AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್‌ಬಿಐ ಶಾಖೆಯಲ್ಲಿ ಚಾಕು ತೋರಿಸಿ 6 ಲಕ್ಷ ರೂ ದರೋಡೆ; 2 ದಿನದಲ್ಲಿ ಹಸೆಮಣೆ ಏರಬೇಕಿದ್ದವ ಪೊಲೀಸ್ ಠಾಣೆ ಮೆಟ್ಟಿಲೇರಿದ!

ನಿನ್ನೆ(ಜ.18) ಸಂಜೆ ಮಂಕಿ ಕ್ಯಾಪ್ ಧರಿಸಿ ಬ್ಯಾಂಕ್ನ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಗೆ ಚಾಕು ತೋರಿಸಿ ಬರೋಬ್ಬರಿ 6.39 ಲಕ್ಷ ಹಣ ದೋಚಿ ಆರೋಪಿ ಪ್ರವೀಣ್‌ಕುಮಾರ ಪರಾರಿ ವೇಳೆ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಎಸ್‌ಬಿಐ ಶಾಖೆಯಲ್ಲಿ ಚಾಕು ತೋರಿಸಿ 6 ಲಕ್ಷ ರೂ ದರೋಡೆ; 2 ದಿನದಲ್ಲಿ ಹಸೆಮಣೆ ಏರಬೇಕಿದ್ದವ ಪೊಲೀಸ್ ಠಾಣೆ ಮೆಟ್ಟಿಲೇರಿದ!
ಎಸ್‌ಬಿಐ ಶಾಖೆಯಲ್ಲಿ ಚಾಕು ತೋರಿಸಿ 6 ಲಕ್ಷ ರೂ ದರೋಡೆ; 2 ದಿನದಲ್ಲಿ ಹಸೆಮಣೆ ಏರಬೇಕಿದ್ದವ ಪೊಲೀಸ್ ಮೆಟ್ಟಿಲೇರಿದ!
TV9 Web
| Updated By: ಸಾಧು ಶ್ರೀನಾಥ್​|

Updated on:Jan 22, 2022 | 8:48 AM

Share

ಹುಬ್ಬಳ್ಳಿ: ಎಸ್‌ಬಿಐ ಶಾಖೆಯಲ್ಲಿ ಚಾಕು ತೋರಿಸಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್‌ಕುಮಾರ ಅಪ್ಪಾಸಾಹೇಬ ಪಾಟೀಲ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಡುಹಗಲೇ ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿದ್ದ ಆರೋಪಿ ಈಗ ಅರೆಸ್ಟ್ ಆಗಿದ್ದಾನೆ. ಪೊಲೀಸರ ಸಮಯ ಪ್ರಜ್ಞೆಯಿಂದ ಆರೋಪಿ ಬಲೆಗೆ ಬಿದ್ದಿದ್ದಾನೆ.

ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಎಸ್ಬಿಐ ಬ್ಯಾಂಕ್‌ನಲ್ಲಿ ಕ್ಯಾಶಿಯರ್‌ಗೆ ಚಾಕು ತೋರಿಸಿ 6.39 ಲಕ್ಷ ರೂ. ದರೋಡೆ ಮಾಡಲಾಗಿತ್ತು. ನಿನ್ನೆ(ಜ.18) ಸಂಜೆ ಮಂಕಿ ಕ್ಯಾಪ್ ಧರಿಸಿ ಬ್ಯಾಂಕ್ನ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಗೆ ಚಾಕು ತೋರಿಸಿ ಬರೋಬ್ಬರಿ 6.39 ಲಕ್ಷ ಹಣ ದೋಚಿ ಆರೋಪಿ ಪ್ರವೀಣ್‌ಕುಮಾರ ಪರಾರಿ ವೇಳೆ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಸಿನಿಮೀಯ ರೀತಿಯಲ್ಲಿ ಹಣ ದೋಚಲು ಯತ್ನಿಸಿದವನನ್ನು ಸಿನಿಮೀಯ ರೀತಿಯಲ್ಲೇ ಹುಬ್ಬಳ್ಳಿ ಪೊಲೀಸರು ಹಿಡಿದಿದ್ದಾರೆ.

2 ದಿನದಲ್ಲಿ ಹಸೆಮಣೆ ಏರಬೇಕಿದ್ದ ಆರೋಪಿ ಅರೆಸ್ಟ್ ಇನ್ನು ದರೋಡೆ ಮಾಡಿ ಸಿಕ್ಕಿಬಿದ್ದ ಆರೋಪಿ ಪ್ರವೀಣ್‌ಕುಮಾರ ಎರಡು ದಿನದಲ್ಲಿ ಹಸೆಮಣೆ ಏರಬೇಕಿದ್ದ ವರ. ಆದ್ರೆ ಇವ ಏರಿದ್ದು ಪೊಲೀಸ್ ಠಾಣೆ ಮೆಟ್ಟಿಲು. ಸಾರ್ವಜನಿಕರ ಸಹಾಯದಿಂದ ಕ್ಷಣಾರ್ಧದಲ್ಲೇ ಖದೀಮನನ್ನ ಪೊಲೀಸರು ಹಿಡಿದಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಉಮೇಶ್ ಬಂಗಾರಿ ಹಾಗೂ ಉಪನಗರ ಪೊಲೀಸ್ ಠಾಣೆ ಪೇದೆ ಮಂಜುನಾಥ್ ಹಾಲವರ ಎಂಬ ಸಿಬ್ಬಂದಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

ಖದೀಮನನ್ನ ಬಂಧಿಸಿದ ಪೊಲೀಸ್ ಸಿಬ್ಬಂದಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಲಾಬೂ ರಾಮ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನ ಹಿಡಿದು ಸಾಹಸ ಮೆರೆದ ಸಿಬ್ಬಂದಿಗೆ ತಲಾ 25 ಸಾವಿರ ಬಹುಮಾನ ನೀಡಿ ಅಭಿನಂದಿಸಿದ್ದಾರೆ. ಹುಬ್ಬಳ್ಳಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಮಾಜವಾದಿ ಪಕ್ಷದ ನಾಯಕ ಮುಲಾಯಾಂ ಸಿಂಗ್​ ಯಾದವ್ ಸೊಸೆ ಇಂದು ಬಿಜೆಪಿಗೆ ಸೇರ್ಪಡೆ; ಟ್ವೀಟ್​ ಮಾಡಿದ ಬಿಜೆಪಿ ನಾಯಕ

Published On - 8:15 am, Wed, 19 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ