AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಅರೆಸ್ಟ್: ಆದರೆ ರಿಂಗ್ ಮಾಸ್ಟರ್ ಮಹಾನಾಯಕನೋ ಅಥವಾ ಮೀರ್‌ಸಾದಿಕ್? -ಬಿಜೆಪಿ ಟ್ವೀಟ್

ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ಮೂಲಕ ಹುಬ್ಬಳ್ಳಿಯಲ್ಲಿ ಗಲಭೆಗೆ ಮೂಲ ಕಾರಣನಾಗಿದ್ದ ವಿದ್ಯಾರ್ಥಿ ಅಭಿಷೇಕ್ ಹಿರೇಮಠನನ್ನು ಪರೀಕ್ಷೆ ಬರೆಸಲು ಪೊಲೀಸರು ಹುಬ್ಬಳ್ಳಿ ಉಪ ಕಾರಾಗೃಹದಿಂದ ಪ್ರಿಯದರ್ಶಿನಿ ಬಡಾವಣೆಯ ಮಹೇಶ್ ಪಿಯುಸಿ ಕಾಲೇಜಿಗೆ ಕರೆತಂದರು.

ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಅರೆಸ್ಟ್: ಆದರೆ ರಿಂಗ್ ಮಾಸ್ಟರ್ ಮಹಾನಾಯಕನೋ ಅಥವಾ ಮೀರ್‌ಸಾದಿಕ್? -ಬಿಜೆಪಿ ಟ್ವೀಟ್
ಹುಬ್ಬಳ್ಳಿ ಗಲಭೆ
TV9 Web
| Edited By: |

Updated on:Apr 22, 2022 | 9:10 PM

Share

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ, ಮತಾಂಧ ಅಲ್ಪಮತೀಯ‌ ಆರೋಪಿಗಳ ಬಂಧನವಾಗಿದೆ. ಆದರೆ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ? ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಸಂಪತ್ ರಾಜ್ ಸೇರಿದಂತೆ 110 ಕ್ಕೂ ಹೆಚ್ಚು ಮತಾಂಧರ ಬಂಧನವಾಗಿದೆ. ಪಾದರಾಯನಪುರ ಗಲಭೆಯಲ್ಲಿ 116 ದಂಗೆಕೋರರ ಬಂಧನ ಮಾಡಲಾಗಿದೆ. ಉಪ್ಪಿನಂಗಡಿಯ ಠಾಣೆಯ ಮುಂದೆ ಗಲಭೆ ಮಾಡಿದವರ ಬಂಧನವಾಗಿದೆ. ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಸೇರಿದಂತೆ 126 ಸಮಾಜ ಘಾತುಕರ ಬಂಧನವಾಗಿದ್ದು, ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ. ಸಮಾಜದ ಶಾಂತಿ ಸರ್ವನಾಶವಾಗುವಂಥ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು. ಆದರೆ ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ. ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ. ಆದರೆ ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ ಆ ರಿಂಗ್‌ ಮಾಸ್ಟರ್‌ ಮಹಾನಾಯಕ ಆಗಿರಬಹುದೇ ಅಥವಾ ಮೀರ್‌ಸಾದಿಕ್ ಆಗಿರಬಹುದೇ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿದೆ.

ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ಮೂಲಕ ಹುಬ್ಬಳ್ಳಿಯಲ್ಲಿ ಗಲಭೆಗೆ ಮೂಲ ಕಾರಣನಾಗಿದ್ದ ವಿದ್ಯಾರ್ಥಿ ಅಭಿಷೇಕ್ ಹಿರೇಮಠನನ್ನು ಪರೀಕ್ಷೆ ಬರೆಸಲು ಪೊಲೀಸರು ಹುಬ್ಬಳ್ಳಿ ಉಪ ಕಾರಾಗೃಹದಿಂದ ಪ್ರಿಯದರ್ಶಿನಿ ಬಡಾವಣೆಯ ಮಹೇಶ್ ಪಿಯುಸಿ ಕಾಲೇಜಿಗೆ ಕರೆತಂದರು. ಪರೀಕ್ಷೆ ಬರೆಯಲು ಅಭಿಷೇಕ್​ಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10.15 ಪಿಯುಸಿ ಪರೀಕ್ಷೆ ಆರಂಭವಾಗಿದೆ. ಹುಬ್ಬಳ್ಳಿಯ ಪ್ರಿಯದರ್ಶಿನಿ ಕಾಲೋನಿಯಲ್ಲಿರುವ ಪರೀಕ್ಷಾ ಕೇಂದ್ರ

ಮತ್ತೊಬ್ಬ ಪೊಲೀಸ್ ವಶಕ್ಕೆ ಹುಬ್ಬಳ್ಳಿ ಗಲಭೆ ಪ್ರಕರಣದ ಮುಖ್ಯ ಆರೋಪಿ ಅಭಿಷೇಕ್ ಹಿರೇಮಠಗೆ ವಿಡಿಯೊ ಕಳಿಸಿದ್ದ ಮತ್ತೋರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ವಿವಾದಿತ ಪೋಸ್ಟ್​ ಮೂಲ ರೂವಾರಿ ಇವನೇ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Published On - 8:55 pm, Fri, 22 April 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್