AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಧಾರಾವಾಡ ಮಹಾನಗರ ಪಾಲಿಕೆಗೆ ದೊಡ್ಡ ಸಂಕಷ್ಟ: ಮನವಿ ಪತ್ರಗಳ ಸುರಿಮಳೆ, ಈದ್ಗಾ ಮೈದಾನಕ್ಕೆ ಕಿತ್ತೂರು ಚೆನ್ಮಮ್ಮ ಹೆಸರಿಡಲು ಬೇಡಿಕೆ

ಈದ್ಗಾ ಮೈದಾನದಲ್ಲಿ ಭಗವಾ ಧ್ವಜ ಹಾರಾಟ ಮಾಡಲಾಗುತ್ತಿರುವ ರೀತಿಯ ಎಡಿಟೆಟ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಟಿಪ್ಪು ಜಯಂತಿ, ಕನಕ ಜಯಂತಿ ನಡುವೆ ಈಗ ಪಾಲಿಕೆಗೆ ಅನೇಕ ಬೇಡಿಕೆಗಳು ಬಂದಿವೆ.

ಹುಬ್ಬಳ್ಳಿ ಧಾರಾವಾಡ ಮಹಾನಗರ ಪಾಲಿಕೆಗೆ ದೊಡ್ಡ ಸಂಕಷ್ಟ: ಮನವಿ ಪತ್ರಗಳ ಸುರಿಮಳೆ, ಈದ್ಗಾ ಮೈದಾನಕ್ಕೆ ಕಿತ್ತೂರು ಚೆನ್ಮಮ್ಮ ಹೆಸರಿಡಲು ಬೇಡಿಕೆ
ಹುಬ್ಬಳ್ಳಿ ಈದ್ಗಾ ಮೈದಾನ
TV9 Web
| Updated By: ಆಯೇಷಾ ಬಾನು|

Updated on:Nov 09, 2022 | 2:40 PM

Share

ಹುಬ್ಬಳ್ಳಿ: ಹುಬ್ಬಳ್ಳಿ ಧಾರಾವಾಡ ಮಹಾನಗರ ಪಾಲಿಕೆಗೆ ದೊಡ್ಡ ಸಂಕಷ್ಟವೇ ಎದುರಾಗಿದೆ. ಗಣೇಶ ಹಬ್ಬದ ಸಮಯದಲ್ಲಿ ಗಣೇಶೋತ್ಸವಕ್ಕೆ ಹುಬ್ಬಳ್ಳಿ ಮೈದಾನದಲ್ಲಿ ಅವಕಾಶ ಕೊಟ್ಟ ಬೆನ್ನಲ್ಲೇ ಈಗ ಪ್ರತಿ ಆಚರಣೆಗಳಿಗೂ ಅವಕಾಶ ಕೇಳಿ ಅನೇಕ ಸಂಘಟನೆಗಳು ಮನವಿ ಪತ್ರ ಸಲ್ಲಿಸುತ್ತಿದ್ದಾರೆ. ಟಿಪ್ಪು ಜಯಂತಿ, ಕನಕ ಜಯಂತಿ ನಡುವೆ ಈಗ ಪಾಲಿಕೆಗೆ ಅನೇಕ ಬೇಡಿಕೆಗಳು ಬಂದಿವೆ.

ಮುಂಬರುವ ಮಾರ್ಚ್ ನಲ್ಲಿ ರತಿ, ಮನ್ಮಥನ ಪ್ರತಿಷ್ಠಾಪನೆಗೆ ಅವಕಾಶ ಕೇಳಿ ಹುಬ್ಬಳ್ಳಿ ಧಾರಾವಾಡ ಮಹಾನಗರ ಪಾಲಿಕೆಗೆ ಮನವಿ ಪತ್ರ ಸಲ್ಲಿಸಲಾಗಿದೆ. ಗಜಾನನ ಮಹಾಮಂಡಳಿ ಹೋಳಿ ಆಚರಣೆಗೆ ಅವಕಾಶ ಕೇಳಿ ಇಂದು ಮನವಿ ಸಲ್ಲಿಸಿದೆ. ಮತ್ತೊಂದೆಡೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ನವೆಂಬರ್ 11ರಂದು ಈದ್ಗಾ ಮೈದಾನದಲ್ಲಿ ಒನಕೆ ಓಬವ್ಬ ಜಯಂತಿಗೆ ಅವಕಾಶ ಕೇಳಿ ಮನವಿ‌‌ ಸಲ್ಲಿಸಿದೆ.

ಟಿಪ್ಪು ಜಯಂತಿಗೆ ಅವಕಾಶ ಕೇಳಿದ ಬೆನ್ನಲ್ಲೆ ವಿವಿಧ ಸಂಘಟಕರು ಈದ್ಗಾ ಮೈದಾನದಲ್ಲಿ ಅವಕಾಶ ಕೇಳಿ‌ ಮನವಿ ಸಲ್ಲಿಸಿದ್ದಾರೆ. ಗಣೇಶೋತ್ಸವ ಆಚರಣೆ ಬಳಿಕ ಟಿಪ್ಪು ಜಯಂತಿಗೂ ಅವಕಾಶ ಕೇಳಿ ಸಂಘಟನೆಗಳೂ ಮನವಿ ಮಾಡಿದ್ದವು. ಇದರ ನಡುವೆ ಈಗ ಪಾಲಿಕೆಗೆ ಮನವಿಗಳು ಹೆಚ್ಚಾಗಿದ್ದು ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆ ಗೊಂದಲಕ್ಕೀಡಾಗಿದೆ.

ಇದನ್ನೂ ಓದಿ: Fake passport: ಕೊಲೆ ಪ್ರಕರಣದ ತನಿಖೆ ವೇಳೆ ಪಾಸ್​​ಪೋರ್ಟ್ ಜಾಲ ಬೆಳಕಿಗೆ, ಗ್ಯಾಂಗ್ ಸೆರೆ

ಈದ್ಗಾ ಮೈದಾನಕ್ಕೆ ಕಿತ್ತೂರು ಚೆನ್ಮಮ್ಮ ಮೈದಾನ ಎಂದು ನಾಮಕರಣಕ್ಕೆ ಬೇಡಿಕೆ

ಇನ್ನು ಇದೆಲ್ಲದರ ನಡುವೆ ಈದ್ಗಾ ಮೈದಾನದಲ್ಲಿ ಭಗವಾ ಧ್ವಜ ಹಾರಾಟ ಮಾಡಲಾಗುತ್ತಿರುವ ರೀತಿಯ ಎಡಿಟೆಟ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ವಿಡಿಯೋ ಎಡಿಟ್ ಮಾಡಿ ಕಿತ್ತೂರ ಚೆನ್ನಮ್ಮ ಮೈದಾನ ಎಂದು ನಾಮಕರಣ ಮಾಡಿದ್ದಾರೆಂದು ಸಂದೇಶ ನೀಡುವ ವಿಡಿಯೋ ವೈರಲ್‌ ಆಗುತ್ತಿದೆ. ಸದ್ಯ ಟಿಪ್ಪು ಜಯಂತಿಗೆ ಅವಕಾಶಕ್ಕೆ ಮನವಿ ಮಾಡಿದ ಬೆನ್ನಲ್ಲೆ ಇಂತಹದೊಂದು ವಿಡಿಯೋ ವೈರಲ್ ಆಗುತ್ತಿದೆ.

Published On - 1:05 pm, Wed, 9 November 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!