AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಮ್ಯಾಚ್ ಇದ್ದರೆ ನನಗೆ ಸರ್ಕಾರಿ ರಜೆ: ರೈತನ ದೇಶಾಭಿಮಾನದ ವಿಡಿಯೋ ವೈರಲ್

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಭಾನುವಾರ (ನವೆಂಬರ್ 19) ವಿಶ್ವಕಪ್ 2023 ಫೈನಲ್ ಪಂದ್ಯ ನಡೆಯಲಿದೆ. ಭಾರತ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವಾಗಲೇ ಇಲ್ಲೊಂದು ರೈತನ ವಿಡಿಯೋ ವೈರಲ್ ಆಗುತ್ತಿದೆ. ಭಾರತದ ಕ್ರಿಕೆಟ್ ಮ್ಯಾಚ್ ಇರುವಾಗ ಈ ರೈತ ತನ್ನೆಲ್ಲಾ ಕೆಲಸಗಳಿಗೆ ರಜೆ ಕೊಟ್ಟು ಟಿವಿ ಮುಂದೆ ಕುಳಿತುಬಿಡುತ್ತಾರೆ..

ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on:Nov 17, 2023 | 1:16 PM

Share

ಹುಬ್ಬಳ್ಳಿ, ನ.17: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಭಾನುವಾರ (ನವೆಂಬರ್ 19) ವಿಶ್ವಕಪ್ 2023 (World Cup) ಫೈನಲ್ ಪಂದ್ಯ ನಡೆಯಲಿದೆ. ಭಾರತ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವಾಗಲೇ ಇಲ್ಲೊಂದು ರೈತನ ವಿಡಿಯೋ ವೈರಲ್ (Video Viral) ಆಗುತ್ತಿದೆ. ಭಾರತದ ಕ್ರಿಕೆಟ್ ಮ್ಯಾಚ್ ಇರುವಾಗ ಈ ರೈತ ತನ್ನೆಲ್ಲಾ ಕೆಲಸಗಳಿಗೆ ರಜೆ ಕೊಟ್ಟು ಟಿವಿ ಮುಂದೆ ಕುಳಿತುಬಿಡುತ್ತಾರೆ..

ಹೌದು, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕೆ.ಹುಣಸಿಕಟ್ಟಿ ಗ್ರಾಮದ ರೈತನ ಶೇಖಯ್ಯ ಎಂಬವರು ಅಪ್ಪಟ ಕ್ರಿಕೆಟ್ ಅಭಿಮಾನಿ. ಭಾರತ ತಂಡದ ಮ್ಯಾಚ್ ಇತ್ತು ಎಂದಾದರೆ ಅಂದು ಶೇಖಯ್ಯ ಅವರು ಎಷ್ಟೇ ಕೆಲಸಗಳಿದ್ದರು ಅಂದು ಯಾವುದೇ ಕೆಲಸ ಮಾಡದೆ ಟಿವಿ ಮುಂದೆ ಕುಳಿತುಬಿಡುತ್ತಾರೆ.

ಇದನ್ನೂ ಓದಿ: 20 ವರ್ಷಗಳ ನಂತರ ಭಾರತ- ಆಸೀಸ್ ಫೈನಲ್ ಫೈಟ್; ಲೆಕ್ಕ ಚುಕ್ತಾ ಮಾಡುವ ತವಕದಲ್ಲಿ ಟೀಂ ಇಂಡಿಯಾ!

ಮ್ಯಾಚ್ ಇದ್ರೆ ಎಲ್ಲ ಕೆಲಸ ಬಿಟ್ಟು ಕ್ರಿಕೆಟ್ ನೋಡ್ತೀವಿ, ನಮಗೆ ಬೇಕಾದಷ್ಟ ಕೆಲಸ ಇದ್ರು ನಾವ ಕೆಲಸ ಮಾಡಲ್ಲ. ಅವತ್ತು ನಮಗೆ ಸರ್ಕಾರ ರಜೆ. ನಾವ ಕೆಲಸ ಮಾಡೋಕೆ ಸಮಯ ಇದೆ, ಆದ್ರೆ ಮ್ಯಾಚ್ ಇದ್ರೆ ನಮಗೆ ಸರ್ಕಾರಿ ರಜೆ. ಇಂಡಿಯಾದವರ ಆಟ ನಾವ ಮನಸ್ಸಿಗೆ ಬಂದಿದೆ ಎಂದು ಶೇಖಯ್ಯ ಹೇಳಿದ್ದಾರೆ. ಅಲ್ಲದೆ, ತಾನು ಹಿಂದಿನಿಂದಲೂ ಕ್ರಿಕೆಟ್ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ಈ ಬಾರಿ ಭಾರತ ವಿಶ್ವಕಪ್ ಗೆದ್ದೇ ಗೆಲ್ಲುತ್ತೆ ಎನ್ನುವ ವಿಶ್ವಾಸದಲ್ಲಿ ಶೇಖಯ್ಯ ಇದ್ದಾರೆ. ನಾವ ಪರಮಾತ್ಮನ ಹತ್ರ ಬೇಡಿಕೊಳ್ತೀವಿ ಇಂಡಿಯಾ ಗೆಲ್ಲಬೇಕು. ಮ್ಯಾಚ್ ನಮಗೆ ಇಂಟ್ರಸ್ಟ್ ಬರಬೇಕು ಎಂದು ಹೇಳಿದ್ದಾರೆ. ಸದ್ಯ ಇದರ ವಿಡಿಯೀ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Fri, 17 November 23

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್