ಹುಬ್ಬಳ್ಳಿ: ಪ್ರೇಯಸಿ ತಾಯಿಗೆ ಚಾಕು ಹಾಕಿದ: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವನಿಗೆ ಗುಂಡೇಟು

ಹುಬ್ಬಳ್ಳಿ(hubballi)ಯ ಲೋಹಿಯಾನಗರದಲ್ಲಿ ಯುವಕನೊಬ್ಬ ಪ್ರೇಯಸಿ ತಾಯಿಗೆ ಚಾಕು ಇರಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹೇಶ್​ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಘಟನೆ ಕುರಿತು ವಿಚಾರಣೆ ನಡೆಸುವ ವೇಳೆ ಪೊಲೀಸ್​ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿ ಎಸ್ಕೇಫ್​ ಆಗಲು ಪ್ರಯತ್ನಿಸಿದ್ದ. ಈ ಹಿನ್ನಲೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ಅವರು ಆತನ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಈ ಕುರಿತು ವಿವರ ಇಲ್ಲಿದೆ.

ಹುಬ್ಬಳ್ಳಿ: ಪ್ರೇಯಸಿ ತಾಯಿಗೆ ಚಾಕು ಹಾಕಿದ: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವನಿಗೆ ಗುಂಡೇಟು
ಆರೋಪಿ ಮಹೇಶ್
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 25, 2024 | 9:31 PM

ಹುಬ್ಬಳ್ಳಿ, ಸೆ.25: ಹುಬ್ಬಳ್ಳಿ(hubballi)ಯಲ್ಲಿ ಮಹಿಳೆಗೆ ಚಾಕು ಇರಿದಿದ್ದ ಆರೋಪಿ ಮಹೇಶ್​ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೌದು, ವಿಚಾರಣೆ ವೇಳೆ‌ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ‌ಗೆ ಯತ್ನಿಸಿ ಪರಾರಿಯಾಗುವಾಗ ಕಾಲಿಗೆ ಗುಂಡೇಟು ಹೊಡೆಯಲಾಗಿದೆ. ಗಾಯಾಳು ಮಹಿಳೆ ನೀಲಾ ಹಂಪಣ್ಣವರ್ ಮಗಳಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ಹಿನ್ನಲೆ​ ನೀಲಾ ಅವರು ಮಹೇಶ್​ಗೆ ಬುದ್ಧಿವಾದ ಹೇಳಿದ್ದರು. ಅಷ್ಟಕ್ಕೆ ಕೋಪಗೊಂಡ ಆರೋಪಿ ಮಹೇಶ್, ಮಹಿಳೆಗೆ ಚಾಕು ಇರಿದಿದ್ದ. ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಮಹೇಶ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಆರೋಪಿ ಮೇಲೆ ಪೊಲೀಸರು‌ ಫೈರಿಂಗ್ ಮಾಡಿದ್ದಾರೆ. ಹುಬ್ಬಳ್ಳಿಯ ಲೂಹಿಯಾ ನಗರದಲ್ಲಿರುವ ನೀಲಾ ಹಂಪಣ್ಣವರ ಮನೆಗೆ ನುಗ್ಗಿ ಆತ ಚಾಕು ಹಾಕಿದ್ದಾನೆ. ಸಿಕ್ಕ ಸಿಕ್ಕವರಿಗೆ ಬೆದರಿಕೆ ಕೂಡ ಹಾಕಿದ್ದ‌. ಗಾಯಾಳು ನೀಲಾ ಹಂಪಣ್ಣನವರಿಗೆ ಒಟ್ಟು ಐದು ಜನ ಹೆಣ್ಣುಮಕ್ಕಳು ಇದ್ದಾರೆ. ಅವರ ಮಗಳೋರ್ವಳಿಗೆ ಮದುವೆಯಾಗುವಂತೆ ಒತ್ತಾಯ ಮಾಡಿದ್ದ. ಕಳೆದ ಐದು ವರ್ಷದ ಹಿಂದೆ ಇದನ್ನು ಸರಿ ಮಾಡಲಾಗಿತ್ತು.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ: ಬುದ್ಧಿ ಹೇಳಿದ್ದಕ್ಕೆ ಮನೆಗೆ ನುಗ್ಗಿ ಮಹಿಳೆಗೆ ಚಾಕು ಹಾಕಿದ

ಸ್ನೇಹಿತರ ಬಳಿ ಸಾಲ ಪಡೆದು ಚಾಕು ಹಾಕಿ ಎಸ್ಕೇಫ್​ ಆಗಲು ನಿರ್ಧಾರ

ಆದರೆ, ಆರೋಪಿ ಐದು ವರ್ಷದಿಂದ ಅವಳ ಪ್ರತಿಯೊಂದು ಚಲನವಲನವನ್ನು ಗಮನಿಸುತ್ತಿದ್ದ. ಇಂದು ನೀಲಾ ಹಂಪಣ್ಣವರ್​ ಮನೆಗೆ ನುಗ್ಗಿ ಚಾಕು ಇರಿದಿದ್ದಾನೆ. ಅದೃಷ್ಟವಶಾತ್​ ಪ್ರಾಣಾಪಯದಿಂದ ಪಾರಾಗಿದ್ದಾರೆ. ಆತ ಚಾಕು ಇರಿಯಬೇಕು ಎನ್ನುವ ಉದ್ದೇಶಕ್ಕೆ ಸ್ನೇಹಿತರ ಬಳಿ ಸಾಲ ಕೂಡ ಪಡೆದಿದ್ದ‌. 20 ಸಾವಿರ ಸಾಲ ಪಡೆದುಕೊಂಡು ಚಾಕು ಹಾಕಿ ಪರಾರಿಯಾಗಲು ಮುಂದಾಗಿದ್ದ. ಪೊಲೀಸರು ಅರೆಸ್ಟ್ ಮಾಡಿದಾಗ, ಸ್ನೇಹಿತರನ್ನು ತೋರಿಸುತ್ತೇನೆ ಎಂದು ಕರೆದುಕೊಂಡು ಹೋಗಿದ್ದ. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ಹಳೇ ಹುಬ್ಬಳ್ಳಿಯ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರ ಫೈರ್ ಮಾಡಿದ್ದಾರೆ‌. ಪೊಲೀಸರು ಇಷ್ಟು ಅಲರ್ಟ್ ಆಗಿದ್ದರು, ಘಟನೆ ನಡೆದಿದ್ದು ದುರಾದೃಷ್ಟಕರ ಎಂದರು.

ಇನ್ನು ಘಟನೆ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಸದ್ಯ ಗಾಯಾಳು ನೀಲಾ ಹಂಪಣ್ಣವರಿಗೆ ಕಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us