Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್‌ಬಿಐ ಶಾಖೆಯಲ್ಲಿ ಚಾಕು ತೋರಿಸಿ 6 ಲಕ್ಷ ರೂ ದರೋಡೆ; 2 ದಿನದಲ್ಲಿ ಹಸೆಮಣೆ ಏರಬೇಕಿದ್ದವ ಪೊಲೀಸ್ ಠಾಣೆ ಮೆಟ್ಟಿಲೇರಿದ!

ನಿನ್ನೆ(ಜ.18) ಸಂಜೆ ಮಂಕಿ ಕ್ಯಾಪ್ ಧರಿಸಿ ಬ್ಯಾಂಕ್ನ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಗೆ ಚಾಕು ತೋರಿಸಿ ಬರೋಬ್ಬರಿ 6.39 ಲಕ್ಷ ಹಣ ದೋಚಿ ಆರೋಪಿ ಪ್ರವೀಣ್‌ಕುಮಾರ ಪರಾರಿ ವೇಳೆ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಎಸ್‌ಬಿಐ ಶಾಖೆಯಲ್ಲಿ ಚಾಕು ತೋರಿಸಿ 6 ಲಕ್ಷ ರೂ ದರೋಡೆ; 2 ದಿನದಲ್ಲಿ ಹಸೆಮಣೆ ಏರಬೇಕಿದ್ದವ ಪೊಲೀಸ್ ಠಾಣೆ ಮೆಟ್ಟಿಲೇರಿದ!
ಎಸ್‌ಬಿಐ ಶಾಖೆಯಲ್ಲಿ ಚಾಕು ತೋರಿಸಿ 6 ಲಕ್ಷ ರೂ ದರೋಡೆ; 2 ದಿನದಲ್ಲಿ ಹಸೆಮಣೆ ಏರಬೇಕಿದ್ದವ ಪೊಲೀಸ್ ಮೆಟ್ಟಿಲೇರಿದ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 22, 2022 | 8:48 AM

ಹುಬ್ಬಳ್ಳಿ: ಎಸ್‌ಬಿಐ ಶಾಖೆಯಲ್ಲಿ ಚಾಕು ತೋರಿಸಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್‌ಕುಮಾರ ಅಪ್ಪಾಸಾಹೇಬ ಪಾಟೀಲ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಡುಹಗಲೇ ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿದ್ದ ಆರೋಪಿ ಈಗ ಅರೆಸ್ಟ್ ಆಗಿದ್ದಾನೆ. ಪೊಲೀಸರ ಸಮಯ ಪ್ರಜ್ಞೆಯಿಂದ ಆರೋಪಿ ಬಲೆಗೆ ಬಿದ್ದಿದ್ದಾನೆ.

ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಎಸ್ಬಿಐ ಬ್ಯಾಂಕ್‌ನಲ್ಲಿ ಕ್ಯಾಶಿಯರ್‌ಗೆ ಚಾಕು ತೋರಿಸಿ 6.39 ಲಕ್ಷ ರೂ. ದರೋಡೆ ಮಾಡಲಾಗಿತ್ತು. ನಿನ್ನೆ(ಜ.18) ಸಂಜೆ ಮಂಕಿ ಕ್ಯಾಪ್ ಧರಿಸಿ ಬ್ಯಾಂಕ್ನ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಗೆ ಚಾಕು ತೋರಿಸಿ ಬರೋಬ್ಬರಿ 6.39 ಲಕ್ಷ ಹಣ ದೋಚಿ ಆರೋಪಿ ಪ್ರವೀಣ್‌ಕುಮಾರ ಪರಾರಿ ವೇಳೆ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಸಿನಿಮೀಯ ರೀತಿಯಲ್ಲಿ ಹಣ ದೋಚಲು ಯತ್ನಿಸಿದವನನ್ನು ಸಿನಿಮೀಯ ರೀತಿಯಲ್ಲೇ ಹುಬ್ಬಳ್ಳಿ ಪೊಲೀಸರು ಹಿಡಿದಿದ್ದಾರೆ.

2 ದಿನದಲ್ಲಿ ಹಸೆಮಣೆ ಏರಬೇಕಿದ್ದ ಆರೋಪಿ ಅರೆಸ್ಟ್ ಇನ್ನು ದರೋಡೆ ಮಾಡಿ ಸಿಕ್ಕಿಬಿದ್ದ ಆರೋಪಿ ಪ್ರವೀಣ್‌ಕುಮಾರ ಎರಡು ದಿನದಲ್ಲಿ ಹಸೆಮಣೆ ಏರಬೇಕಿದ್ದ ವರ. ಆದ್ರೆ ಇವ ಏರಿದ್ದು ಪೊಲೀಸ್ ಠಾಣೆ ಮೆಟ್ಟಿಲು. ಸಾರ್ವಜನಿಕರ ಸಹಾಯದಿಂದ ಕ್ಷಣಾರ್ಧದಲ್ಲೇ ಖದೀಮನನ್ನ ಪೊಲೀಸರು ಹಿಡಿದಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಉಮೇಶ್ ಬಂಗಾರಿ ಹಾಗೂ ಉಪನಗರ ಪೊಲೀಸ್ ಠಾಣೆ ಪೇದೆ ಮಂಜುನಾಥ್ ಹಾಲವರ ಎಂಬ ಸಿಬ್ಬಂದಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

ಖದೀಮನನ್ನ ಬಂಧಿಸಿದ ಪೊಲೀಸ್ ಸಿಬ್ಬಂದಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಲಾಬೂ ರಾಮ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನ ಹಿಡಿದು ಸಾಹಸ ಮೆರೆದ ಸಿಬ್ಬಂದಿಗೆ ತಲಾ 25 ಸಾವಿರ ಬಹುಮಾನ ನೀಡಿ ಅಭಿನಂದಿಸಿದ್ದಾರೆ. ಹುಬ್ಬಳ್ಳಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಮಾಜವಾದಿ ಪಕ್ಷದ ನಾಯಕ ಮುಲಾಯಾಂ ಸಿಂಗ್​ ಯಾದವ್ ಸೊಸೆ ಇಂದು ಬಿಜೆಪಿಗೆ ಸೇರ್ಪಡೆ; ಟ್ವೀಟ್​ ಮಾಡಿದ ಬಿಜೆಪಿ ನಾಯಕ

Published On - 8:15 am, Wed, 19 January 22

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ