AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿಯಾತ್ರೆ ಯೋಜನೆಯಡಿ ಏಕಕಾಲಕ್ಕೆ 400 ಭಕ್ತಾಧಿಗಳಿಂದ ತೀರ್ಥಯಾತ್ರೆ: ದಿವ್ಯ ದರ್ಶನ ಸಿಗಲಿ ಎಂದು ಶುಭ ಹಾರೈಸಿದ ಪ್ರಲ್ಹಾದ ಜೋಶಿ

ಕಾಶಿ ಯಾತ್ರೆ ಯೋಜನೆಯಡಿಯಲ್ಲಿ ಇಂದು ಕಾಶಿ ವಿಶ್ವನಾಥ ಸನ್ನಿಧಾನಕ್ಕೆ‌ ಧಾರವಾಡದ ಶ್ರೀ ಬಸವೇಶ್ವರ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ 400 ಜನ ಭಕ್ತಾಧಿಗಳು ತೆರಳಿದ್ದಾರೆ. ಇದಕ್ಕೆ ಸಂಸದ ಪ್ರಲ್ಹಾದ ಜೋಶಿಯವರು ದಿವ್ಯ ದರ್ಶನ ಸಿಗಲಿ ಎಂದು ಶುಭ ಹಾರೈಸಿದ್ದಾರೆ.

ಕಾಶಿಯಾತ್ರೆ ಯೋಜನೆಯಡಿ ಏಕಕಾಲಕ್ಕೆ 400 ಭಕ್ತಾಧಿಗಳಿಂದ ತೀರ್ಥಯಾತ್ರೆ: ದಿವ್ಯ ದರ್ಶನ ಸಿಗಲಿ ಎಂದು ಶುಭ ಹಾರೈಸಿದ ಪ್ರಲ್ಹಾದ ಜೋಶಿ
ಕಾಶಿಯಾತ್ರೆ ಯೋಜನೆಯಡಿ ಏಕಕಾಲಕ್ಕೆ 400 ಭಕ್ತಾಧಿಗಳಿಂದ ತೀರ್ಥಯಾತ್ರೆ
Follow us
TV9 Web
| Updated By: ಆಯೇಷಾ ಬಾನು

Updated on: Nov 29, 2023 | 1:24 PM

ಹುಬ್ಬಳ್ಳಿ, ನ.29: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾಶಿ ಯಾತ್ರೆ ಯೋಜನೆಯಡಿಯಲ್ಲಿ ( Kashi Yatra Scheme) ಇಂದು ಕಾಶಿ ವಿಶ್ವನಾಥ ಸನ್ನಿಧಾನಕ್ಕೆ‌ ಧಾರವಾಡದ ಶ್ರೀ ಬಸವೇಶ್ವರ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ 400 ಜನ ಭಕ್ತಾಧಿಗಳು ಕಾಶಿಯಾತ್ರೆ ಕೈಗೊಂಡಿದ್ದಾರೆ. ಈ ವೇಳೆ ಸಂಸದ ಪ್ರಲ್ಹಾದ ಜೋಶಿಯವರ ( Pralhad Joshi) ಬೆಂಬಲಿಗರು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈ ಎಲ್ಲಾ 400 ಭಕ್ತರನ್ನು ವಿಶೇಷವಾಗಿ ಸತ್ಕರಿಸಿ, ಸಿಹಿ ನೀಡಿ ಬೀಳ್ಕೊಟ್ಟಿದ್ದು ವಿಶೇಷ‌ವಾಗಿತ್ತು.

ಈ ಶುಭ ಸಂದರ್ಭವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಪುಟದಲ್ಲಿ ಚಿತ್ರ ಸಹಿತ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, “ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಯೋಚನೆ ದೇಶಾದ್ಯಂತ ಯಾವ ರೀತಿ ಸಂಚಲನ ಸೃಷ್ಟಿಸುತ್ತಿದೆ ಎಂಬುದಕ್ಕೆ ಕಾಶಿ ಕ್ಷೇತ್ರವೇ ಸಾಕ್ಷಿ. ಕಾಶಿಯನ್ನು ಪುನರುತ್ಥಾನ ಮಾಡುವ ಮೂಲಕ ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯೂ ಹೆಚ್ಚುತ್ತಿದೆ. ಇಂದು ಧಾರವಾಡದಿಂದ ಕಾಶಿಗೆ ಹೊರಟವರಲ್ಲಿ ಹಿರಿಯರು ಮಹಿಳೆಯರು ಅತೀ ಹೆಚ್ಚು ಕಂಡುಬಂದಿದ್ದು ವಿಶೇಷವಾಗಿತ್ತು. ಎಲ್ಲಾ ಭಕ್ತಾದಿಗಳ ಪಯಣ ಸುಖಕರವಾಗಿರಲಿ, ಎಲ್ಲರಿಗೂ ಶ್ರೀ ಭವ್ಯ ಕಾಶಿಯ ದಿವ್ಯ ದರ್ಶನ ಸಿಗಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ