AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nationl Youth Fest: ಯುವಜನೋತ್ಸವ ಅತಿಥಿಗಳಿಗೆ ನೋಂದಣಿ ಕಿಟ್; ಪ್ರಧಾನಿ ಮೋದಿಗಾಗಿ ತಯಾರಾಗಿದೆ ವಿಶೇಷ ರಾಷ್ಟ್ರ ಧ್ವಜ

Hubli-Dharwad Youth festival: ರಾಷ್ಟ್ರೀಯ ಯುವಜನೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸುವ ಅತಿಥಿಗಳಿಗೆ ಕಾಣಿಕೆಯಾಗಿ ನೀಡಲು ಗರಗ ಮತ್ತು ಬೆಂಗೇರಿ ಖಾದಿ ಕೇಂದ್ರಗಳಲ್ಲಿ ಸುಮಾರು 7,500 ಕ್ಕೂ ಹೆಚ್ಚು ಖಾದಿ ಧ್ವಜ ತಯಾರಾಗುತ್ತಿವೆ.

Nationl Youth Fest: ಯುವಜನೋತ್ಸವ ಅತಿಥಿಗಳಿಗೆ ನೋಂದಣಿ ಕಿಟ್; ಪ್ರಧಾನಿ ಮೋದಿಗಾಗಿ ತಯಾರಾಗಿದೆ ವಿಶೇಷ ರಾಷ್ಟ್ರ ಧ್ವಜ
ಯುವಜನೋತ್ಸವ ಅತಿಥಿಗಳಿಗೆ ನೋಂದಣಿ ಕಿಟ್
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 09, 2023 | 8:32 PM

ಧಾರವಾಡ: ಉತ್ತರ ಕರ್ನಾಟಕದ ಐತಿಹಾಸಿಕ ನಗರವಾಗಿರುವ ಧಾರವಾಡದಲ್ಲಿ (Dharwad) ಜನವರಿ 12 ರಿಂದ 16 ರ ವರೆಗೆ ಜರುಗುತ್ತಿರುವ 26 ನೇ ರಾಷ್ಟ್ರೀಯ ಯುವಜನೋತ್ಸವದಲ್ಲಿ (National Youth Festival) ದೇಶದ ಸುಮಾರು 8 ಕೇಂದ್ರಾಡಳಿತ ಪ್ರದೇಶ ಹಾಗೂ 28 ರಾಜ್ಯಗಳಿಂದ ಯುವ ಪ್ರತಿಭೆಗಳು, ಪ್ರತಿಭಾವಂತ ಕಲಾವಿದರು ಮತ್ತು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿರುವ ಹಿರಿಯ ಕಲಾಜೀವಿಗಳು ಭಾಗವಹಿಸುತ್ತಿದ್ದಾರೆ. ಕರ್ನಾಟಕದ ಭವ್ಯ ಪರಂಪರೆಯನ್ನು ಮತ್ತು ಉತ್ತರ ಕರ್ನಾಟಕದ ವಿಶೇಷತೆಗಳನ್ನು ಪರಿಚಯಿಸುವ ದೃಷ್ಟಿಯಿಂದ ಧಾರವಾಡ ಜಿಲ್ಲಾಡಳಿತವು ಅತಿಥಿಗಳನ್ನು ಸ್ವಾಗತಿಸಲು ವಿಶೇಷ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಬೆಂಗೇರಿ, ಗರಗನಲ್ಲಿ ತಯಾರಾಗುತ್ತಿವೆ ರಾಷ್ಟ್ರ ಧ್ವಜ

ಧಾರವಾಡ ರಾಷ್ಟ್ರೀಯ ಯುವಜನೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸುವ 28 ರಾಜ್ಯ ಹಾಗೂ 8 ಕೇಂದ್ರಾಡಳಿತ ಪ್ರದೇಶಗಳ ಅತಿಥಿಗಳು ಮತ್ತು ರಾಜ್ಯ ಸರ್ಕಾರದ, ಕೇಂದ್ರ ಸರ್ಕಾರದ ಸಚಿವರು, ಉನ್ನತ ಅಧಿಕಾರಿಗಳಿಗೆ ಕಾಣಿಕೆಯಾಗಿ ನೀಡಲು ಗರಗ ಮತ್ತು ಬೆಂಗೇರಿ ಖಾದಿ ಕೇಂದ್ರಗಳಲ್ಲಿ ಸುಮಾರು 7,500 ಕ್ಕೂ ಹೆಚ್ಚು ಖಾದಿ ಧ್ವಜ ತಯಾರಿಸಲಾಗುತ್ತಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ಕಾಣಿಕೆಯಾಗಿ ನೀಡಲು ರಾಷ್ಟ್ರಧ್ವಜ ಇರುವ 12 ಇಂಚು ಉದ್ದ, 18 ಇಂಚು ಅಳತೆಯ ಟಿಕ್‍ವುಡ್ ಫ್ರೇಮ್ ಹೊಂದಿರುವ ನೆನಪಿನ ಕಾಣಿಕೆಯನ್ನು ರೂಪಿಸಲಾಗಿದೆ. ಈ ಕಾಣಿಕೆಯನ್ನು ವಿಶೇಷವಾಗಿ ಯಲ್ಲಾಪುರದ ಕಲಾವಿದರು ರೂಪಿಸಿದ್ದಾರೆ.

ಇದನ್ನೂ ಓದಿ:  ಹುಬ್ಬಳ್ಳಿ-ಧಾರವಾಡ ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ನೊಂದಣಿ ಕಡ್ಡಾಯ; ಇಲ್ಲಿದೆ ಲಿಂಕ್

ಯುವಜನೋತ್ಸವದ ಅತಿಥಿಗಳಿಗೆ ನೀಡುವ ನೆನಪಿನ ಕಾಣಿಕೆಯು 4×6 ಅಳತೆಯ ರಾಷ್ಟ್ರಧ್ವಜದೊಂದಿಗೆ 6×9 ಅಳತೆ ಹೊಂದಿದೆ. ಇಡೀ ರಾಷ್ಟ್ರದಲ್ಲಿಯೇ ರಾಷ್ಟ್ರಧ್ವಜಗಳನ್ನು ಅಧಿಕೃತವಾಗಿ ರೂಪಿಸಿ ಪೂರೈಸಲು ಅನುಮತಿ ಹೊಂದಿರುವ ಗರಗ ಮತ್ತು ಬೆಂಗೇರಿ ಖಾದಿ ಕೇಂದ್ರಗಳು ಧಾರವಾಡ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರದಾದ್ಯಂತ ಪಸರಿಸಲು ಈ ಕಾಣಿಕೆಯನ್ನು ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಅತಿಥಿಗಳಿಗೆ ನೀಡುವ ನೋಂದಣಿ ಕಿಟ್​​

ರಾಷ್ಟ್ರೀಯ ಯುವಜನೋತ್ಸವದಲ್ಲಿ ಪಾಲ್ಗೊಳ್ಳುವ ಸುಮಾರು 7,500 ಸ್ಪರ್ಧಾರ್ಥಿಗಳಿಗೆ ಮತ್ತು ಅತಿಥಿಗಳಿಗೆ ನೀಡಲು ವಿಶೇಷವಾದ ನೋಂದಣಿ ಕಿಟ್‍ಗಳನ್ನು ರೂಪಿಸಲಾಗಿದೆ. ವಿಶೇಷವಾಗಿ ಈ ಯುವ ಜನೋತ್ಸವವನ್ನು ಹಸಿರು ಯುವಜನೋತ್ಸವವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ನೋಂದಣಿ ಕಿಟ್‍ದಲ್ಲಿನ ವಸ್ತುಗಳು ಮರುಬಳಕೆಯ ವಸ್ತುಗಳಾಗಿವೆ.

ನೋಂದಣಿ ಕಿಟ್‍ನಲ್ಲಿ ಐಡಿ ಕಾರ್ಡ್, ಮರುಬಳಕೆಯ ಸ್ಟೀಲ್ ವಾಟರ್ ಬಾಟಲ್, ಉತ್ತಮ ಗುಣಮಟ್ಟದ ಬ್ಯಾಗ್, ಸುಮಾರು 8 ಕ್ಕೂ ಹೆಚ್ಚು ದಿನಬಳಕೆಯ ವಸ್ತುಗಳಿರುವ ಸಣ್ಣ ಕಿಟ್, ಯೋಗಾ ಮ್ಯಾಟ್, ಟ್ರ್ಯಾಕ್ ಸೂಟ್, ಯುವಜನೋತ್ಸವ ಮಾಹಿತಿ ಇರುವ ಇವೆಂಟ್ ಮೆನ್ಯೂ, ಕರ್ನಾಟಕ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿ ಪುಸ್ತಕ, ಅರವಿಂದೊ ಟ್ರಸ್ಟ್ ನೀಡಿರುವ ಯೂಥ್ ಆಫ್ ಇಂಡಿಯಾ ಪುಸ್ತಕ ಹಾಗೂ ಮುಖ್ಯವಾಗಿ ಧಾರವಾಡನ್ನು ನೆನಪಿಸುವ, ಗುರುತಿಸುವ ಧಾರವಾಡ ಫೇಡಾ ಬಾಕ್ಸ್ ಹಾಗೂ ಖಾದಿ ಧ್ವಜದ ನೆನಪಿನ ಕಾಣಿಕೆ ಇರುತ್ತದೆ.

ಇದನ್ನೂ ಓದಿ: ಯುವಜನೋತ್ಸವ ವೇಳೆ ಪ್ರಧಾನಿ ಮೋದಿಗೆ ಗಿಫ್ಟ್ ನೀಡಲು ಕೈಯಲ್ಲಿ ಬೇಲೂರು ಶಿಲಾಬಾಲಕಿ ಹಿಡಿದು ನಿಂತಿರುವ ಧಾರವಾಡದ ಯುವಕ

ಯುವಜನೋತ್ಸವ ಸಹಾಯ ಕೇಂದ್ರ

ರಾಷ್ಟ್ರೀಯ ಯುವಜನೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಇತರ ಜಿಲ್ಲೆ ಹಾಗೂ ಅಂತರರಾಜ್ಯಗಳಿಂದ ಅತಿಥಿಗಳು ಆಗಮಿಸುವುದರಿಂದ ಅವರಿಗೆ ಸಾರಿಗೆ, ವಸತಿ, ನೋಂದಣಿ ಸ್ಥಳ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ನೀಡಿ, ತಕ್ಷಣಕ್ಕೆ ಸಹಾಯ ಮಾಡಲು ಅನುಕೂಲವಾಗುವಂತೆ ಸ್ವಾಗತ ಸಮಿತಿಯು ಸಹಾಯ ಕೇಂದ್ರಗಳನ್ನು ತೆರೆದಿದೆ.

ಮುಖ್ಯವಾಗಿ ಧಾರವಾಡ ಮತ್ತು ಹುಬ್ಬಳ್ಳಿ ರೈಲ್ವೆ ನಿಲ್ದಾಣ, ಬಸ್‍ ನಿಲ್ದಾಣ, ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಸಹಾಯ ಕೇಂದ್ರಕ್ಕೆ ಆಗಮಿಸುವ ಅತಿಥಿಗಳನ್ನು ನಿಲ್ದಾಣದಿಂದಲೇ ಸ್ವಾಗತಿಸಲು ಕಲಾ ತಂಡಗಳನ್ನು ಸಹ ನೇಮಿಸಲಾಗಿದೆ.

ಸಹಾಯ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಗಳನ್ನು ನೇಮಿಸಲಾಗಿದ್ದು, ದಿನದ 24 ಗಂಟೆಯೂ ಸಹಾಯ ಕೇಂದ್ರದಲ್ಲಿದ್ದು, ಬರುವ ಅತಿಥಿಗಳಿಗೆ ಅವರು ಸಹಾಯ ನೀಡಲಿದ್ದಾರೆ.

ವರದಿ-ನರಸಿಂಹಮೂರ್ತಿ ಪ್ಯಾಟಿ ಟಿವಿ-9 ಧಾರವಾಡ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:31 pm, Mon, 9 January 23

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ