AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಸಿಲಿಂಡರ್​ ಬ್ಲಾಸ್ಟ್​: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಡಿಸೆಂಬರ್ 22 ರಂದು ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆರು ಜನರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಘಟನೆಯ ನಂತರ ಐದು ಜನರು ಅಯ್ಯಪ್ಪ ಮಾಲೆಯನ್ನು ತೆಗೆದಿದ್ದಾರೆ.

ಹುಬ್ಬಳ್ಳಿ ಸಿಲಿಂಡರ್​ ಬ್ಲಾಸ್ಟ್​: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು
ಸಿಲಿಂಡರ್​ ಸ್ಫೋಟಗೊಂಡ ಸ್ಥಳ, ಮೃತ ಅಯ್ಯಪ್ಪ ಮಾಲಾಧಾರಿ ರಾಜು
ಶಿವಕುಮಾರ್ ಪತ್ತಾರ್
| Edited By: |

Updated on:Dec 27, 2024 | 8:53 AM

Share

ಹುಬ್ಬಳ್ಳಿ, ಡಿಸೆಂಬರ್​ 27: ಸಿಲಿಂಡರ್ ಸ್ಫೋಟಗೊಂಡು ತೀರ್ವವಾಗಿ ಗಾಯಗೊಂಡು ಕಿಮ್ಸ್​ಗೆ (KIMS) ದಾಖಲಾಗಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ (Ayyappa Maladhari) ಚಿಕಿತ್ಸೆ ಫಲಕಾರಿಯಾಗದೆ ಮೃತಪಟಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ. ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಡಿಸೆಂಬರ್​ 22ರಂದು ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಿಕಾರಿಗಳು ಗಾಯಗೊಂಡಿದ್ದರು. 9 ಜನರನ್ನು ಕಿಮ್ಸ್​ಗೆ ದಾಖಲಾಖಲಿಸಲಾಗಿತ್ತು. ಈಗವರೆಗೆ ಮೂವರು ಮೃತಪಟ್ಟಿದ್ದು, ಆರು ಜನರಿಗೆ ಚಿಕಿತ್ಸೆ ಮುಂದುವರೆದಿದೆ.

ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್​ 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ‌ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಬೆಂಗಳೂರಿನಿಂದ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಗುರುವಾರ (ಡಿ.26) ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದರು. ಇಂದು (ಡಿ.27) ಮತ್ತೊಬ್ಬ ಅಯ್ಯಪ್ಪ ಮಾಲಧಾರಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

58 ವರ್ಷದ ನಿಜಲಿಂಗಪ್ಪ ಬೇಪುರಿ, 18 ವರ್ಷದ ಸಂಜಯ್ ಸವದತ್ತಿ, 16 ವರ್ಷದ ರಾಜು ಮೂಗೇರಿ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಲಾಧಾರಿಗಳು ಸಾವನ್ನಪ್ಪಿದ ಹಿನ್ನಲೆಯಲ್ಲಿ ಐವರು ಅಯ್ಯಪ್ಪನ ಮಾಲೆಯನ್ನು ತಗೆದಿದ್ದಾರೆ.

ಅಚ್ಚವ್ವನ ಕಾಲೋನಿಯ ಸನ್ನಿಧಿಯಲ್ಲಿ ಒಟ್ಟು 14 ಜನ ಮಾಲಾಧಾರಿಗಳಿದ್ದರು. ಅದರ ಪೈಕಿ ಸನ್ನಿಧಿಯ ಮೇಲಿನ ಕೋಣೆಯಲ್ಲಿ 9 ಜ‌ನ ಇದ್ದರು, ಕೆಳಗೆ 5 ಜನ ಇದ್ದರು. ಹೀಗಾಗಿ, ಆ ಐದು‌ ಜನರು ಮಾನಸಿಕವಾಗಿ ನೊಂದು ತಾವು ಧರಿಸಿದ್ದ ಮಾಲೆಯನ್ನು ತಗೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:52 am, Fri, 27 December 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!