ಹು-ಧಾ ಮೇಯರ್-ಉಪಮೇಯರ್ ಗದ್ದುಗೆಗಾಗಿ ಕೈ, ಕಮಲ ಕಸರತ್ತು, ಬಿಜೆಪಿಗೆ ಅಡ್ಡಮತದಾನದ ಭೀತಿ

ಹು-ಧಾ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಸ್ಥಾನಕ್ಕೆ ಇಂದು (ಜೂನ್ 20) ಚುನಾವಣೆ ನಡೆಯಲಿದೆ. ಇದೇ ಮೊದಲ ಬಾರಿಗೆ ಧಾರವಾಡ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ.‌

ಹು-ಧಾ ಮೇಯರ್-ಉಪಮೇಯರ್ ಗದ್ದುಗೆಗಾಗಿ ಕೈ, ಕಮಲ ಕಸರತ್ತು, ಬಿಜೆಪಿಗೆ ಅಡ್ಡಮತದಾನದ ಭೀತಿ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
Follow us
| Updated By: ಆಯೇಷಾ ಬಾನು

Updated on:Jun 20, 2023 | 7:12 AM

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ(Hubli Dharwad) ಪಾಲಿಕೆಯ ಆಡಳಿತ ಹಲವಾರು ವರ್ಷಗಳಿಂದ ಬಿಜೆಪಿ ಕೈಯಲ್ಲಿಯೇ ಇದೆ. ಈ ಸಲವೂ ಬಿಜೆಪಿಯ ಈರೇಶ ಅಂಚಟಗೇರಿ ಮೇಯರ್ ಹಾಗೂ ಉಮಾ ಮುಕ್ಕುಂದ ಉಪಮೇಯರ್ ಆಗಿದ್ದರು. ಅವರ ಅವಧಿ ಇದೇ ಮೇ 27ಕ್ಕೆ ಮುಕ್ತಾಯಗೊಂಡಿದ್ದು, ಹು-ಧಾ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಸ್ಥಾನಕ್ಕೆ ಇಂದು (ಜೂನ್ 20) ಚುನಾವಣೆ ನಡೆಯಲಿದೆ(Hubli Dharwad Mayor Election) . ಇದೇ ಮೊದಲ ಬಾರಿಗೆ ಧಾರವಾಡ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ.‌

ಬೆಳಗ್ಗೆ 9 ರಿಂದ 11 ಗಂಟೆ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಮಧ್ಯಾಹ್ನ 1ಕ್ಕೆ ಚುನಾವಣೆ ನಡೆಯಲಿದೆ. ಚುನಾವಣೆಯನ್ನು ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ನಡೆಸಲಿದ್ದಾರೆ. 82 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿಯಿಂದ 39, ಕಾಂಗ್ರೆಸ್‌ನಿಂದ 33, ಎಐಎಂಐಎಂನಿಂದ 3, ಜೆಡಿಎಸ್ 1 ಹಾಗೂ 6 ಜನ ಪಕ್ಷೇತರರು ಚುನಾಯಿತರಾಗಿದ್ದಾರೆ. ಸದ್ಯ ಬಿಜೆಪಿಯವರು ಮೇಯರ್-ಉಪಮೇಯರ್ ಆಗಿದ್ದಾರೆ. ಕಳೆದ ಬಾರಿ ಮೇಯರ್ – ಉಪ ಮೇಯರ್ ಆಯ್ಕೆ ಚುನಾವಣೆ ವೇಳೆ ಐವರು ಪಕ್ಷೇತರರು, ಜೆಡಿಎಸ್‌ನ ಒಬ್ಬರು ಬಿಜೆಪಿಗೆ ಮತ ಹಾಕಿದ್ದರು. ಓರ್ವ ಪಕ್ಷೇತರ ಸದಸ್ಯೆ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದರು.‌ ಪಾಲಿಕೆಯ ಮೇಯರ-ಉಪ ಮೇಯರ್ ಆಯ್ಕೆ ಚುನಾವಣೆಯಲ್ಲಿ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಮತಾಧಿಕಾರ ಹೊಂದಿದ್ದಾರೆ. ಹೀಗಾಗಿ ಈ ಬಾರಿ ಕಾಂಗ್ರೆಸ್ ಶತಾಯಗತಾಯ ಸರ್ಕಸ್ ನಡೆಸಿದೆ.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದುಕೊಂಡ ಅಕ್ಕಿ ರಾಜಕೀಯ: ರಾಜ್ಯಾದ್ಯಂತ ಇಂದು ಕಾಂಗ್ರೆಸ್‌, ಬಿಜೆಪಿ ಪ್ರತಿಭಟನೆ

ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು

ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ. ಇನ್ನು ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದರೂ ಅಡ್ಡಮತದಾನದ ಭೀತಿ ಎದುರಾಗಿದೆ. ಈ ಕಾರಣಕ್ಕೆ ಬಿಜೆಪಿ ತನ್ನ ಸದಸ್ಯರನ್ನು ದಾಂಡೇಲಿ ರೆಸಾರ್ಟ್‌‌ನಲ್ಲಿಟ್ಟಿದೆ. ಸದಸ್ಯರು ರೆಸಾರ್ಟ್‌ನಿಂದಲೇ ನೇರವಾಗಿ ಮತದಾನಕ್ಕೆ ಆಗಮಿಸಲಿದ್ದಾರೆ. ಬಿಜೆಪಿಯಿಂದ ವಿಪ್ ಜಾರಿ ಮಾಡಲಾಗಿದೆ.

ಮಹಾನಗರ ಪಾಲಿಕೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಧಾರವಾಡ ಕಚೇರಿಯಲ್ಲಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಯುತ್ತಿದೆ. ಇಷ್ಟು ವರ್ಷಗಳ ಕಾಲ ಹುಬ್ಬಳ್ಳಿಯಲ್ಲಿ ಪಾಲಿಕೆ ಸಾಮಾನ್ಯ ಸಭೆ ಮತ್ತು ಚುನಾವಣೆಗಳು ನಡೆಯುತ್ತಿದ್ದವು. ಆದರೆ, ಹುಬ್ಬಳ್ಳಿಯ ಪಾಲಿಕೆಯ ಸಭಾಂಗಣದ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಇಡೀ ಆಡಳಿತದ ಪ್ರಮುಖ ಸಭೆ, ಚುನಾವಣೆಗಳೂ ಧಾರವಾಡದಲ್ಲಿಯೇ ನಡೆಯುತ್ತಿವೆ.

ಹುಬ್ಬಳ್ಳಿ-ಧಾರವಾಡಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:12 am, Tue, 20 June 23

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ