AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ದರೋಡೆ ಗ್ಯಾಂಗ್​ನ ಓರ್ವ ಆರೋಪಿ ಅರೆಸ್ಟ್​​​; ತಪ್ಪಿಸಿಕೊಳ್ಳಲು ಯತ್ನಿಸಿದವನ ಕಾಲಿಗೆ ಮಹಿಳಾ ಪೊಲೀಸ್​ಯಿಂದ ಗುಂಡೇಟು

ಆತ ಅಂತರಾಜ್ಯ ಕಳ್ಳ. ಮೂಲತಃ ಮುಂಬೈ ನಿವಾಸಿಯಾದ ಆತ ಕರ್ನಾಟಕ ಸೇರಿ ನಾಲ್ಕಕ್ಕೂ ಹೆಚ್ಚು ರಾಜ್ಯಗಳಲ್ಲಿ ಆತನ ಮೇಲೆ ಕೊಲೆ, ದರೋಡೆ, ಕಳ್ಳತನ ಸೇರಿ 15 ಕ್ಕೂ ಹೆಚ್ಚು ಕೇಸ್ ಇವೆ. ಕಳ್ಳತನ ಮಾಡೋಕು ಮುಂಚೆ ಆ ಗ್ಯಾಂಗ್ ಸ್ಥಳೀಯರಿಗೆ ಹಣದ ಆಸೆ ತೋರಿಸಿ ಸರ್ವೆ ಮಾಡಿ ಕಳ್ಳತನ ಮಾಡುತ್ತಿದ್ದರು. ಅದರಂತೆ ಚೋಟಾ ಮುಂಬೈನಲ್ಲಿ ಕಳೆದ 10 ದಿನಗಳಿಂದ ಆ ಗ್ಯಾಂಗ್ ಕಳ್ಳತನ ಮಾಡಿತ್ತು. ಆ ಗ್ಯಾಂಗ್​ನ ನಟೋರಿಯಸ್​ ಒಬ್ಬ ಪೊಲೀಸರ ಅತಿಥಿಯಾಗಿದ್ದ. ತನ್ನ ಸಹಚರರನ್ನ‌ ತೋರಿಸ್ತೀನಿ‌ ಅಂದವನ ಮೇಲೆ ಮಹಿಳಾ ಇನ್ಸ್ಪೆಕ್ಟರ್ ‌ಫೈರಿಂಗ್ ಮಾಡಿದ್ದಾರೆ. ಅಷ್ಟಕ್ಕೂ ನಟೋರಿಯಸ್ ಮೇಲೆ ಫೈರಿಂಗ್ ಮಾಡಿದ್ದು ಯಾಕೆ ಅಂತೀರಾ? ಈ ಸ್ಟೋರಿ ಓದಿ.

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ದರೋಡೆ ಗ್ಯಾಂಗ್​ನ ಓರ್ವ ಆರೋಪಿ ಅರೆಸ್ಟ್​​​; ತಪ್ಪಿಸಿಕೊಳ್ಳಲು ಯತ್ನಿಸಿದವನ ಕಾಲಿಗೆ ಮಹಿಳಾ ಪೊಲೀಸ್​ಯಿಂದ ಗುಂಡೇಟು
ಬಂಧಿತ ಆರೋಪಿ, ಗುಂಡೇಟು ಹೊಡೆದ ಮಹಿಳಾ ಪಿಎಸ್​ಐ
ಶಿವಕುಮಾರ್ ಪತ್ತಾರ್
| Edited By: |

Updated on: Jul 26, 2024 | 7:56 PM

Share

ಹುಬ್ಬಳ್ಳಿ, ಜು.26: ವಾಣಿಜ್ಯ ನಗರಿ ಹುಬ್ಬಳ್ಳಿ(Hubballi)ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ‌ ಸದ್ದು ಮೊಳಗಿದೆ.  ಅದು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ನಟೋರಿಯಸ್ ಕಳ್ಳನ ಮೇಲೆ ಫೈರಿಂಗ್​ ಮಾಡಿದ್ದಾರೆ. ಹೌದು, ಜು.17 ರಂದು ಹುಬ್ಬಳ್ಳಿಯ ರಮೇಶ್ ಭವನ ಬಳಿ ಇರುವ ಭುವನೇಶ್ವರಿ ಗೋಲ್ಡ್ ಶಾಪ್​ಗೆ ಕನ್ನ ಹಾಕಿತ್ತು. ಗ್ಯಾಸ್ ಕಟರ್​ನಿಂದ ಶೂಟರ್ ಕಟ್ ಮಾಡಿ, ಸಿಸಿ ಕ್ಯಾಮೆರಾಗೆ ಸ್ಪ್ರೇ ಮಾಡಿ ಗೋಲ್ಡ್ ಶಾಪ್ ಕಳ್ಳತನ ಮಾಡಿತ್ತು. ಸುಮಾರು 850 ಗ್ರಾಂ ಬಂಗಾರ, 50 ಕೆ.ಜಿ ಬೆಳ್ಳಿ ಕಳ್ಳತನ ಆಗಿತ್ತು ಎಂದು ಹೇಳಲಾಗಿತ್ತು. ಈ ಕಳ್ಳತನ‌ ಪ್ರಕರಣ ಬಹಳ ಸೀರಿಯಸ್ ಆಗಿ ತಗೆದುಕೊಂಡ ಹುಬ್ಬಳ್ಳಿ-ಧಾರವಾಡ ಪೊಲೀಸರು‌, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದರು.

ಅಂತರಾಜ್ಯ ಕಳ್ಳನ ಬಂಧನ; ತಪ್ಪಿಸಿಕೊಳ್ಳಲು ಯತ್ನಿಸಿದವನ ಕಾಲಿಗೆ ಗುಂಡೇಟು

ಕಾಲ್ ಡಿಟೇಲ್ಸ್ ಹಿಂದೆ ನಡೆದ ಕಳ್ಳತನ, ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಅಂತರಾಜ್ಯ ಕಳ್ಳ ಫರಾನ್ ಶೇಖ್​ನನ್ನ ಹು-ಧಾ ಪೊಲೀಸರು ವಶಕ್ಕೆ ಪಡೆದಿದ್ದರು. ಫರಾನ್ ಶೇಕ್ ಹುಬ್ಬಳ್ಳಿಗೆ ಬಂದು ಕಳ್ಳತನಕ್ಕೆ ಮುಂಚೆ ಕೆಲವರನ್ನು ಪರಿಚಯ ಮಾಡಿಕೊಂಡಿದ್ದ. ವಿಚಾರಣೆ ವೇಳೆ ಅವರ ಹೆಸರು ಹೇಳಿದ ಕಾರಣ, ಪೊಲೀಸರು‌ ಇಂದು ಬೆಳಗಿನ ಜಾವ ಅವರನ್ನು ಪತ್ತೆ ಹಚ್ಚಲು ಫರಾನ್ ನನ್ನು ಕರೆದುಕೊಂಡು‌ ಹೋಗಿದ್ದರು. ಹುಬ್ಬಳ್ಳಿಯ ಗಾಮನ ಗಟ್ಟಿ ಪ್ರದೇಶದ ಬಳಿ ಕರೆದುಕೊಂಡು‌ ಹೋಗಿದ್ದ ವೇಳೆ ಪೊಲೀಸರನ್ನು ನೂಕಿ ತಪ್ಪಿಸಿಕೊಳ್ಳಲು ಯುತ್ನಸಿದ್ದಾನೆ. ಮೊದಲು ಎರಡು ಸುತ್ತು ಗಾಳಿಯಲ್ಲಿ ಗುಂಡು ಹೊಡೆಯಲಾಗಿದೆ. ಫರಾನ್ ಹೆದರದೆ ಇದ್ದಾಗ, ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಕವಿತಾ ಮಾಡ್ಯಾಳ ಫರಾನ್ ಮೇಲೆ ಫೈರಿಂಗ್‌ ಮಾಡಿದ್ದಾರೆ.

ಇದನ್ನೂ ಓದಿ:ಗುಂಡು ಹಾರಿಸಿದರೂ ಪೊಲೀಸ್ ಜೀಪ್​ ಮೇಲೆ ಕಲ್ಲು ಎಸೆದು ಪರಾರಿಯಾದ ಕಳ್ಳರು

ಇಬ್ಬರು‌ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪಿ

ಇನ್ನು ಫರಾನ್ ಶೇಕ್ ತನಗೆ ಸಹಾಯ ಮಾಡಿದ ಸಹಚರನ್ನು ತೋರಿಸಲು ಹೋದ ಸಮಯದಲ್ಲಿ ಇಬ್ಬರು‌ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ‌ಮಾಡಿದ್ದಾನೆ. ಹುಬ್ಬಳ್ಳಿಯ‌ ಕೇಶ್ವಾಪೂರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಸುಜಾತಾ ಹಾಗೂ ಮಹೇಶ್ ‌ಮೇಲೆ‌ ಕಲ್ಲಿನಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಕವಿತಾ ಫೈರ್ ಮಾಡಿದ್ದಾರೆ. ಫರಾನ್ ಶೆಖ್ ಸಾಮನ್ಯ ಕ್ರಿಮಿನಲ್ ‌ಅಲ್ಲ, ಈ ನಟೋರಿಯಸ್ ಮೇಲೆ 15 ಕ್ಕೂ ಹೆಚ್ಚು ಕೇಸ್ ಗಳಿವೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್​ನಲ್ಲಿ ಅನೇಕ ಕೇಸ್​ಗಳಿವೆ. ಬಹುತೇಕ ಎಲ್ಲವೂ ಕಳ್ಳತನ , ಕೊಲೆ‌, ದರೋಡೆ ಕೇಸ್. ಇಂತಹ ಅಂತರಾಜ್ಯ ಕಳ್ಳನನ್ನ ಹುಬ್ಬಳ್ಳಿ ಪೊಲೀಸರು‌‌ ಮುಂಬೈನಲ್ಲಿ ಅರೆಸ್ಟ್ ಮಾಡಿ ಹುಬ್ಬಳ್ಳಿಗೆ ಕರೆತಂದಿದ್ದರು.

ಕಳೆದ 17 ಕ್ಕೆ ಬಂಗಾರದ ಅಂಗಡಿ ಕಳ್ಳತನ ಮಾಡೋ‌ ಮುಂಚೆ 14 ರಂದು ಗಾಮನಗಟ್ಟಿ ಪ್ರದೇಶದ ಇಬ್ಬರನ್ಮು ಪರಿಚಯ ಮಾಡಿಕೊಂಡಿದ್ದ. ಸಿಟಿ ಹೇಗಿದೆ, ಗೋಲ್ಡ್ ಶಾಪ್ ಎಲ್ಲಿವೆ ಎನ್ನೋದನ್ನ‌ ತಿಳಿಯಲು ಅವರಿಗೆ 2 ಸಾವಿರ ಹಣ ನೀಡಿದ್ದ. ಅದರ ಆಧಾರದ ಮೇಲೆ 17 ರಂದು ಮೂರು ಜನರ ಟೀಮ್,  ಗೋಲ್ಡ್ ಶಾಪ್ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಇವತ್ತು ತನಗೆ ಸಹಾಯ ಮಾಡಿದವರನ್ನ‌ ತೋರಿಸಲು ಹೋದ ಸಮಯದಲ್ಲಿ ತಪ್ಪಿಸಿಕೊಳ್ಳಲು ‌ಮುಂದಾದ ವೇಳೆ ಪೊಲೀಸರು ಫೈರಿಂಗ್‌ ಮಾಡಿದ್ದಾರೆ. ಕಳ್ಳತನ‌ ಕೇಸ್​ನ ಪ್ರಮುಖ ಆರೋಪಿಯಾಗಿರೋ ಫರಾನ್ ಶೇಖ್​ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಒಟ್ಟಾರೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ‌ ಬೆಳ್ಳಂಬೆಳಗ್ಗೆ ಬಂದೂಕು ಸದ್ದು‌ ಮಾಡಿದೆ. ಸತತ ಹತ್ತು ದಿನಗಳಿಂದ ಈ ಗ್ಯಾಂಗ್ ಬೆನ್ನು ಬಿದ್ದಿರೋ ಪೊಲೀಸರು ನಟೋರಿಯಸ್​ನನ್ನ‌ ಬಂಧಿಸಿದೆ. ಇನ್ನುಳಿದ ಅಂತರಾಜ್ಯ ಕಳ್ಳರನ್ನು ಶೀಘ್ರವೇ ಅರೆಸ್ಟ್ ಮಾಡ್ತೀವಿ ಎಂದು ಹುಬ್ಬಳ್ಳಿ ಪೊಲೀಸರು ಹೇಳುತ್ತಿದ್ದಾರೆ. ನಟೋರಿಯಸ್ ಮೇಲೆ ಫೈರ್ ‌ಮಾಡಿದ ಮಹಿಳಾ ಅಧಿಕಾರಿಯ ಧೈರ್ಯವೂ ಮೆಚ್ಚುಗೆಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!