AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವೈಫಲ್ಯ; ಲಾಡ್ಜ್​ಗೆ​​ ಹೋಗಿ ಪ್ರಾಣ ಬಿಟ್ಟ ಯುವಕ

ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗೆ ಬಾಳಿ ಬದುಕಬೇಕಾದ ಯುವಕ-ಯುವತಿಯರು ಜೀವತೊರೆಯುತ್ತಿದ್ದಾರೆ. ಅದರಂತೆ ಧಾರವಾಡ (Dharwad)ದ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್​​ನಲ್ಲಿ‌ ಪ್ರೇಮ‌ ವೈಫಲ್ಯ ಹಿನ್ನೆಲೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪ್ರೇಮ ವೈಫಲ್ಯ; ಲಾಡ್ಜ್​ಗೆ​​ ಹೋಗಿ ಪ್ರಾಣ ಬಿಟ್ಟ ಯುವಕ
ಧಾರವಾಡದಲ್ಲಿ ಯುವಕ ವಿಷ ಸೇವಿಸಿ ಆತ್ಮಹತ್ಯೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Sep 08, 2024 | 2:50 PM

Share

ಧಾರವಾಡ, ಸೆ.08: ಪ್ರೇಮ‌ ವೈಫಲ್ಯ ಹಿನ್ನೆಲೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ (Dharwad)ದ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್​​ನಲ್ಲಿ‌ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಿಗೆಹಡ್ಲು ಕಾಮನಕೆರೆ ನಿವಾಸಿ ಚಿನ್ಮಯ್ ಎಸ್.ಜಿ, ಆತ್ಮಹತ್ಯೆ ಮಾಡಿಕೊಂಡ ಯುವಕ. ಇತ ಸೆ.04 ರಂದು ಶ್ರೀನಿವಾಸ್ ಲಾಡ್ಜ್​ನ ರೂಮ್ ನಂ. 212 ರಲ್ಲಿ ತಂಗಿದ್ದ. ಸೆ. 6 ರಂದು ಸಂಜೆ ರೂಮ್ ಕ್ಲೀನ್ ಮಾಡಲು ಲಾಡ್ಜ್ ಸಿಬ್ಬಂದಿ ಹೋಗಿದ್ದ ವೇಳೆ ರೂಮ್ ಒಳಗಿನಿಂದ ಲಾಕ್ ಆಗಿತ್ತು.

ಈ ಹಿನ್ನಲೆ ಮಾರನೇ ದಿನ(ಸೆ. 7) ರಾತ್ರಿ ಲಾಡ್ಜ್ ಸಿಬ್ಬಂದಿ ಮತ್ತೆ ರೂಮ್ ಬಾಗಿಲು ತಟ್ಟಿದ್ದಾನೆ. ಆದರೂ ಚಿನ್ಮಯ್ ಬಾಗಿಲು ತೆರೆಯದ ಹಿನ್ನಲೆ ಅನುಮಾನಗೊಂಡು ಮತ್ತೊಂದು ಬೀಗ ಬಳಸಿ ಲಾಕ್ ಓಪನ್ ಮಾಡಿದ್ದಾರೆ. ಬಾಗಿಲು ತೆಗೆದಾಗ ಯುವಕ ಚಿನ್ಮಯ್​​ ಶವವಾಗಿ ಬಿದ್ದಿದ್ದ. ಕೂಡಲೇ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಲವರ್ ಜೊತೆ ರಾತ್ರಿ ಲಾಡ್ಜ್​ನಲ್ಲಿದ್ದ ಅಪ್ರಾಪ್ತ ಬಾಲಕಿ ಮನೆಗೆ ಬಂದಕೂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಬೈಕ್, ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಂಭೀರ ಗಾಯ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಬಳಿ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಾಳುಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಈ ಕುರಿತು ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Sun, 8 September 24

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ