AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಕೇಸ್​ ಹಾಕುವ ಬೆದರಿಕೆ, ಹುಬ್ಬಳ್ಳಿ ಕೇಶ್ವಾಪೂರ ಠಾಣೆಯ ಇನ್ಸ್ಪೆಕ್ಟರ್ ವಿರುದ್ದ ಮತ್ತೊಂದು ಗಂಭೀರ ಆರೋಪ

ಈ ಹಿಂದೆ ನಿಖಿಲ್ ಎಂಬ ಯುವಕನ ಆತ್ಮಹತ್ಯೆಗೆ ಇನ್ಸ್ಪೆಕ್ಟರ್ ಸಾತೇನಹಳ್ಳಿ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಈಗ ಕೇಸ್ ವಾಪಸ್ ತಗೆದುಕೊಳ್ಳದೆ ಹೋದರೆ ರೌಡಿಶೀಟರ್ ಹಾಕೋದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಕೇಶ್ವಾಪೂರ ನಿವಾಸಿ ಹರೀಸ್ ಪೂಜಾರಿ ಎಂಬುವವರು ಆರೋಪ ಮಾಡಿದ್ದಾರೆ.

ರೌಡಿಶೀಟರ್ ಕೇಸ್​ ಹಾಕುವ ಬೆದರಿಕೆ, ಹುಬ್ಬಳ್ಳಿ ಕೇಶ್ವಾಪೂರ ಠಾಣೆಯ ಇನ್ಸ್ಪೆಕ್ಟರ್ ವಿರುದ್ದ ಮತ್ತೊಂದು ಗಂಭೀರ ಆರೋಪ
ಇನ್ಸ್ಪೆಕ್ಟರ್ ಯು.ಹೆಚ್​. ಸಾತೇನಹಳ್ಳಿ
TV9 Web
| Updated By: ಆಯೇಷಾ ಬಾನು|

Updated on:Nov 06, 2023 | 4:07 PM

Share

ಹುಬ್ಬಳ್ಳಿ, ನ.06: ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯು.ಹೆಚ್​. ಸಾತೇನಹಳ್ಳಿ (UH Sathenahalli)  ವಿರುದ್ದ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ಹಿಂದೆ ನಿಖಿಲ್ ಎಂಬ ಯುವಕನ ಆತ್ಮಹತ್ಯೆಗೆ ಇನ್ಸ್ಪೆಕ್ಟರ್ ಸಾತೇನಹಳ್ಳಿ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಈಗ ಕೇಸ್ ವಾಪಸ್ ತಗೆದುಕೊಳ್ಳದೆ ಹೋದರೆ ರೌಡಿಶೀಟರ್ (Rowdy Sheeter) ಹಾಕೋದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಕೇಶ್ವಾಪೂರ ನಿವಾಸಿ ಹರೀಸ್ ಪೂಜಾರಿ ಎಂಬುವವರು ಆರೋಪ ಮಾಡಿದ್ದಾರೆ.

ಹರೀಶ್ ಪೂಜಾರಿ ಕಳೆದ ವರ್ಷ ತನ್ನ ಪತ್ನಿಗೆ ವಿಚ್ಛೇದನ ನೀಡಿದ್ದರು. ವಿಚ್ಛೇದನ ಆದರೂ ಹರೀಶ್ ಇಬ್ಬರ ಹೆಸರಲ್ಲಿ ಒಂದು ಫ್ಲ್ಯಾಟ್ ಖರೀದಿ ಮಾಡಿದ್ದರು. ಅದೇ ಪ್ಲ್ಯಾಟ್ ವಿಷಯಕ್ಕೆ ಹರೀಶ್ ಪೂಜಾರಿ ಹಾಗೂ ಪತ್ನಿ ಮನೆಯವರ ನಡುವೆ ಗಲಾಟೆಯಾಗಿತ್ತು. ಗಲಾಟೆ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ‌ಯಾಗಿತ್ತು. ಕಳೆದ ಆಗಸ್ಟ್ 22ರಂದು ಹರೀಶ್ ಪೂಜಾರಿ ಪತ್ನಿ ವಿನಯಾ ತಂದೆ ಸಂಬಂಧಿಕರು ಹರೀಶ್ ಪೂಜಾರಿ ಮನೆಗೆ ನುಗ್ಗಿ ಗಲಾಟೆ ಮಾಡಿದ್ದರು. ರಾಡ್ ನಿಂದ ಹಲ್ಲೆಗೆ ಯತ್ನಿಸಿದ್ದರು. ಆಗ ಹರೀಶ್ ಅವರ ಅಜ್ಜನಿಗೆ ಗಾಯಗಳಾಗಿವೆ. ಗಲಾಟೆ ಬಳಿಕ ಹರೀಶ್ ಅವರು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐದು ಜನರ ವಿರುದ್ಧ ದೂರು ನೀಡಿದ್ದರು. ಇದೀಗ ಆ ದೂರು ವಾಪಸ್ ತಗೆದುಕೊಳ್ಳಲು ಇನ್ಸ್ಪೆಕ್ಟರ್ ಸಾತೇನಹಳ್ಳಿ ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನೀನು ಕೇಸ್ ತೆಗೆದುಕೊಳ್ಳದೆ ಹೋದ್ರೆ ರೌಡಿಶೀಟರ್ ಹಾಕ್ತೀನಿ ಎಂದು ಬೆದರಿಕೆ ಹಾಕಿದ್ದಾರೆ. ನನಗೆ ಜೀವ ಭಯ ಇದೆ ಎಂದು ಹರೀಶ್ ಪೂಜಾರಿ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ದಾಂಪತ್ಯದಲ್ಲಿ ಕಲಹ, ಆತ್ಮಹತ್ಯೆ ಮಾಡಿಕೊಂಡ ಪತಿ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್; ಪೊಲೀಸರ ವಿರುದ್ದವೇ ದಾಖಲಾಯ್ತು ಕೇಸ್​

ಹುಬ್ಬಳ್ಳಿಯ ಕೋಟೆಲಿಂಗೇಶ್ವರ ನಗರದಲ್ಲಿ‌ 28 ವರ್ಷದ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದ. ನಿಖಿಲ್ ಆತ್ಮಹತ್ಯೆಗೆ ಪೊಲೀಸರ ಹಾಗೂ ಪತ್ನಿ ಕಿರುಕುಳ ಕಾರಣ ಎನ್ನುವ ಗಂಭೀರ ಆರೋಪ‌ ಕೇಳಿ ಬಂದಿತ್ತು. ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸಾತೇನಹಳ್ಳಿ ಹಾಗೂ ASI ಜಯಶ್ರೀ ಚಲವಾದಿ ವಿರುದ್ದ ಈ ಆರೋಪ ಕೇಳಿ ಬಂದಿದ್ದು, ಗಂಡ ಹೆಂಡತಿಯ ಜಗಳ ರಾಜೀ ಸಂಧಾನಕ್ಕೆ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹೀಗಾಗಿ ನೊಂದ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದಾಗ ಪೊಲೀಸರು, ಇನ್ಸಪೆಕ್ಟರ್ ಸಾತೇನಹಳ್ಳಿ,  ASI ಜಯಶ್ರೀ ಚಲವಾದಿ, ನಿಖಿಲ್ ಪತ್ನಿ ಸೇರಿ ಎಂಟು ಜನರ ವಿರುದ್ದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:35 pm, Mon, 6 November 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ