AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ ಏಕಾದಶಿಗೆ ಹುಬ್ಬಳ್ಳಿಯಿಂದ ಪಂಢರಪುರಕ್ಕೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

ಮಹಾರಾಷ್ಟ್ರದ ಅತ್ಯಂತ ಜನಪ್ರಿಯ ಆಚರಣೆಗಳಲ್ಲಿ ಒಂದಾದ ಕಾರ್ತಿಕ ಏಕಾದಶಿ ಉತ್ಸವದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ನೈಋತ್ಯ ರೈಲ್ವೆಯು ಹುಬ್ಬಳ್ಳಿ-ಪಂಢರಪುರ ನಡುವೆ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಈ ರೈಲುಗಳ ವೇಳಾಪಟ್ಟಿ ಇಲ್ಲಿದೆ.

ಕಾರ್ತಿಕ ಏಕಾದಶಿಗೆ ಹುಬ್ಬಳ್ಳಿಯಿಂದ ಪಂಢರಪುರಕ್ಕೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ
ಪಂಢರಪುರ, ಹುಬ್ಬಳ್ಳಿ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on:Nov 11, 2024 | 8:16 AM

Share

ಹುಬ್ಬಳ್ಳಿ, ನವೆಂಬರ್​ 11: ಕಾರ್ತಿಕ ಮಾಸದಲ್ಲಿ (Kartika Masa) ಬರುವ ಏಕಾದಶಿ (Ekadashi) ಅತ್ಯಂತ ಶ್ರೇಷ್ಠವಾದ ದಿನವಾಗಿದೆ. ಈ ದಿನದಂದು ಮಹರಾಷ್ಟ್ರ (Maharashtra) ರಾಜ್ಯದಲ್ಲಿರುವ ಪಂಢರಪುರ ವಿಠಲನ (Pandarapura Vittala) ದೇವಸ್ಥಾನದಲ್ಲಿ ಉತ್ಸವ ನಡೆಯುತ್ತದೆ. ಈ ಉತ್ಸವದಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಿಂದ ಲಕ್ಷಾಂತರ ಭಕ್ತರು ಹೋಗುತ್ತಾರೆ. ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ (South Western Railway) ಹುಬ್ಬಳ್ಳಿಯಿಂದ ಪಂಢರಪುರಕ್ಕೆ ವಿಶೇಷ ರೈಲು ಓಡಿಸುತ್ತಿದೆ. ಈ ಕುರಿತು ನೈಋತ್ಯ ರೈಲ್ವೆ ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ಮಾಹಿತಿ ಹಂಚಿಕೊಂಡಿದೆ.

ಮಹಾರಾಷ್ಟ್ರದ ಅತ್ಯಂತ ಜನಪ್ರಿಯ ಆಚರಣೆಗಳಲ್ಲಿ ಒಂದಾದ ಕಾರ್ತಿಕ ಏಕಾದಶಿ ಉತ್ಸವದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಪಂಢರಪುರ ನಿಲ್ದಾಣಗಳ ನಡುವೆ ಆರು ಟ್ರಿಟ್​ಗಳಿಗೆ ಕಾಯ್ದಿರಿಸದ ವಿಶೇಷ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸುತ್ತಿದೆ. ಹಬ್ಬದ ಸಮಯದಲ್ಲಿ ಸುಗಮ ಪ್ರಯಾಣದ ಅನುಭವಕ್ಕಾಗಿ ಈ ಸೇವೆಯ ಪ್ರಯೋಜನವನ್ನು ಪ್ರಯಾಣಿಕರು ಪಡೆದುಕೊಳ್ಳಬೇಕೆಂದು ನೈಋತ್ಯ ರೈಲ್ವೆ ಮನವಿ ಮಾಡಿದೆ.

ಇದನ್ನೂ ಓದಿ: ವಾರಾಂತ್ಯದಲ್ಲಿ ಹುಬ್ಬಳ್ಳಿ ಮತ್ತು ಯಶವಂತಪುರ ನಡುವೆ ವಿಶೇಷ ರೈಲು

ರೈಲುಗಳ ವಿವರ

ರೈಲು ಸಂಖ್ಯೆ: 07313 ಎಸ್​ಎಸ್​ಎಸ್​ ಹುಬ್ಬಳ್ಳಿ-ಪಂಢರಪುರ ವಿಶೇಷ ರೈಲು ನವೆಂಬರ್​ 9 ರಿಂದ 15ರವರೆಗೆ ಹುಬ್ಬಳ್ಳಿಯಿಂದ ರಾತ್ರಿ 7:45ಕ್ಕೆ ಹೊರಟು ಮರುದಿನ ನಸುಕಿನ ಜಾವ 4:40ಕ್ಕೆ ಪಂಢರಪುರ ತಲುಪಲಿದೆ.

ರೈಲು ಸಂಖ್ಯೆ: 07314 ಪಂಢರಪುರ-ಎಸ್​ಎಸ್​ಎಸ್​​ ಹುಬ್ಬಳ್ಳಿ ವಿಶೇಷ ರೈಲು ನವೆಂಬರ್​ 10 ರಿಂದ 16ರವರೆಗೆ ಪಂಢರಪುರದಿಂದ ಬೆಳಗಿನ ಜಾವ 6 ಗಂಟೆಗೆ ಹೊರಟು ಅದೇ ದಿನ ಸಂಜೆ 4:30ಕ್ಕೆ ಹುಬ್ಬಳ್ಳಿ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಈ ರೈಲು ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ದೇಸೂರು, ಬೆಳಗಾವಿ, ಪಚ್ಚಾಪುರ, ಗೋಕಾಕ್​​ ರೋಡ್​, ಘಟಪ್ರಭಾ, ಚಿಕ್ಕೋಡಿ ರೋಡ್​, ರಾಯಬಾಗ, ಚಿಂಚಲಿ, ಕುಡಚಿ, ಉಗಾರ ಖುರ್ದ್​​, ಶೆಡಬಾಳ​, ವಿಜಯನಗರ, ಮೀರಜ್​, ಸುಲ್ಗರೆ, ಕವಠೆ-ಮಹಾಕಾಲ್​, ಧಲಗಾಂವ್​, ಜತ್​​ ರೋಡ್​ ಮತ್ತು ಸಂಗೋಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಟ್ವಿಟರ್​ ಪೋಸ್ಟ್​​

ಈ ರೈಲಿನಲ್ಲಿ 10 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಸೆಕೆಂಡ್​ ಕ್ಲಾಸ್​ ಲಗೇಜ್​ ಕಮ್​ ಬ್ರೇಕ್​ ವ್ಯಾನ್​ಗಳು ಸೇರಿದಂತೆ ಒಟ್ಟು 12 ಬೋಗಿಗಳು ಇರಲಿವೆ.

ಈ ರೈಲುಗಳು ಪ್ರತಿ ನಿಲ್ದಾಣಕ್ಕೆ ಆಗಮನ/ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು www.enquiry.indianrail.gov.in ಅಧಿಕೃತ ರೈಲ್ವೆ ವೆಬ್‌ಸೈಟ್ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ನಂಬರಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:15 am, Mon, 11 November 24

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ