AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubli-Dharwad Municipal Corporation Mayor Election: ಮೇಯರ, ಉಪ ಮೇಯರ ಅಭ್ಯರ್ಥಿಯ ಹೆಸರು ಘೋಷಿಸಿದ ಬಿಜೆಪಿ; ಕಣಕ್ಕೆ ಇಳಿಯಲಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಪ್ತ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ  ಮೇಯರ್, ಉಪ ಮೇಯರ್ ಚುನಾವಣೆ ಹಿನ್ನಲೆ ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಪ್ತ ಧಾರವಾಡದ ಈರೇಶ್ ಅಂಚಟಗೇರಿ ಅವರ ಹೆಸರನ್ನು ಘೋಷಣೆ ಮಾಡಿದೆ.

Hubli-Dharwad Municipal Corporation Mayor Election: ಮೇಯರ, ಉಪ ಮೇಯರ ಅಭ್ಯರ್ಥಿಯ ಹೆಸರು ಘೋಷಿಸಿದ ಬಿಜೆಪಿ; ಕಣಕ್ಕೆ ಇಳಿಯಲಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಪ್ತ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆImage Credit source: Hubballi
TV9 Web
| Updated By: ವಿವೇಕ ಬಿರಾದಾರ|

Updated on:May 28, 2022 | 11:54 AM

Share

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ  (Hubli-Dharwad Municipal Corporation) ಮೇಯರ್, ಉಪ ಮೇಯರ್ ಚುನಾವಣೆ (Mayor, Deputy Mayor Election) ಹಿನ್ನಲೆ ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆಪ್ತ ಧಾರವಾಡದ ಈರೇಶ್ ಅಂಚಟಗೇರಿ ಅವರ ಹೆಸರನ್ನು ಘೋಷಣೆ ಮಾಡಿದೆ. ನಾಮಪತ್ರ ಸಲ್ಲಿಸಲು ಬಿಜೆಪಿ ಅಭ್ಯರ್ಥಿಗಳು ಆಗಮಿಸಿದ್ದಾರೆ. ಶಾಸಕ ಅಮೃತ ದೇಸಾಯಿ ಸೇರಿದಂತೆ ಬಿಜೆಪಿ‌ ಪ್ರಮುಖರ ಜೊತೆ ಮೇಯರ್ ಸ್ಥಾನಕ್ಕೆ ಈರೇಶ್ ಅಂಚಟಗೇರಿ, ಉಪ‌ಮೇಯರ್ ಸ್ಥಾನಕ್ಕೆ ಉಮಾ ಮುಕುಂದ ಮಹಾನಗರ ಪಾಲಿಕೆಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈ ಬಿಜೆಪಿ ಅಭ್ಯರ್ಥಿ ಆಯ್ಕೆಗು ಮುನ್ನ ಬಿಜೆಪಿ‌ ಸಭೆಗಳ ಮೇಲೆ ಸಭೆ ನಡೆಸಿತು.  ನಿನ್ನೆ ತಡರಾತ್ರಿ ವರೆಗೂ ಬಿಜೆಪಿ ನಡೆದ ಸಭೆ ನಡೆಸಿತ್ತು. ಇಂದು ಬೆಳಿಗ್ಗೆ ಮತ್ತೆ  ಬಿಜೆಪಿ ಕೋರ್ ಕಮಿಟಿ  ಹುಬ್ಬಳ್ಳಿ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಸಿತ್ತು. ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಜಗದೀಶ್ ಶೆಟ್ಟರ್​ ಮತ್ತು ಅರವಿಂದ ಬೆಲ್ಲದ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಸಮಾಲೋಚನೆ ನಡೆಸಿದ  ಬಿಜೆಪಿ ನಾಯಕರು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಧಾರವಾಡದ ಈರೇಶ್ ಅಂಚಟಗೇರಿ ಅವರನ್ನು ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಮತ್ತು ಉಪ ಮೇಯರ ಅಭ್ಯರ್ಥಿಯಾಗಿ ಉಮಾ ಮುಕುಂದ  ಘೋಷಣೆ ಮಾಡಿದ್ದಾರೆ.

ಇದನ್ನು ಓದಿ: ನೀವು ಕುಳಿತುಕೊಳ್ಳಿವ ಭಂಗಿ ನಿಮ್ಮ ಸ್ವಭಾವ ಹೇಳುತ್ತೆ!

ಇದನ್ನೂ ಓದಿ
Image
Home Loan: ಹೋಮ್​ ಲೋನ್​ಗೆ ಏರಲಿದೆ ಭಾರೀ ಪ್ರಮಾಣದಲ್ಲಿ ಬಡ್ಡಿದರ; ಇಎಂಐ ಪಾವತಿ ನಿಭಾಯಿಸುವುದಕ್ಕೆ ಇಲ್ಲಿದೆ 7 ದಾರಿ
Image
IPL 2022: 19ನೇ ವಯಸ್ಸಿನಲ್ಲಿ ಶುರುವಾದ ಕನಸಿಗೆ 15 ವರ್ಷಗಳು..!
Image
Sanju Samson: ನಾವು ಆತನಿಗೋಸ್ಕರ ಕಪ್ ಗೆದ್ದೇ ಗೆಲ್ಲುತ್ತೇವೆ ಎಂದ ರಾಜಸ್ಥಾನ್ ರಾಯಲ್ಸ್
Image
National Hamburger Day 2022: ಬರ್ಗರ್​ನ ಇತಿಹಾಸ ನಿಮಗೆ ತಿಳಿದಿದೆಯೇ? ವಿವಿಧ ರೀತಿಯ ಹ್ಯಾಂಬರ್ಗರ್​ಗಳು ಇಲ್ಲಿವೆ ನೋಡಿ

ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ  ಚುನಾವಣೆ ನಡೆಯಲಿದ್ದು, ಬೆಳಗ್ಗೆ 9.30ರಿಂದ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಗಡುವು ನೀಡಲಾಗಿತ್ತು.  ಮಧ್ಯಾಹ್ನ 1ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯುಲಿದ್ದು, ಹಾಗೇನಾಮಪತ್ರ  ಹಿಂಪಡೆಯಲು ಅವಕಾಶ ನೀಡಲಾಗಿದೆ.  ಮಧ್ಯಾಹ್ನ 1.30ಕ್ಕೆ ಕೈ ಎತ್ತುವ ಮೂಲಕ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಚುನಾವಣೆಯ ಅಧಿಕಾರಿಯಾಗಿ ಬಿಸ್ವಾಸ್ ಕಾರ್ಯ ನಿರ್ವಹಿಸಲಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ 82 ವಾರ್ಡ್​ಗಳಿದ್ದು, ಗೆಲುವಿಗೆ ಮ್ಯಾಜಿಕ್ ನಂಬರ್ 42 ಅವಶ್ಯಕತೆ ಇದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬೆಜೆಪಿಯಿಂದ  39, ಕಾಂಗ್ರೆಸ್ 33, ಜೆಡಿಎಸ್ 1, AIMIN 3 ಹಾಗೂ 6ಜನ ಪಕ್ಷೇತರರು ಆಯ್ಕೆಯಾಗಿದ್ದರು.

ಇದನ್ನು ಓದಿ: ತಾರಕಕ್ಕೇರಿದ ಮಳಲಿ ಮಂದಿರ ಮಸೀದಿ ಸಮರ! ಮಸೀದಿಯನ್ನು ಬಿಟ್ಟು ಕೊಡುತ್ತಾರೆ ಎಂಬ ಕನಸು ಕಾಣಬೇಡಿ: ಅಬ್ದುಲ್ ಮಜೀದ್

6 ಪಕ್ಷೇತರ ಅಭ್ಯರ್ಥಿಗಳಲ್ಲಿ ಮೂವರು ಬಿಜೆಪಿಗೆ ಸೇರ್ಪಡೆ ಹಿನ್ನೆಲೆ ಬಿಜೆಪಿ ಬಲ 42 ಆಗಿದೆ. ಪಕ್ಷೇತರರಾಗಿದ್ದ ದುರ್ಗಮ್ಮ ಬೀಜವಾಡ, ಚಂದ್ರಿಕಾ ಮೇಸ್ತ್ರಿ ಹಾಗೂ ಕಿಷನ್ ಬೆಳಗಾವಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಪ್ರದೀಪ ಶೆಟ್ಟರ ಹಾಗೂ ಎಸ್.ವಿ. ಸಂಕನೂರ ಶೇಷ ಮತ ಚಲಾಯಿಸಲಿದ್ದಾರೆ. ಈ ಮೂಲಕ ಪಾಲಿಕೆ ಬಿಜೆಪಿ ಸದಸ್ಯರ ಬಲ 42 ವಿಶೇಷ ಜನಪ್ರತಿನಿಧಿಗಳ ಮತ 6 ಒಟ್ಟು ಬಿಜೆಪಿಗೆ ಸಲ್ಲಲಿವೆ  ಒಟ್ಟ 48 ಮತಗಳು ಬಿಜೆಪಿ ಬೀಳಲಿದ್ದು, ಬಿಜೆಪಿ ಸ್ಪಷ್ಟ ಬಹುಮತದತ್ತ ಸಾಗಲಿದೆ.  ಇನ್ನು ಕಾಂಗ್ರೆಸ್, ಜೆಡಿಎಸ್, ಪಕ್ಷೇತರರು ಒಟ್ಟಾ ಸೇರಿದರೂ ಬಿಜೆಪಿಯನ್ನ ಮಣಿಸೋದು ಕನಸಿನ ಮಾತಾಗಿದ್ದು, ಕಾಂಗ್ರೆಸ್, ಜೆಡಿಎಸ್ ಪಕ್ಷದ ಸದಸ್ಯರು ಒಳಹೊಡೆತ ಕೊಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:53 am, Sat, 28 May 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?