AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi: ಹೋಳಿ ಹುಣ್ಣಿಮೆ ನಿಮಿತ್ತ ಧಾರವಾಡದಲ್ಲಿ ಇಂದು ಹಲಗಿ ಹಬ್ಬ: 5000 ಕ್ಕೂ ಹೆಚ್ಚು ಯುವಕರು ಭಾಗಿ

Halagi Habba: ಹೋಳಿ ಹುಣ್ಣಿಮೆ ನಿಮಿತ್ತ ಪ್ರತಿವರ್ಷ ಈ ವರ್ಷವು "ಹಲಗಿ ಹಬ್ಬ"ವನ್ನು ಇಂದು (ಮಾ.5) ಧಾರವಾಡದಲ್ಲಿ ಆಯೋಜಿಸಲಾಗಿದೆ.

Holi: ಹೋಳಿ ಹುಣ್ಣಿಮೆ ನಿಮಿತ್ತ ಧಾರವಾಡದಲ್ಲಿ ಇಂದು ಹಲಗಿ ಹಬ್ಬ: 5000 ಕ್ಕೂ ಹೆಚ್ಚು ಯುವಕರು ಭಾಗಿ
ಹುಬ್ಬಳ್ಳಿ ಹಲಗಿ ಹಬ್ಬ
ವಿವೇಕ ಬಿರಾದಾರ
|

Updated on:Mar 05, 2023 | 7:52 AM

Share

ಹುಬ್ಬಳ್ಳಿ: ಹೋಳಿ ಹುಣ್ಣಿಮೆ ನಿಮಿತ್ತ ಪ್ರತಿವರ್ಷ ಹುಬ್ಬಳ್ಳಿ-ಧಾರವಾಡದಲ್ಲಿ (Hubli-Dharwad) ಹಲಗಿ ಹಬ್ಬವನ್ನು (Halagi Habba) ಆಯೋಜಿಸಲಾಗುತ್ತದೆ. ಅದರಂತೆ ಈ ವರ್ಷವು “ಹಲಗಿ ಹಬ್ಬ”ವನ್ನು ಇಂದು (ಮಾ.5) ಧಾರವಾಡದಲ್ಲಿ ಆಯೋಜಿಸಲಾಗಿದೆ. ಈ ಹಲಗಿ ಹಬ್ಬವನ್ನು ಶನಿವಾರ (ಮಾ.4) ರಂದು ಧಾರವಾಡದ (Dharwad) ಕಾಮನಕಟ್ಟಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಧ್ವಜಾಹರಣ ಮೂಲಕ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಸ್ವಮೀಜಿ ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಿದರು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC)ಯ ಕೌನ್ಸಿಲರ್​​ ಮತ್ತು ಸಂಯೋಜಕ ಶಂಕರ್​ ಶೇಲ್ಕೆ ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ (Pralhad Joshi), ಶಾಸಕರಾದ ಅರವಿಂದ ಬೆಲ್ಲದ (Arvind Bellad), ಅಮೃತ್​ ದೇಸಾಯಿ (Amrut Desai) ಮುಖ್ಯ ಅತಿಥಿಗಳಾಗಿ ಭಾಗವಿಹಿಸಿದ್ದರು. ವಿವಿಧ ತಂಡಕ್ಕೆ ಸೇರಿದ 5,000 ಕ್ಕೂ ಹೆಚ್ಚು ಯುವಕರು ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಹಲಗಿ ಹಬ್ಬದ ಮೆರವಣಿಗೆಯಲ್ಲಿ ವಿವಿಧ ರೀತಿಯ ಹಲಗಿ ಮತ್ತು ಡ್ರಮ್ಸ್​​ ಕಾಣಸಿಗಲಿದ್ದು, ನಗರದ ಬಹುತೇಕ ಓಣಿಗಳಲ್ಲಿ ಮೆರವಣಿಗೆ ಸಾಗುತ್ತದೆ.

ವರ್ಷಕ್ಕೆ ಒಂದು ಬಾರಿ ಆಯೋಜಿಸಲಾಗುವ ಈ ಹಲಗಿ ಹಬ್ಬ ಸಾಕಷ್ಟು ವಿಜೃಂಭಣೆಯಿಂದ ಕೂಡಿರುತ್ತದೆ. ಈ ಮೆರವಣೆಗೆ ಸಾಯಂಕಾಲ ಪ್ರಾರಂಭವಾಗುತ್ತದೆ. ನೃತ್ಯ ಕಲಾ ತಂಡಗಳು, ಗೊಂಬೆ ಕುಣಿತ ಹೀಗೆ ವಿವಿಧ ವಾದಕರು ಭಾಗಿಯಾಗಿರುತ್ತಾರೆ. ಜಿಲ್ಲೆಯ ಸುತ್ತಮುತ್ತಲಿನ ವಾದಕರು ಇದರಲ್ಲಿ ಭಾಗಿಯಾಗಿರುತ್ತಾರೆ. ಹಲಗಿ ಹಬ್ಬವನ್ನು ನೋಡಲು ಸಾಕಷ್ಟು ಜನರು ಸೇರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:36 am, Sun, 5 March 23

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ