AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಿದ ​ಹು-ಧಾ ಪಾಲಿಕೆ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿ ಎಲ್ಲ ಜಯಂತಿಗೂ ಅವಕಾಶ ಮಾಡಿಕೊಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಮಾಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಹೇಳಿದ್ದಾರೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಿದ ​ಹು-ಧಾ ಪಾಲಿಕೆ
ಹುಬ್ಬಳ್ಳಿ ಈದ್ಗಾ ಮೈದಾನ
TV9 Web
| Updated By: ವಿವೇಕ ಬಿರಾದಾರ|

Updated on:Nov 09, 2022 | 10:46 PM

Share

​ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ (Hubli Iidga Maidan) ಟಿಪ್ಪು ಜಯಂತಿ (Tippu Jayanti) ಸೇರಿ ಎಲ್ಲ ಜಯಂತಿಗೂ ಅವಕಾಶ ಮಾಡಿಕೊಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಮಾಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಹೇಳಿದ್ದಾರೆ. ಇಂದು (ನ.9) ವಿರೋಧ ಪಕ್ಷದ ನಾಯಕರು, ಆಯುಕ್ತರೊಂದಿಗೆ ಮೇಯರ್ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಅವರು ಟಿಪ್ಪು , ಕನಕದಾಸ, ಒನಕೆ ಓಬವ್ವ ಜಯಂತಿ ಆಚರಣೆ ಸಂಘಟಕರು ಮನವಿ ಮಾಡಿದ್ದರು. ಹೀಗಾಗಿ ಎಲ್ಲ ಜಯಂತಿಗೂ ಅವಕಾಶ ಮಾಡಿಕೊಟ್ಟಿದ್ದೇವೆ ಎಂದ ತಿಳಿಸಿದ್ದಾರೆ.

ಮನವಿ ಪತ್ರಗಳ ಸುರಿಮಳೆಯೇ ಹರಿದು ಬಂದಿತ್ತು

ಹುಬ್ಬಳ್ಳಿ ಧಾರಾವಾಡ ಮಹಾನಗರ ಪಾಲಿಕೆಗೆ ದೊಡ್ಡ ಸಂಕಷ್ಟವೇ ಎದುರಾಗಿತ್ತು. ಗಣೇಶ ಹಬ್ಬದ ಸಮಯದಲ್ಲಿ ಗಣೇಶೋತ್ಸವಕ್ಕೆ ಹುಬ್ಬಳ್ಳಿ ಮೈದಾನದಲ್ಲಿ ಅವಕಾಶ ಕೊಟ್ಟ ಬೆನ್ನಲ್ಲೇ ಈಗ ಪ್ರತಿ ಆಚರಣೆಗಳಿಗೂ ಅವಕಾಶ ಕೇಳಿ ಅನೇಕ ಸಂಘಟನೆಗಳು ಮನವಿ ಪತ್ರ ಸಲ್ಲಿಸುತ್ತಿದ್ದರು. ಟಿಪ್ಪು ಜಯಂತಿ, ಕನಕ ಜಯಂತಿ ನಡುವೆ ಈಗ ಪಾಲಿಕೆಗೆ ಅನೇಕ ಬೇಡಿಕೆಗಳು ಬಂದಿದ್ದವು.

ಮುಂಬರುವ ಮಾರ್ಚ್ ನಲ್ಲಿ ರತಿ, ಮನ್ಮಥನ ಪ್ರತಿಷ್ಠಾಪನೆಗೆ ಅವಕಾಶ ಕೇಳಿ ಹುಬ್ಬಳ್ಳಿ ಧಾರಾವಾಡ ಮಹಾನಗರ ಪಾಲಿಕೆಗೆ ಮನವಿ ಪತ್ರ ಸಲ್ಲಿಸಲಾಗಿತ್ತು. ಗಜಾನನ ಮಹಾಮಂಡಳಿ ಹೋಳಿ ಆಚರಣೆಗೆ ಅವಕಾಶ ಕೇಳಿ ಮನವಿ ಸಲ್ಲಿಸಲಾಗಿತ್ತು. ಮತ್ತೊಂದೆಡೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ನವೆಂಬರ್ 11ರಂದು ಈದ್ಗಾ ಮೈದಾನದಲ್ಲಿ ಒನಕೆ ಓಬವ್ಬ ಜಯಂತಿಗೆ ಅವಕಾಶ ಕೇಳಿ ಮನವಿ‌‌ ಸಲ್ಲಿಸಿತ್ತು.

ಟಿಪ್ಪು ಜಯಂತಿಗೆ ಅವಕಾಶ ಕೇಳಿದ ಬೆನ್ನಲ್ಲೆ ವಿವಿಧ ಸಂಘಟಕರು ಈದ್ಗಾ ಮೈದಾನದಲ್ಲಿ ಅವಕಾಶ ಕೇಳಿ‌ ಮನವಿ ಸಲ್ಲಿಸಿದ್ದರು. ಗಣೇಶೋತ್ಸವ ಆಚರಣೆ ಬಳಿಕ ಟಿಪ್ಪು ಜಯಂತಿಗೂ ಅವಕಾಶ ಕೇಳಿ ಸಂಘಟನೆಗಳೂ ಮನವಿ ಮಾಡಿದ್ದವು. ಇದರ ನಡುವೆ ಈಗ ಪಾಲಿಕೆಗೆ ಮನವಿಗಳು ಹೆಚ್ಚಾಗಿದ್ದು ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆ ಗೊಂದಲಕ್ಕೀಡಾಗಿತ್ತು. ಸದ್ಯ ಈ ಗೊಂದಲಗಳಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕ ತೆರೆ ಎಳೆದಿದೆ.

ಈದ್ಗಾ ಮೈದಾನಕ್ಕೆ ಕಿತ್ತೂರು ಚೆನ್ಮಮ್ಮ ಮೈದಾನ ಎಂದು ನಾಮಕರಣಕ್ಕೆ ಬೇಡಿಕೆ

ಇನ್ನು ಇದೆಲ್ಲದರ ನಡುವೆ ಈದ್ಗಾ ಮೈದಾನದಲ್ಲಿ ಭಗವಾ ಧ್ವಜ ಹಾರಾಟ ಮಾಡಲಾಗುತ್ತಿರುವ ರೀತಿಯ ಎಡಿಟೆಟ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ವಿಡಿಯೋ ಎಡಿಟ್ ಮಾಡಿ ಕಿತ್ತೂರ ಚೆನ್ನಮ್ಮ ಮೈದಾನ ಎಂದು ನಾಮಕರಣ ಮಾಡಿದ್ದಾರೆಂದು ಸಂದೇಶ ನೀಡುವ ವಿಡಿಯೋ ವೈರಲ್‌ ಆಗುತ್ತಿದೆ. ಸದ್ಯ ಟಿಪ್ಪು ಜಯಂತಿಗೆ ಅವಕಾಶಕ್ಕೆ ಮನವಿ ಮಾಡಿದ ಬೆನ್ನಲ್ಲೆ ಇಂತಹದೊಂದು ವಿಡಿಯೋ ವೈರಲ್ ಆಗುತ್ತಿದೆ.

Published On - 7:30 pm, Wed, 9 November 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!