AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜಲಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಕೊಲೆಯಲ್ಲಿ ನೇಹಾ ತಂದೆ ನಿರಂಜನ ಆಪ್ತ ಸಹಾಯಕನ ಕೈವಾಡ ಆರೋಪ

ಮೇ.15 ರಂದು ಮನೆಗೆ ನುಗ್ಗಿ ಅಂಜಲಿ ಹತ್ಯೆ ಪ್ರಕರಣ (Anjali Ambigera Murder Case)ಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಅಂಜಲಿ ಕೊಲೆಯಲ್ಲಿ ನೇಹಾ ತಂದೆ ನಿರಂಜನ ಹಿರೇಮಠ ಅವರ ಆಪ್ತ ಸಹಾಯಕನಾಗಿರುವ ವಿಜಯ್ ಅಲಿಯಾಸ್ ಈರಣ್ಣನ‌ ಪಾತ್ರವೂ ಇದೆ ಎಂಬ ಆರೋಪ ಕೇಳಿಬಂದಿದೆ.

ಅಂಜಲಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಕೊಲೆಯಲ್ಲಿ ನೇಹಾ ತಂದೆ ನಿರಂಜನ ಆಪ್ತ ಸಹಾಯಕನ ಕೈವಾಡ ಆರೋಪ
ಅಂಜಲಿ ಹತ್ಯೆ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jun 08, 2024 | 2:50 PM

Share

ಹುಬ್ಬಳ್ಳಿ, ಜೂ.08: ಮೇ.15 ರಂದು ಮನೆಗೆ ನುಗ್ಗಿ ಅಂಜಲಿ ಹತ್ಯೆ ಪ್ರಕರಣ (Anjali Ambigera Murder Case)ಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಅಂಜಲಿ ಕೊಲೆಯಲ್ಲಿ ವಿಜಯ್ ಅಲಿಯಾಸ್ ಈರಣ್ಣನ‌ ಪಾತ್ರ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆ ನೇಹಾ ತಂದೆ ನಿರಂಜನ ಹಿರೇಮಠ ಅವರ ಆಪ್ತ ಸಹಾಯಕನಾಗಿರುವ ವಿಜಯ್ ಮೇಲೆ ಅಂಜಲಿ ಸಹೋದರಿಯ ಪತಿಯಾದ ಶಿವಕುಮಾರ್ ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯ ಬಸವನಗರದಲ್ಲಿ ಹಲ್ಲೆಗೆ ಯತ್ನಿಸಿದ್ದ. ಈ ಕುರಿತು ವಿಜಯ್ ಶಿವಕುಮಾರ್ ವಿರುದ್ದ ಬೆಂಡಿಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ.

ವಿಜಯ್​ ಬಂಧಿಸಲು ಅಂಜಲಿ ಸಹೋದರಿ ಯಶೋಧಾ ಆಗ್ರಹ

ಇನ್ನು ವಿಜಯ್​ನನ್ನು ಕೂಡ ಅರೆಸ್ಟ್ ಮಾಡಬೇಕೆಂದು ಅಂಜಲಿ ಸಹೋದರಿ ಯಶೋಧಾ ಆಗ್ರಹಿಸಿದ್ದರು. ಇದೀಗ ವಿಜಯ್ ಅಂಗಡಿಗೆ ಹೋದಾಗ ಬೈಕ್ ಅಡ್ಡಗಟ್ಟಿದ ಶಿವಕುಮಾರ್ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎಂದು ವಿಜಯ್​ ಬೆಂಡಿಗೇರಿ ಠಾಣೆಯಲ್ಲಿ ದೂರು ನೀಡಿದ್ದ. ಈ ಹಿನ್ನಲೆ ಸೆಕ್ಷನ್ 341,504 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿ, ಹಲ್ಲೆಗೆ ಮುಂದಾಗಿದ್ದ ಶಿವಕುಮಾರ್​ನನ್ನ ಪೊಲೀಸರು ಬಂಧಿಸಿದ್ದಾರೆ. ಇದರ ಜೊತೆಗೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಶಿವಕುಮಾರ್ ವಿರುದ್ದ ಕಳ್ಳತನ ಪ್ರಕರಣವು ದಾಖಲಾಗಿದ್ದು, ಶಿವಕುಮಾರ್ ವಿರುದ್ದ ಪೊಲೀಸರು ವಾರೆಂಟ್ ಕೂಡ ಹೊರಡಿಸಿದ್ದರು.

ಇದನ್ನೂ ಓದಿ:ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣದ ಆರೋಪಿ ವಿಶ್ವ ಕಿಮ್ಸ್​ ನರ್ಸ್​ ಜೊತೆ ಅನುಚಿತ ವರ್ತನೆ

ಹೊಸ ಬಾಂಬ್​ ಹಾಕಿದ್ದ ಅಂಜಲಿ ಸಹೋದರಿ ಯಶೋಧಾ

ಅಂಜಲಿ ಹತ್ಯೆ ಪ್ರಕರಣ ತನಿಖೆ ಚುರುಕುಗೊಂಡಿದ್ದು, ಇದೇ. 23 ರಂದು ಅಂಜಲಿ ಸಹೋದರಿ ಹೊಸ ಬಾಂಬ್​ ಹಾಕಿದ್ದರು. ಹೌದು, ಈ ಹಿಂದೆ ಅಂದರೆ ನಮ್ಮ ಅಕ್ಕ(ಮೃತ ಅಂಜಲಿ) 17 ವರ್ಷ ಇದ್ದಾಗ ವಿಜಯ್​ ಎನ್ನುವ ಯುವಕ ಲವ್ ಮಾಡುತ್ತಿದ್ದ. ಈ ಕುರಿತು ಪೊಲೀಸ್​ ಠಾಣೆಯಲ್ಲಿ ದೂರು ಕೂಡ ನೀಡಲಾಗಿತ್ತು. ನಾವು ಹೊಡೆದು ಬುದ್ದಿ ಹೇಳಿದ್ದೇವು. ಅವಾಗ ಅಕ್ಕ ಬಿಟ್ಟಿದ್ದರು‌. ಆದರೆ, ಇದೀಗ ನಮ್ಮಕ್ಕನ‌ ಕೊಲೆಯಾಗಿದೆ. ಕೊಲೆಯಾದ ದಿನದಿಂದ ಅವನು ನಾಪತ್ತೆಯಾಗಿದ್ದಾನೆ ಎಂದು ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Sat, 8 June 24

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!