ಅಪಘಾತದ ವಿಮಾ ಹಣ ನೀಡಲು ಕಂಪನಿ ನಿರಾಕರಣೆ; ವಿಚಾರಣೆ ನಡೆಸಿ ತಾಯಿ-ಮಗಳಿಗೆ 15 ಲಕ್ಷ ರೂ. ಕೊಡುವಂತೆ​ ಆಯೋಗ ಆದೇಶ

ಸರಸ್ವತಿಪುರ ಬಡಾವಣೆಯ ನಿವಾಸಿಯಾಗಿದ್ದ ಪ್ರಶಾಂತ್​ ಶಾನಭಾಗ್ ಎನ್ನುವವರು ತಮ್ಮ ದ್ವಿಚಕ್ರ ವಾಹನದ ಮೇಲೆ ಪಿ.ಎ ಕವರೇಜ್ ಸಮೇತ ವಿಮೆ ಮಾಡಿಸಿದ್ದರು. ಯಾವುದೇ ಅಪಘಾತದಿಂದ ವಿಮಾದಾರ ಮೃತನಾದಲ್ಲಿ ಆತನ ಅವಲಂಬಿತರಿಗೆ 15 ಲಕ್ಷ ರೂ. ಪರಿಹಾರ ಕೊಡಲು ವಿಮಾ ಪಾಲಿಸಿಯಲ್ಲಿ ನಿಯಮ ಇತ್ತು. ಆದರೆ ಅಪಘಾತವಾಗಿ ಮರಹೊಂದಿದರೂ ವಿಮಾ ಕಂಪನಿ ಹಣ ನೀಡಲು ನಿರಾಕರಣೆ ಮಾಡಿತ್ತು. ಇದೀಗ ಗ್ರಾಹಕರ ಆಯೋಗ ವಿಚಾರಣೆ ನಡೆಸಿ ಮೃತರ ಪತ್ನಿ ಹಾಗೂ ಮಗಳಿಗೆ 15 ಲಕ್ಷ ರೂ. ನೀಡಲು ಆದೇಶಿಸಿದೆ.

ಅಪಘಾತದ ವಿಮಾ ಹಣ ನೀಡಲು ಕಂಪನಿ ನಿರಾಕರಣೆ; ವಿಚಾರಣೆ ನಡೆಸಿ ತಾಯಿ-ಮಗಳಿಗೆ 15 ಲಕ್ಷ ರೂ. ಕೊಡುವಂತೆ​ ಆಯೋಗ ಆದೇಶ
ತಾಯಿ-ಮಗಳಿಗೆ ರೂ.15 ಲಕ್ಷ ವಿಮಾ ಹಣ ನೀಡಲು ವಿಮಾ ಕಂಪನಿಗೆ ಆಯೋಗ ಆದೇಶ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: May 24, 2024 | 4:06 PM

ಧಾರವಾಡ, ಮೇ.24: ಸರಸ್ವತಿಪುರ ಬಡಾವಣೆಯ ನಿವಾಸಿಯಾಗಿದ್ದ ಪ್ರಶಾಂತ್​ ಶಾನಭಾಗ್ ಎನ್ನುವವರು ತಮ್ಮ ದ್ವಿಚಕ್ರ ವಾಹನದ ಮೇಲೆ ಪಿ.ಎ ಕವರೇಜ್ ಸಮೇತ ವಿಮೆ ಮಾಡಿಸಿದ್ದರು. ಯಾವುದೇ ಅಪಘಾತ(Accidnet)ದಿಂದ ವಿಮಾದಾರ ಮೃತನಾದಲ್ಲಿ ಆತನ ಅವಲಂಬಿತರಿಗೆ 15 ಲಕ್ಷ ರೂ. ಪರಿಹಾರ ಕೊಡಲು ವಿಮಾ ಪಾಲಿಸಿಯಲ್ಲಿ ನಿಯಮ ಇತ್ತು. ಈ ಬಗ್ಗೆ ವಿಮಾದಾರ ಎದುರುದಾರ ವಿಮಾ ಕಂಪನಿ(insurance company)ಗೆ 1489 ರೂಪಾಯಿ ಪ್ರಿಮಿಯಮ್ ಹಣ ಸಂದಾಯ ಮಾಡಿದ್ದರು. 2022 ಅಕ್ಟೋಬರ್ 11 ರಂದು ಪ್ರಶಾಂತ್​ ವಾಹನ ಅಪಘಾತದಲ್ಲಿ ತೀವ್ರಗಾಯಗೊಂಡು ಬಳಿಕ ಮೃತರಾಗಿದ್ದರು. ಈ ಬಗ್ಗೆ ವಾಹನ ಚಾಲಕನ ಮೇಲೆ ಕ್ರಿಮಿನಲ್ ಪ್ರಕರಣ ಸಹ ದಾಖಲಾಗಿತ್ತು. ಆ ಎಲ್ಲ ದಾಖಲೆಗಳ ಸಮೇತ ಮೃತ ಪ್ರಶಾಂತ್​ ಅವರ ಪತ್ನಿ ಪ್ರೀತಿ ಮತ್ತು ಅವರ ಮಗಳಾದ ಪೂರ್ವಿ ತಾವು ಮೃತನ ವಾರಸುದಾರರಿದ್ದು, ತಮಗೆ 15 ಲಕ್ಷ ರೂ. ವಿಮಾ ಹಣ ಕೊಡುವಂತೆ ಐಸಿಐಸಿಐ ಲೋಂಬಾರ್ಡ್ ವಿಮಾ ಕಂಪನಿಗೆ ಕ್ಲೇಮ್ ಅರ್ಜಿ ಸಲ್ಲಿಸಿದ್ದರು. ಮೃತ ಪ್ರಶಾಂತ್​ ಅಪಘಾತ ಕಾಲಕ್ಕೆ ಅಧಿಕೃತ ಚಾಲನಾ ಪತ್ರ ಹೊಂದಿರಲಿಲ್ಲ ಎನ್ನುವ ಕಾರಣವನ್ನು ಕೊಟ್ಟು ಅವರು ವಿಮಾ ಪಾಲಸಿ ಷರತ್ತನ್ನು ಉಲ್ಲಂಘಿಸಿದ್ದಾರೆಂದು ವಿಮಾ ಕಂಪನಿಯವರು ಕ್ಲೇಮ್ ನಿರಾಕರಿಸಿದ್ದರು.

ಈ ಹಿನ್ನಲೆ ವಿಮಾ ಕಂಪನಿಗೆ ಹಲವು ಬಾರಿ ವಿಮೆ ಹಣವನ್ನು ಪಾವತಿಸಲು ಕೇಳಿಕೊಂಡರೂ ಪರಿಹಾರ ಕೊಟ್ಟಿರಲಿಲ್ಲ. ಅಂತಹ ವಿಮಾ ಕಂಪನಿಯವರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಹೇಳಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗ, ‘ಮೋಟಾರು ವಾಹನ ಕಾಯ್ದೆಯ ನಿಯಮದಂತೆ ಅಪಘಾತವಾದ ದಿನ ಪ್ರಶಾಂತ್​ ಚಾಲನಾ ಪತ್ರ ಹೊಂದಿರುವುದು ಕಂಡುಬರುತ್ತದೆ. ಹೊಸ ಮೋಟಾರು ವಾಹನ ಕಾಯ್ದೆಯ ನಿಯಮವನ್ನು ಅರ್ಥೈಸುವಲ್ಲಿ ಎದುರುದಾರ ವಿಮಾ ಕಂಪನಿಯವರು ವಿಫಲರಾಗಿದ್ದಾರೆಂದು ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

ಇದನ್ನೂ ಓದಿ:ನಾಮಿನಿಗೆ ವಿಮಾ ಹಣ ಕೊಡದ ಖಾಸಗಿ ವಿಮಾ ಕಂಪನಿಗೆ, 10 ಲಕ್ಷ ರೂ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

ಮೃತ ಅಧಿಕೃತ ಚಾಲನಾ ಪತ್ರ ಹೊಂದಿದ್ದರೂ ದೂರುದಾರರ ವಿಮಾ ಕ್ಲೇಮ್​ನ್ನು ತಿರಸ್ಕರಿಸಿರುವುದು ವಿಮಾ ನಿಯಮಗಳಿಗೆ ವಿರುದ್ಧವಾಗುತ್ತದೆ ಮತ್ತು ಅಂತಹವರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆಯ ಉಲ್ಲಂಘನೆಯು ಆಗುತ್ತದೆ ಎಂದು ಆಯೋಗ ತನ್ನ ತೀರ್ಪಿನಲ್ಲಿ ತಿಳಿಸಿದೆ. ಇದರಿಂದ ಎದುರುದಾರ ಐಸಿಐಸಿಐ ಲೋಂಬಾರ್ಡ್ ವಿಮಾ ಕಂಪನಿಯವರು ದೂರುದಾರರಿಗೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿರುವುದರಿಂದ ವಿಮೆ ತಿರಸ್ಕರಿಸಿದ ದಿನಾಂಕದಿಂದ ಶೇ. 8 % ರಂತೆ ಬಡ್ಡಿ ಸಮೇತ  15 ಲಕ್ಷ ರೂ. ವಿಮಾ ಹಣ ದೂರುದಾರರಿಗೆ ನೀಡುವಂತೆ ಆಯೋಗ ಆದೇಶಿಸಿದೆ. ದೂರುದಾರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ಹಿಂಸೆಗಾಗಿ ಅವರಿಗೆ 50,000 ರೂ. ಪರಿಹಾರ ಮತ್ತು 10,000 ರೂ. ಪ್ರಕರಣದ ಖರ್ಚು ವೆಚ್ಚ ಕೊಡುವಂತೆ ವಿಮಾ ಕಂಪನಿಯವರಿಗೆ ಆಯೋಗ ನಿರ್ದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​