AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜಲಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಕೊಲೆಯಲ್ಲಿ ನೇಹಾ ತಂದೆ ನಿರಂಜನ ಆಪ್ತ ಸಹಾಯಕನ ಕೈವಾಡ ಆರೋಪ

ಮೇ.15 ರಂದು ಮನೆಗೆ ನುಗ್ಗಿ ಅಂಜಲಿ ಹತ್ಯೆ ಪ್ರಕರಣ (Anjali Ambigera Murder Case)ಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಅಂಜಲಿ ಕೊಲೆಯಲ್ಲಿ ನೇಹಾ ತಂದೆ ನಿರಂಜನ ಹಿರೇಮಠ ಅವರ ಆಪ್ತ ಸಹಾಯಕನಾಗಿರುವ ವಿಜಯ್ ಅಲಿಯಾಸ್ ಈರಣ್ಣನ‌ ಪಾತ್ರವೂ ಇದೆ ಎಂಬ ಆರೋಪ ಕೇಳಿಬಂದಿದೆ.

ಅಂಜಲಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಕೊಲೆಯಲ್ಲಿ ನೇಹಾ ತಂದೆ ನಿರಂಜನ ಆಪ್ತ ಸಹಾಯಕನ ಕೈವಾಡ ಆರೋಪ
ಅಂಜಲಿ ಹತ್ಯೆ
ಶಿವಕುಮಾರ್ ಪತ್ತಾರ್
| Edited By: |

Updated on:Jun 08, 2024 | 2:50 PM

Share

ಹುಬ್ಬಳ್ಳಿ, ಜೂ.08: ಮೇ.15 ರಂದು ಮನೆಗೆ ನುಗ್ಗಿ ಅಂಜಲಿ ಹತ್ಯೆ ಪ್ರಕರಣ (Anjali Ambigera Murder Case)ಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಅಂಜಲಿ ಕೊಲೆಯಲ್ಲಿ ವಿಜಯ್ ಅಲಿಯಾಸ್ ಈರಣ್ಣನ‌ ಪಾತ್ರ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆ ನೇಹಾ ತಂದೆ ನಿರಂಜನ ಹಿರೇಮಠ ಅವರ ಆಪ್ತ ಸಹಾಯಕನಾಗಿರುವ ವಿಜಯ್ ಮೇಲೆ ಅಂಜಲಿ ಸಹೋದರಿಯ ಪತಿಯಾದ ಶಿವಕುಮಾರ್ ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯ ಬಸವನಗರದಲ್ಲಿ ಹಲ್ಲೆಗೆ ಯತ್ನಿಸಿದ್ದ. ಈ ಕುರಿತು ವಿಜಯ್ ಶಿವಕುಮಾರ್ ವಿರುದ್ದ ಬೆಂಡಿಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ.

ವಿಜಯ್​ ಬಂಧಿಸಲು ಅಂಜಲಿ ಸಹೋದರಿ ಯಶೋಧಾ ಆಗ್ರಹ

ಇನ್ನು ವಿಜಯ್​ನನ್ನು ಕೂಡ ಅರೆಸ್ಟ್ ಮಾಡಬೇಕೆಂದು ಅಂಜಲಿ ಸಹೋದರಿ ಯಶೋಧಾ ಆಗ್ರಹಿಸಿದ್ದರು. ಇದೀಗ ವಿಜಯ್ ಅಂಗಡಿಗೆ ಹೋದಾಗ ಬೈಕ್ ಅಡ್ಡಗಟ್ಟಿದ ಶಿವಕುಮಾರ್ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎಂದು ವಿಜಯ್​ ಬೆಂಡಿಗೇರಿ ಠಾಣೆಯಲ್ಲಿ ದೂರು ನೀಡಿದ್ದ. ಈ ಹಿನ್ನಲೆ ಸೆಕ್ಷನ್ 341,504 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿ, ಹಲ್ಲೆಗೆ ಮುಂದಾಗಿದ್ದ ಶಿವಕುಮಾರ್​ನನ್ನ ಪೊಲೀಸರು ಬಂಧಿಸಿದ್ದಾರೆ. ಇದರ ಜೊತೆಗೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಶಿವಕುಮಾರ್ ವಿರುದ್ದ ಕಳ್ಳತನ ಪ್ರಕರಣವು ದಾಖಲಾಗಿದ್ದು, ಶಿವಕುಮಾರ್ ವಿರುದ್ದ ಪೊಲೀಸರು ವಾರೆಂಟ್ ಕೂಡ ಹೊರಡಿಸಿದ್ದರು.

ಇದನ್ನೂ ಓದಿ:ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣದ ಆರೋಪಿ ವಿಶ್ವ ಕಿಮ್ಸ್​ ನರ್ಸ್​ ಜೊತೆ ಅನುಚಿತ ವರ್ತನೆ

ಹೊಸ ಬಾಂಬ್​ ಹಾಕಿದ್ದ ಅಂಜಲಿ ಸಹೋದರಿ ಯಶೋಧಾ

ಅಂಜಲಿ ಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದ್ದು, ಇದೇ. 23 ರಂದು ಅಂಜಲಿ ಸಹೋದರಿ ಹೊಸ ಬಾಂಬ್​ ಹಾಕಿದ್ದರು. ಹೌದು, ಈ ಹಿಂದೆ ಅಂದರೆ ನಮ್ಮ ಅಕ್ಕ(ಮೃತ ಅಂಜಲಿ) 17 ವರ್ಷ ಇದ್ದಾಗ ವಿಜಯ್​ ಎನ್ನುವ ಯುವಕ ಲವ್ ಮಾಡುತ್ತಿದ್ದ. ಈ ಕುರಿತು ಪೊಲೀಸ್​ ಠಾಣೆಯಲ್ಲಿ ದೂರು ಕೂಡ ನೀಡಲಾಗಿತ್ತು. ನಾವು ಹೊಡೆದು ಬುದ್ದಿ ಹೇಳಿದ್ದೇವು. ಅವಾಗ ಅಕ್ಕ ಬಿಟ್ಟಿದ್ದರು‌. ಆದರೆ, ಇದೀಗ ನಮ್ಮಕ್ಕನ‌ ಕೊಲೆಯಾಗಿದೆ. ಕೊಲೆಯಾದ ದಿನದಿಂದ ಅವನು ನಾಪತ್ತೆಯಾಗಿದ್ದಾನೆ ಎಂದು ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Sat, 8 June 24

Follow Us
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್