AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನೂಪುರ್ ಶರ್ಮಾ ಬೆಂಬಲಿಗ ಅಭಿಯಾನ ಶುರು ಮಾಡುತ್ತೇವೆ, ಅದೇನಾಗುತ್ತೋ ನೋಡೋಣ: ಪ್ರಮೋದ್ ಮುತಾಲಿಕ್ ಸವಾಲು

ನಾನೂ ಸೇರಿದಂತೆ ಲಕ್ಷಾಂತರ ಜನರು ನೂಪುರ್ ಶರ್ಮಾರನ್ನು ಬೆಂಬಲಿಸುತ್ತೇವೆ. ತಾಕತ್ತಿದ್ರೆ ಬನ್ನಿ ನೋಡೋಣ ಎಂದು ಸವಾಲು ಹಾಕಿದರು

ನಾನು ನೂಪುರ್ ಶರ್ಮಾ ಬೆಂಬಲಿಗ ಅಭಿಯಾನ ಶುರು ಮಾಡುತ್ತೇವೆ, ಅದೇನಾಗುತ್ತೋ ನೋಡೋಣ: ಪ್ರಮೋದ್ ಮುತಾಲಿಕ್ ಸವಾಲು
ಪ್ರಮೋದ್ ಮುತಾಲಿಕ್
TV9 Web
| Edited By: |

Updated on: Jun 29, 2022 | 3:01 PM

Share

ಧಾರವಾಡ: ರಾಜಸ್ಥಾನದ ಉದಯಪುರದಲ್ಲಿ ಬಿಜೆಪಿಯ ಉಚ್ಚಾಟಿತ ವಕ್ತಾರೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಕನ್ಹಯ್ಯ ಲಾಲ್ ಎನ್ನುವವರನ್ನು ಹತ್ಯೆ ಮಾಡಿರುವ ಘಟನೆಯನ್ನು ಹಿಂದುತ್ವವಾದಿ ಸಂಘಟನೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಟುವಾಗಿ ಖಂಡಿಸಿದರು. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹತ್ಯೆಯನ್ನು ಖಂಡಿಸದ ಬುದ್ಧಿಜೀವಿಗಳ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ‘ಸಣ್ಣಪುಟ್ಟದಕ್ಕೆಲ್ಲ ಧ್ವನಿ ಎತ್ತುತ್ತಿದ್ದ ಬುದ್ಧಿಜೀವಿಗಳು ಈಗ ಎಲ್ಲಿಗೆ ಹೋಗಿದ್ದಾರೆ’ ಎಂದು ಪ್ರಶ್ನಿಸಿದರು.

ನಾನೂ ಸೇರಿದಂತೆ ಲಕ್ಷಾಂತರ ಜನರು ನೂಪುರ್ ಶರ್ಮಾರನ್ನು ಬೆಂಬಲಿಸುತ್ತೇವೆ. ತಾಕತ್ತಿದ್ರೆ ಬನ್ನಿ ನೋಡೋಣ ಎಂದು ಸವಾಲು ಹಾಕಿದರು. ಅಂಥ ಕೃತ್ಯಗಳನ್ನು ಇಲ್ಲಿ ನಡೆಸಲು ಆಗುವುದಿಲ್ಲ. ಕನ್ಹಯ್ಯಾ ಲಾಲ್ ಹತ್ಯೆ ಕೇವಲ ಯಾರೋ ಇಬ್ಬರು ನಡೆಸಿದ ಕೃತ್ಯವಲ್ಲ. ಈ ದುಷ್ಕೃತ್ಯದ ಹಿಂದೆ ಇಸ್ಲಾಮಿಕ್​ ಶಕ್ತಿ ಇದೆ ಎಂದು ವಾಗ್ದಾಳಿ ನಡೆಸಿದರು.

ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ದೇಶಾದ್ಯಂತ ಹಿಂದುತ್ವವಾದಿ ಸಂಘಟನೆಗಳು ಅಭಿಯಾನ ನಡೆಸಲಿವೆ. ‘ನಾನು ಕನ್ಹಯ್ಯ ಲಾಲ್, ನಾನು ನೂಪುರ್ ಶರ್ಮಾ ಬೆಂಬಲಿಗ’ ಅಭಿಯಾನ ನಡೆಸುತ್ತೇವೆ. ಲಕ್ಷಾಂತರ ಜನ ನೂಪುರ್ ಶರ್ಮಾ ಬೆಂಬಲಿಸುತ್ತೇವೆ. ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ. ಸಾವಿರಾರು ವರ್ಷಗಳಿಂದ ನಿಮ್ಮನ್ನು ಎದುರಿಸಿ ಮಣ್ಣು ಮುಕ್ಕಿಸಿದ್ದೇವೆ. ಇದಕ್ಕೂ ಕೂಡ ಉತ್ತರ ಕೊಡುತ್ತೇವೆ ಎಂದು ಸವಾಲು ಹಾಕಿದರು.

ದೇವಸ್ಥಾನದಲ್ಲಿ ಅನ್ಯಧರ್ಮಿಯರ ವ್ಯಾಪಾರ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಬಹು ಹಿಂದಿನಿಂದಲೂ ಸರ್ಕಾರ ಮಾಡಿದ್ದ ನಿಯಮ ಜಾರಿಯಲ್ಲಿತ್ತು. ಆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪ್ರತಿಭಟಿಸಿದ್ದರು. ಕಲ್ಲಂಗಡಿ ಒಡೆದಾಗ ರಕ್ತಪಾತವಾದಂತೆ ರಾದ್ಧಾಂತ ಮಾಡಿದ್ದರು. ಶಾಸಕ ಪ್ರಸಾದ ಅಬ್ಬಯ್ಯ ನನ್ನ ಗಡಿಪಾರಿಗೆ ಆಗ್ರಹಿಸಿದ್ದರು. ಈಗ ಕನ್ಹಯ್ಯ ಲಾಲ್ ಹತ್ಯೆ ಆಗಿದೆ. ಅಬ್ಬಯ್ಯ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

ರಾಜಸ್ಥಾನದಲ್ಲಿ ಅಬ್ಬಯ್ಯನವರ ಕಾಂಗ್ರೆಸ್ ಸರ್ಕಾರವೇ ಇದೆ. ಈಗ ಅಬ್ಬಯ್ಯ ಬಾಯಿ ಬಿಡಬೇಕು. ಬುದ್ಧಿಜೀವಿಗಳು ಮುಸ್ಲಿಂ, ಕ್ರಿಶ್ಚಿಯನ್ನರ ಏಜೆಂಟುಗಳಂತೆ ದುಡ್ಡು ತೆಗೆದುಕೊಂಡು ಮಾತನಾಡುತ್ತಾರೆ. ಈಗ ರುಂಡ ಕತ್ತರಿಸಿದ್ದಾರೆ. ಈಗ ಸಿದ್ದರಾಮಯ್ಯ ಸಹ ಮಾತನಾಡಬೇಕು. ಆ ಮನೆ ಬಹಿಷ್ಕಾರ ಹಾಕಲು ಮುಸ್ಲಿಂ ಸಮಾಜಕ್ಕೆ ಹೇಳಬೇಕು. ಅವರ ಮನೆಗಳ ವಿರುದ್ಧ ಫತ್ವಾ ಹೊರಡಿಸಲು ಹೇಳಬೇಕು. ಹಿಂದೆ ಟಾಡಾದಂಥ ಶಕ್ತಿಶಾಲಿ ಕಾಯ್ದೆಗಳಿದ್ದವು. ಕಾಂಗ್ರೆಸ್ ಅದನ್ನು ರದ್ದು ಮಾಡಿತ್ತು. ಈಗ ಮತ್ತೆ ಅಂತಹ ಕಠಿಣ ಕಾನೂನು ತರಬೇಕು ಎಂದು ಒತ್ತಾಯಿಸಿದರು.

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು