AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುದೊಡ್ಡ ಕಳ್ಳತನ ಪ್ರಕರಣ ಭೇದಿಸಿದ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ಬಹುದೊಡ್ಡ ಕಳ್ಳತನ ಪ್ರಕರಣವನ್ನ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು(Hubballi Keshwapur Police) ಭೇದಿಸಿದ್ದಾರೆ. ಖದೀಮರಿಂದ ಬರೋಬ್ಬರಿ 77 ಲಕ್ಷ ಮೌಲ್ಯದ 780 ಗ್ರಾಂ ಚಿನ್ನ, 24 ಕೆಜಿ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ಗ್ಯಾಸ್​ ಕಟ್ಟರ್​ನ್ನು ವಶಕ್ಕೆ  ಪಡೆದಿದ್ದಾರೆ.

ಬಹುದೊಡ್ಡ ಕಳ್ಳತನ ಪ್ರಕರಣ ಭೇದಿಸಿದ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು
ಬಹುದೊಡ್ಡ ಕಳ್ಳತನ ಪ್ರಕರಣ ಭೇದಿಸಿದ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು
ಶಿವಕುಮಾರ್ ಪತ್ತಾರ್
| Edited By: |

Updated on: Sep 05, 2024 | 3:23 PM

Share

ಹುಬ್ಬಳ್ಳಿ, ಸೆ.05: ಬಹುದೊಡ್ಡ ಕಳ್ಳತನ ಪ್ರಕರಣವನ್ನ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು(Hubballi Keshwapur Police) ಭೇದಿಸಿದ್ದಾರೆ. ಜುಲೈ 15 ರಂದು ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ವ್ಯಾಪ್ತಿಯ ಶ್ರೀ ಭುವನೇಶ್ವರಿ ಜ್ಯುವೆಲರಿ ಅಂಗಡಿಯಲ್ಲಿ ಕಳ್ಳತನ ಆಗಿತ್ತು. ಇದರಿಂದ ಹುಬ್ಬಳ್ಳಿ ಮಂದಿ ಕಂಗಾಲಾಗಿದ್ದರು. ಇದೀಗ ಪೊಲೀಸರು ಕಳ್ಳತನ ಮಾಡಿ 45 ದಿನಗಳೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಖದೀಮರಿಂದ ಬರೋಬ್ಬರಿ 77 ಲಕ್ಷ ಮೌಲ್ಯದ 780 ಗ್ರಾಂ ಚಿನ್ನ, 24 ಕೆಜಿ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ಗ್ಯಾಸ್​ ಕಟ್ಟರ್​ನ್ನು ವಶಕ್ಕೆ  ಪಡೆದಿದ್ದಾರೆ.

ಐವರು ಅರೆಸ್ಟ್​, ಓರ್ವ ಪರಾರಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಫರಾನ್ ಶೇಖ್, ಮುಖೇಶ್, ಫಾತೀಮಾ ಶೇಖ್, ಅಫ್ತಾಬ್ ಅಹ್ಮದ್ ಶೇಖ್ ಹಾಗೂ ತಲತ್ ಶೇಖ್ ಎಂಬ ಐವರನ್ನು ಬಂಧಿಸಲಾಗಿದ್ದು, ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಇನ್ನು ಈ ಖತರ್ನಾಕ್​ ಖದೀಮರ ಪತ್ತೆಗೆ ವಿವಿಧ ಇನ್ಸ್ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮೂರು ತಂಡಗಳನ್ನು ರಚನೆ‌ ಮಾಡಿದ್ದರು. ಸತತ ಒಂದೂವರೆ ತಿಂಗಳ ಪರಿಶ್ರಮದಿಂದಾಗಿ ದೊಡ್ಡ ಪ್ರಕರಣ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:ಪಿಸ್ತೂಲು ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ ಮಾಡಿದ್ದ ಅಂತರರಾಜ್ಯ ಕಳ್ಳರ ಬಂಧನ

ಇದೇ ಕಳ್ಳತನ ಪ್ರಕರಣದಲ್ಲಿ ಪ್ರಮುಖ ಆರೋಪಿ ಫರಾನ್ ಶೇಕ್​ಗೆ ಜುಲೈ 26 ರಂದು ಗೋಕುಲ ರೋಡ್ ಲೇಡಿ ಪಿಎಸ್‌ಐ ಕವಿತಾ ಎಂಬುವವರು ಗುಂಡಿನ ರುಚಿ ತೋರಿಸಿದ್ದರು. ಅಂತರಾಜ್ಯ ಕಳ್ಳ ಫರಾನ್ ಶೇಕ್​ನನ್ನು ಬಂಧಿಸಿದ ಬಳಿಕ ಇನ್ನಿತರರನ್ನು ತೋರಿಸುವುದಾಗಿ ಹೇಳಿ ಪೊಲೀಸರನ್ನು ಕರೆದುಕೊಂಡು‌ ಹುಬ್ಬಳ್ಳಿಯ ಗಾಮನ ಗಟ್ಟಿ ಪ್ರದೇಶದ ಬಳಿ ಹೋಗಿದ್ದ. ಈ ವೇಳೆ ಪೊಲೀಸರನ್ನು ನೂಕಿ ತಪ್ಪಿಸಿಕೊಳ್ಳಲು ಯುತ್ನಸಿದ್ದ. ಮೊದಲು ಎರಡು ಸುತ್ತು ಗಾಳಿಯಲ್ಲಿ ಗುಂಡು ಹೊಡೆದ ಪಿಎಸ್​ಐ, ಫರಾನ್ ಹೆದರದೆ ಇದ್ದಾಗ, ಇನ್ಸ್ಪೆಕ್ಟರ್ ಕವಿತಾ ಮಾಡ್ಯಾಳ ಅವರು ಫರಾನ್ ಮೇಲೆ ಫೈರಿಂಗ್‌ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!