Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯದಲ್ಲಿ ಕಲಹ: ಪೊಲೀಸರ ಸಂಧಾನಕ್ಕೆ ಒಪ್ಪದೆ ಆತ್ಮಹತ್ಯೆ ಮಾಡಿಕೊಂಡ ಪತಿ

ಮದುವೆಯಾಗಿ 11 ತಿಂಗಳು ಕಳೆದರೂ ದಂಪತಿ ನಡುವೆ ಸಾಮರಸ್ಯ ಮೂಡಿರಲಿಲ್ಲ. ಹೀಗಾಗಿ ದಂಪತಿ ನಿತ್ಯ ಜಗಳವಾಡುತ್ತಿದ್ದರು. ನಿತ್ಯ ಜಗಳದಿಂದ ಬೇಸತ್ತ ಪತ್ನಿ, ಪತಿಯಿಂದ ದೂರವಾಗಿ ತವರು ಮನೆ ಸೇರಿದ್ದಳು. ಮುಂದೇನಾಯ್ತು ಈ ಸ್ಟೋರಿ ಓದಿ..

ದಾಂಪತ್ಯದಲ್ಲಿ ಕಲಹ: ಪೊಲೀಸರ ಸಂಧಾನಕ್ಕೆ ಒಪ್ಪದೆ ಆತ್ಮಹತ್ಯೆ ಮಾಡಿಕೊಂಡ ಪತಿ
ಮೃತ ನಿಖಿಲ್​
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:Nov 03, 2023 | 2:13 PM

ಹುಬ್ಬಳ್ಳಿ ನ.03: ದಾಂಪತ್ಯದಲ್ಲಿ ಕಲಹ ಮೂಡಿದ್ದು, ಪೊಲೀಸರ (Police) ಸಂಧಾನಕ್ಕೆ ಒಪ್ಪದೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ. ನಿಖಲ್ (28) ಆತ್ಮಹತ್ಯೆ ಮಾಡಿಕೊಂಡ ಪತಿ. 11 ತಿಂಗಳ ಹಿಂದೆ ನಿಖಿಲ್ ಮತ್ತು ಪ್ರೀತಿ ವಿವಾಹವಾಗಿತ್ತು (Marriage). ಆದರೆ ದಂಪತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೆ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು. ಇದರಿಂದಾಗಿ ಪ್ರೀತಿ ತವರು ಮನೆಗೆ ಹೋಗಿದ್ದಳು.

ಗುರುವಾರ (ನ.02) ಪ್ರೀತಿ ಮತ್ತು ಕುಟುಂಬಸ್ಥರು ನಿಖಿಲ್​​ನನ್ನು ಕೇಶ್ವಾಪುರ ಠಾಣೆಗೆ ಕರೆಯಿಸಿದ್ದರು. ಠಾಣೆಯಲ್ಲಿ ಪೊಲೀಸರು ನಿಖಲ್​ಗೆ ಮಾನಿಸಕವಾಗಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಕೇಶ್ವಾಪುರ ಪೊಲೀಸರು ನಿಖಲ್​ಗೆ ಒಂದೇ ದಿನದಲ್ಲಿ 2 ಲಕ್ಷ ರೂ. ನೀಡುವಂತೆ ತಾಕೀತು ಮಾಡಿದ್ದರು. ಇದರಿಂದ ಮನನೊಂದು ಮನೆಗೆ ಬಂದ ನಿಖಿಲ್​​​, ಇಂದು (ನ.03) ಬೆಳಗಿನ ಜಾವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಹಾಗೂ ಭ್ರೂಣ ಮೃತ

ಕೊಪ್ಪಳ: ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಹಾಗೂ ಭ್ರೂಣ ಮೃತಪಟ್ಟಿರುವ ಘಟನೆ ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.  ಅರಳಿಹಳ್ಳಿ ಗ್ರಾಮದ ನಿವಾಸಿ ಅಂಬಿಕಾ ಯಮನೂರಪ್ಪ (30) ಮೃತ ಗರ್ಭಿಣಿ. ಸೂಕ್ತ ಸಮಯದಲ್ಲಿ ಸಿಜೇರಿಯನ್‌ ಮಾಡದಿದ್ದರಿಂದ ಭ್ರೂಣ ಸಾವಿಗೀಡಾಗಿದೆ. ಇನ್ನು ಭ್ರೂಣ ಹೆರಿಗೆಗೆ ಮುನ್ನವೇ ಮೃತಪಟ್ಟಿದ್ದರೂ ಸಿಬ್ಬಂದಿ ಹೊರತೆಗೆದಿರಲಿಲ್ಲ. ಆಸ್ಪತ್ರೆಗೆ ವೈದ್ಯರು ಬಾರದೆ ನರ್ಸ್‌ಗಳಿಗೆ ಜವಾಬ್ದಾರಿ ವಹಿಸಿರುವ ಆರೋಪ ಕೇಳಿಬಂದಿದೆ. ಅಂಬಿಕಾ ಸ್ಥಿತಿ ಕೈ ಮೀರಿದಾಗ ಸಿಬ್ಬಂದಿ ಜಿಲ್ಲಾಸ್ಪತ್ರೆಗೆ ಶಿಫಾರಸು ಮಾಡಿದ್ದರು.

ಅಂಬಿಕಾ ಅವರಿಗೆ ಮೂರು ಹೆರಿಗೆ ನಾರ್ಮಲ್‌ ಆಗಿತ್ತು, ನಾಲ್ಕನೇ ಹೆರಿಗೆಗಾಗಿ ಬಂದಿದ್ದರು. ನಾರ್ಮಲ್ ಹೆರಿಗೆ ಆಗುತ್ತೆ ಎಂದು ನಿರ್ಲಕ್ಷ್ಯ ವಹಿಸಿದ್ದೇ ಅಂಬಿಕಾ ಸಾವಿಗೆ ಕಾರಣವಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಿಜೇರಿಯನ್‌ ಮಾಡದೇ ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆಂದು ಆರೋವಿದೆ. ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಕ್ರಮಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Fri, 3 November 23

ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು