AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಗಲಭೆ: ಶಂಕಿತ ಮಾಸ್ಟರ್​ಮೈಂಡ್ 5 ದಿನ ಪೊಲೀಸರ ವಶಕ್ಕೆ, ಬೆಂಗಳೂರಿನಲ್ಲಿ ಇನ್ನೂ ಇಬ್ಬರ ಬಂಧನ

 ಪ್ರಚೋದನಕಾರಿ ವಾಟ್ಸಾಪ್​​ ಸ್ಟೇಟಸ್​​​ನಿಂದ ಗಲಭೆ ಪ್ರಕರಣದ ಮಾಸ್ಟರ್​ಮೈಂಡ್ ಎಂದು ಶಂಕಿಸಲಾಗಿರುವ ಮೌಲ್ವಿ ವಸೀಂ ಪಠಾಣ್​ನನ್ನು ನ್ಯಾಯಾಲಯವು ಐದು ದಿನ ಪೊಲೀಸರ ವಶಕ್ಕೆ ಒಪ್ಪಿಸಿದೆ.

ಹುಬ್ಬಳ್ಳಿ ಗಲಭೆ: ಶಂಕಿತ ಮಾಸ್ಟರ್​ಮೈಂಡ್ 5 ದಿನ ಪೊಲೀಸರ ವಶಕ್ಕೆ, ಬೆಂಗಳೂರಿನಲ್ಲಿ ಇನ್ನೂ ಇಬ್ಬರ ಬಂಧನ
ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ದೃಶ್ಯಗಳು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Apr 23, 2022 | 9:00 AM

Share

ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸಾಪ್​​ ಸ್ಟೇಟಸ್​​​ನಿಂದ ಗಲಭೆ ಪ್ರಕರಣದ ಮಾಸ್ಟರ್​ಮೈಂಡ್ ಎಂದು ಶಂಕಿಸಲಾಗಿರುವ ಮೌಲ್ವಿ ವಸೀಂ ಪಠಾಣ್​ನನ್ನು ನ್ಯಾಯಾಲಯವು ಐದು ದಿನ ಪೊಲೀಸರ ವಶಕ್ಕೆ ಒಪ್ಪಿಸಿದೆ. ತುಫೇಲ್​ ಮುಲ್ಲಾನನ್ನು ಸಹ ನ್ಯಾಯಾಲಯ ಪೊಲೀಸರ ವಶಕ್ಕೆ ನೀಡಿದೆ. ಆರೋಪಿಗಳನ್ನು 10 ದಿನ ವಶಕ್ಕೆ ನೀಡಬೇಕೆಂದು ಹುಬ್ಬಳ್ಳಿ ಪೊಲೀಸರು ಕೋರಿದ್ದರು. ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಗಲಭೆ ಹಿಂದಿನ ಷಡ್ಯಂತ್ರ, ಸಂಘಟನೆಗಳ ಪಾತ್ರ, ಜನರನ್ನು ಸೇರಿಸಿದ್ದ ಬಗ್ಗೆಯೂ ಪೊಲೀಸರು ವಿಚಾರಣೆ ವೇಳೆ ಮಾಹಿತಿ ಸಂಗ್ರಹಿಸಲಿದ್ದಾರೆ.

ಪೊಲೀಸರ ಎದುರು ತಪ್ಪೊಪ್ಪಿಕೊಂಡ ವಾಸಿಂ

ವಾಸಿಂ ಪಠಾಣ್​ನನ್ನು ಪೊಲೀಸರು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ‘ಪ್ರಕರಣದಲ್ಲಿ ನನ್ನನ್ನೇ ಮಾಸ್ಟರ್ ಮೈಂಡ್ ಮಾಡಿದ್ದರಿಂದ ನನಗೆ ಬಂಧನದ ಭಯವಿತ್ತು. ಹಾಗಾಗಿ ಪರಾರಿಯಾಗಿದ್ದೆ’ ಎಂದು ವಾಸಿಂ ತಪ್ಪೊಪ್ಪಿಕೊಂಡಿದ್ದ. ವಾಸೀಂ ಭೇಪಾರಿ, ತುಫೆಲ್ ಮಲ್ಲಾ ಜೊತೆ ಸೇರಿ ವಾಟ್ಸ್ಯಾಪ್ ಗ್ರೂಪ್ ಮಾಡಿದ್ದು ನಿಜ. ಕೇವಲ ಜನ ಜಮಾವಣೆ ಆಗುವಂತೆ ಮಾತ್ರ ಹೇಳಿದ್ದೆ. ಅಷ್ಟೊಂದು ದೊಡ್ಡ ಪ್ರಮಾಣ ಕಲ್ಲು ಬಂದಿದ್ದು ಹೇಗೆ ಎಂದು ನನಗೆ ಗೊತ್ತಿಲ್ಲ. ನಾನು ಪ್ರಚೋದನೆ ನೀಡಿಲ್ಲ. ಪೊಲೀಸರು ಬಗ್ಗದೇ ಹೋದರೆ ಪ್ರತಿಭಟನೆ ಮಾಡೋಣ ಎಂದಿದ್ದೆ. ಬರುವಾಗ ಎಲ್ಲರೂ ಕಲ್ಲು ಹಿಡಿದುಕೊಂಡು ಬಂದಿದ್ದಾರೆ. ನಾ ಬಂದ ಬಳಿಕ ಒಮ್ಮೆಲ್ಲೆ ಕರೆಂಟ್ ಹೊಯ್ತು. ಕೆಲವರು ಮುಸುಕುಧಾರಿಗಳು ಬಂದಿದ್ದರು ಎಂದು ವಾಸಿಂ ಪೊಲೀಸರಿಗೆ ವಿವರಣೆ ನೀಡಿದರು.

ಹುಬ್ಬಳ್ಳಿಯಿಂದ ಮೊದಲು ನಾನು ಸವಣೂರಿನ ಹತ್ತಿರದ ಪತ್ನಿ ಮನೆಗೆ ಹೋಗಿದ್ದೆ‌. ಪೊಲೀಸರು ನನ್ನನ್ನು ಹುಡುಕುತ್ತಿದ್ದ ಕಾರಣ ತಪ್ಪಿಸಿಕೊಂಡು ಓಡಾಡುತ್ತಿದ್ದೆ. ಕೆಲವರು ನನ್ನ ಜೀವಕ್ಕೆ ಆಪತ್ತು ಇದೆ ಎಂದು ಹೇಳಿದ್ದರು. ಹೀಗಾಗಿ ಹೆದರಿದ್ದೆ ಎಂದು ವಾಸಿಂ ಹೇಳಿದ್ದರು. ವಾಸಿಂ ಮೊಬೈಲ್​ನಲ್ಲಿರುವ ಮಾಹಿತಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಗಲಭೆ ಆರೋಪಿಗಳ ಬಂಧನ

ಹುಬ್ಬಳ್ಳಿ ಪೊಲೀಸರು ಇಬ್ಬರು ಗಲಭೆ ಆರೋಪಿಗಳನ್ನು ಬೆಂಗಳೂರಿನ ಕಾಟನ್​ಪೇಟೆ ಹೊಟೆಲ್​ನಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದರು. ಇವರ ಚಲನವಲನ ಕಂಡು ಹಿಂಬಾಲಿಸಿದ್ದ ಹುಬ್ಬಳ್ಳಿ ಪೊಲೀಸರು ಸ್ಥಳೀಯ ಪೊಲೀಸರೊಂದಿಗೆ ಸುತ್ತುವರೆದಿದ್ದರು. ಆರೋಪಿಗಳು ಹಿಂದಕ್ಕೆ ತಿರುಗಿದಾಗ ಹೆಗಲ ಮೇಲೆ ಕೈ ಹಾಕಿ ಬಿಗಿಯಾಗಿ ಹಿಡಿದುಕೊಂಡರು. ಹುಬ್ಬಳ್ಳಿಯಿಂದ ತಪ್ಪಿಸಿಕೊಂಡು ಹೊರಟಿದ್ದ ನಾಲ್ವರು ಹಾವೇರಿಯ ಬಂಕಾಪುರ ಬಸ್​ಸ್ಟಾಪ್​ನಲ್ಲಿ ಇಳಿದು, ಅಲ್ಲಿಂದ ಬೇರೆಡೆಗೆ ಪರಾರಿಯಾಗಿದ್ದರು. ಇನ್ನಿಬ್ಬರು ಬೆಂಗಳೂರಿನತ್ತ ಪ್ರಯಾಣ ಮಾಡಿದ್ದರು. ರೌಡಿಶೀಟರ್ ಅಬ್ದುಲ್ ಮಲ್ಲಿಕ್ ಬೇಫಾರಿ ಹಾಗೂ ತುಫೇಲ್ ಮುಲ್ಲಾ ಎರಡು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಬುಧವಾರ ಬೆಳಿಗ್ಗೆ ರಂಜಾನ್​ಗೆಂದು ಬಟ್ಟೆ ಖರೀದಿ ಮಾಡಿದ್ದ ಆರೋಪಿಗಳು. ಸಂಜೆಯ ನಂತರ ತವಕಲ್ ಮಸೀದಿ ಬಳಿ ಇದ್ದ ಲಾರ್ಡ್​ನಲ್ಲಿ ಕೊಠಡಿ ಬುಕ್ ಮಾಡಿದ್ದರು.

ಹೋಟೆಲ್​ಗೆ ಊಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಅಷ್ಟರಲ್ಲಾಗಲೆ ಹುಬ್ಬಳ್ಳಿಯಿಂದ ಬಂದಿದ್ದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ಸ್ಥಳೀಯ ಡಿಸಿಪಿ ಸಂಜೀವ್ ಪಾಟೀಲ್​ಗೆ ವಿವರ ನೀಡಿದ ಅವರು, ಸ್ಥಳೀಯ ಪೊಲೀಸರ ಸಹಾಯದಿಂದ ಆರೋಪಿಗಳನ್ನು ಬಂಧಿಸಿದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಕೋಮುಗಲಭೆ ಪ್ರಕರಣ; ಗಲಭೆಯ ಮಾಸ್ಟರ್‌ಮೈಂಡ್‌ ಮೌಲ್ವಿ ವಸೀಂ ಪಠಾಣ್ ಪೊಲೀಸರ ವಶಕ್ಕೆ​

ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಅರೆಸ್ಟ್: ಆದರೆ ರಿಂಗ್ ಮಾಸ್ಟರ್ ಮಹಾನಾಯಕನೋ ಅಥವಾ ಮೀರ್‌ಸಾದಿಕ್? -ಬಿಜೆಪಿ ಟ್ವೀಟ್

Published On - 8:59 am, Sat, 23 April 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್