದು ಕಿಮ್ಸ್​ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಸಾವಿನ ಸರಣಿ ಮುಂದುವರಿದಿದ್ದು ಸೋಮವಾರ ರಾತ್ರಿ ರಾಮನಗರ ನಿವಾಸಿ 26 ವರ್ಷದ ತೇಜಸ್ವರ್ ಸಾತರೆ ಉಸಿರು ಚೆಲ್ಲಿದ್ದಾರೆ. ಮೃತ ತೇಸಜ್ವರ್ 3 ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಹಾಕುತ್ತಿದ್ದರು ಎನ್ನಲಾಗಿದೆ. ಅಯ್ಯಪ್ಪನ ಆಶೀರ್ವಾದದಿಂದ ಮಗ ಬದುಕಿ ಬರಬಹುದು ಎಂದುಕೊಂಡಿದ್ದ ಕುಟುಂಬಕ್ಕೆ ಸಾವಿನ ಸುದ್ದಿಯಿಂದ ಆಕಾಶಾವೇ ತಲೆ ಮೇಲೆ ಕಳಚಿ ಬಿದ್ದಂತಾಗಿದೆ.

ಡಿಸೆಂಬರ್ 22 ರಿಂದ ಕಿಮ್ಸ್ ಆಸ್ಪತ್ರೆಯಲ್ಲಿ ತೇಜಸ್ವರ್​ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕಿಮ್ಸ್ ಆಸ್ಪತ್ರೆಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್​ ಸ್ಫೋಟ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು

ಗಂಭೀರವಾಗಿ ಗಾಯಗೊಂಡಿರುವ 9 ಜನ ಮಾಲಾಧಾರಿಗಳ ಪೈಕಿ ಇದೀಗ ಒಬ್ಬ ಗಾಯಾಳು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಬೆಂಕಿಯಲ್ಲಿ ಬೆಂದ ಮಾಲಾಧಾರಿಗಳು ದಿನಕ್ಕೊಬ್ಬರಂತೆ ಪ್ರಾಣ ಬಿಡುತ್ತಿದ್ದು, ಇದೀಗ 8 ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Tue, 31 December 24

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್