AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi: ಹೋಳಿ ಹುಣ್ಣಿಮೆ ನಿಮಿತ್ತ ಧಾರವಾಡದಲ್ಲಿ ಇಂದು ಹಲಗಿ ಹಬ್ಬ: 5000 ಕ್ಕೂ ಹೆಚ್ಚು ಯುವಕರು ಭಾಗಿ

Halagi Habba: ಹೋಳಿ ಹುಣ್ಣಿಮೆ ನಿಮಿತ್ತ ಪ್ರತಿವರ್ಷ ಈ ವರ್ಷವು "ಹಲಗಿ ಹಬ್ಬ"ವನ್ನು ಇಂದು (ಮಾ.5) ಧಾರವಾಡದಲ್ಲಿ ಆಯೋಜಿಸಲಾಗಿದೆ.

Holi: ಹೋಳಿ ಹುಣ್ಣಿಮೆ ನಿಮಿತ್ತ ಧಾರವಾಡದಲ್ಲಿ ಇಂದು ಹಲಗಿ ಹಬ್ಬ: 5000 ಕ್ಕೂ ಹೆಚ್ಚು ಯುವಕರು ಭಾಗಿ
ಹುಬ್ಬಳ್ಳಿ ಹಲಗಿ ಹಬ್ಬ
Follow us
ವಿವೇಕ ಬಿರಾದಾರ
|

Updated on:Mar 05, 2023 | 7:52 AM

ಹುಬ್ಬಳ್ಳಿ: ಹೋಳಿ ಹುಣ್ಣಿಮೆ ನಿಮಿತ್ತ ಪ್ರತಿವರ್ಷ ಹುಬ್ಬಳ್ಳಿ-ಧಾರವಾಡದಲ್ಲಿ (Hubli-Dharwad) ಹಲಗಿ ಹಬ್ಬವನ್ನು (Halagi Habba) ಆಯೋಜಿಸಲಾಗುತ್ತದೆ. ಅದರಂತೆ ಈ ವರ್ಷವು “ಹಲಗಿ ಹಬ್ಬ”ವನ್ನು ಇಂದು (ಮಾ.5) ಧಾರವಾಡದಲ್ಲಿ ಆಯೋಜಿಸಲಾಗಿದೆ. ಈ ಹಲಗಿ ಹಬ್ಬವನ್ನು ಶನಿವಾರ (ಮಾ.4) ರಂದು ಧಾರವಾಡದ (Dharwad) ಕಾಮನಕಟ್ಟಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಧ್ವಜಾಹರಣ ಮೂಲಕ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಸ್ವಮೀಜಿ ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಿದರು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC)ಯ ಕೌನ್ಸಿಲರ್​​ ಮತ್ತು ಸಂಯೋಜಕ ಶಂಕರ್​ ಶೇಲ್ಕೆ ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ (Pralhad Joshi), ಶಾಸಕರಾದ ಅರವಿಂದ ಬೆಲ್ಲದ (Arvind Bellad), ಅಮೃತ್​ ದೇಸಾಯಿ (Amrut Desai) ಮುಖ್ಯ ಅತಿಥಿಗಳಾಗಿ ಭಾಗವಿಹಿಸಿದ್ದರು. ವಿವಿಧ ತಂಡಕ್ಕೆ ಸೇರಿದ 5,000 ಕ್ಕೂ ಹೆಚ್ಚು ಯುವಕರು ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಹಲಗಿ ಹಬ್ಬದ ಮೆರವಣಿಗೆಯಲ್ಲಿ ವಿವಿಧ ರೀತಿಯ ಹಲಗಿ ಮತ್ತು ಡ್ರಮ್ಸ್​​ ಕಾಣಸಿಗಲಿದ್ದು, ನಗರದ ಬಹುತೇಕ ಓಣಿಗಳಲ್ಲಿ ಮೆರವಣಿಗೆ ಸಾಗುತ್ತದೆ.

ವರ್ಷಕ್ಕೆ ಒಂದು ಬಾರಿ ಆಯೋಜಿಸಲಾಗುವ ಈ ಹಲಗಿ ಹಬ್ಬ ಸಾಕಷ್ಟು ವಿಜೃಂಭಣೆಯಿಂದ ಕೂಡಿರುತ್ತದೆ. ಈ ಮೆರವಣೆಗೆ ಸಾಯಂಕಾಲ ಪ್ರಾರಂಭವಾಗುತ್ತದೆ. ನೃತ್ಯ ಕಲಾ ತಂಡಗಳು, ಗೊಂಬೆ ಕುಣಿತ ಹೀಗೆ ವಿವಿಧ ವಾದಕರು ಭಾಗಿಯಾಗಿರುತ್ತಾರೆ. ಜಿಲ್ಲೆಯ ಸುತ್ತಮುತ್ತಲಿನ ವಾದಕರು ಇದರಲ್ಲಿ ಭಾಗಿಯಾಗಿರುತ್ತಾರೆ. ಹಲಗಿ ಹಬ್ಬವನ್ನು ನೋಡಲು ಸಾಕಷ್ಟು ಜನರು ಸೇರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:36 am, Sun, 5 March 23

ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ