AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಡಿಮೆಯಾದರೆ ವಿಜಯದಶಮಿಯಿಂದ ಜೆಡಿಎಸ್ ಹೋರಾಟ ಆರಂಭ; ಹೆಚ್.ಡಿ.ಕುಮಾರಸ್ವಾಮಿ

ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಗ್ರಹಿಸಿ ಆಲಮಟ್ಟಿಯಿಂದ, ಮಹದಾಯಿ ಯೋಜನೆಗಾಗಿ ಬೆಳಗಾವಿಯಿಂದ ಪಾದಯಾತ್ರೆ ಮಾಡುತ್ತೇವೆ. ಎತ್ತಿನಹೊಳೆ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತೇವೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಕೊರೊನಾ ಕಡಿಮೆಯಾದರೆ ವಿಜಯದಶಮಿಯಿಂದ ಜೆಡಿಎಸ್ ಹೋರಾಟ ಆರಂಭ; ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾಸ್ವಾಮಿ
TV9 Web
| Edited By: sandhya thejappa|

Updated on:Aug 24, 2021 | 11:35 AM

Share

ಹುಬ್ಬಳ್ಳಿ: ಜನಾಶೀರ್ವಾದ ಯಾತ್ರೆಯಲ್ಲಿ (Janashirvada Yatra) ಯಾವುದೇ ಸಂದೇಶ ಇಲ್ಲ. ಗುಂಡು ಹಾರಿಸಿ ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಹಾರ ತುರಾಯಿ ಹಾಕಿಕೊಂಡು ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಕೊರೊನಾ ನಿಯಮ ಕೂಡಾ ವ್ಯಾಪಕವಾಗಿ ಉಲ್ಲಂಘಿಸಲಾಗುತ್ತಿದೆ. ಕಾಂಗ್ರೆಸ್ ನಾಯಕರಿಂದಲೂ ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ರಾಜಕೀಯ ನಾಯಕರಾದ ನಾವೇ ನಿಯಮ ಉಲ್ಲಂಘಿಸುತ್ತಿದ್ದೇವೆ ಎಂದು ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಗ್ರಹಿಸಿ ಆಲಮಟ್ಟಿಯಿಂದ, ಮಹದಾಯಿ ಯೋಜನೆಗಾಗಿ ಬೆಳಗಾವಿಯಿಂದ ಪಾದಯಾತ್ರೆ ಮಾಡುತ್ತೇವೆ. ಎತ್ತಿನಹೊಳೆ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತೇವೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ನ್ಯಾಯ ಸಿಗುತ್ತಿಲ್ಲ. ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಕೇಂದ್ರದ ಕಣ್ಣು ತೆರೆಸಲು ಪಾದಯಾತ್ರೆ ಮಾಡುತ್ತೇವೆ. ಕೊರೊನಾ ಕಡಿಮೆಯಾದರೆ ಇದೇ ವಿಜಯದಶಮಿಯಿಂದ ನಮ್ಮ ಹೋರಾಟ ಆರಂಭವಾಗುತ್ತದೆ ಎಂದು ಹೇಳಿದರು.

14 ತಿಂಗಳಲ್ಲಿ ಉತ್ತರ ಕರ್ನಾಟಕಕ್ಕೆ ನಾನೇನು ಮಾಡಿದ್ದೆ. ಈ ಭಾಗದ ನಾಯಕರು ಏನು ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಲಿ. ಜೆಡಿಎಸ್ ಗೆಲ್ಲುವ ಸಾಧ್ಯತೆ ಇರುವ ಕ್ಷೇತ್ರಗಳಲ್ಲಿ ವರ್ಕ್​ಶಾಪ್ ಮಾಡುತ್ತೇವೆ. ಹಳ್ಳಿಹಳ್ಳಿಗೂ ಹೋಗಿ ಶಕ್ತಿ ತುಂಬುತ್ತೇವೆ. ಸಿದ್ದರಾಮಯ್ಯನವರಿಗೆ ಜೆಡಿಎಸ್ ಮುಗಿಸುವುದೇ ಕೆಲಸ. ಅವರು ಯಾವತ್ತೂ ಜನತಾ ಪರಿವಾರ ಅಂತ ಹೆಳಲೇ ಇಲ್ಲ. ಸಿಎಂ ಬೊಮ್ಮಾಯಿಯವರಲ್ಲಿ ಇನ್ನೂ ಸ್ವಲ್ಪ ಭಾವನೆ ಇದೆ. ಕಾಂಗ್ರೆಸ್ ಪರವಾಗಿ ನನ್ನ ನಿಲುವಿಲ್ಲ ಅಂತ ಹೆಚ್ಡಿಕೆ ಅಭಿಪ್ರಾಯಪಟ್ಟರು.

ಇನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಎಲೆಕ್ಷನ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ, 65-70 ವಾಡ್೯ಗಳಿಗೆ ಅಭ್ಯರ್ಥಿಗಳನ್ನ ಹಾಕುತ್ತೇವೆ. ಹಲವಾರು ವಿದ್ಯಾವಂತರಿಗೆ ಟಿಕೆಟ್ ನೀಡಿದ್ದೇವೆ. ಕಲಬುರಗಿಯಲ್ಲೂ ಎಲ್ಲಾ ವಾಡ್೯ಗಳಿಗೂ ಅಭ್ಯರ್ಥಿಗಳನ್ನ ಹಾಕುತ್ತೇವೆ. ಆದರೆ ಬೆಳಗಾವಿಯಲ್ಲಿ ನಮಗೆ ಸ್ವಲ್ಪ ಹಿನ್ನಡೆಯಿದೆ ಅಂತ ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಶಾಲೆಗಳಿಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ; 1 ರಿಂದ 8ನೇ ತರಗತಿ ಆರಂಭದ ಬಗ್ಗೆಯೂ ಚರ್ಚೆ

ಶಾಲೆ ಆರಂಭ: ಕೊರೊನಾ ಬಗ್ಗೆಯೇ ಮಕ್ಕಳಿಗೆ ಮೊದಲ ಪಾಠ; ಜಾಗೃತಿ ಮೂಡಿಸುತ್ತಿರುವ ಶಿಕ್ಷಕರು

(If corona goes down we will start the protest from october said HD Kumaraswamy in hubli)

Published On - 11:30 am, Mon, 23 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು