AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯಿಂದ ಧಾರವಾಡ ಐಐಟಿ ಉದ್ಘಾಟನೆ: ಕಾರ್ಯಕ್ರಮಕ್ಕೆ ಭರದಿಂದ ನಡೆದಿದೆ ಸಿದ್ದತೆ, ಖಾಕಿ ಕಣ್ಗಾವಲು

ನಾಳೆ(ಮಾ.12) ಐಐಟಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ, ಐಐಟಿ ಕಾರ್ಯಕ್ರಮದಲ್ಲಿ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, 5 ಎಸ್ಪಿ, 8 ಹೆಚ್ಚುವರಿ ಎಸ್ಪಿ, 28 ಡಿವೈಎಸ್ಪಿ, 63 ಪೊಲೀಸ್ ಇನ್ಸ್ಪೆಕ್ಟರ್, ಸೇರಿ ಒಟ್ಟು 1484 ಪೊಲೀಸ್​ ಸಿಬ್ಬಂದಿಯ ನಿಯೋಜನೆ ಮಾಡಲಾಗಿದೆ.

ಪ್ರಧಾನಿ ಮೋದಿಯಿಂದ ಧಾರವಾಡ ಐಐಟಿ ಉದ್ಘಾಟನೆ: ಕಾರ್ಯಕ್ರಮಕ್ಕೆ ಭರದಿಂದ ನಡೆದಿದೆ ಸಿದ್ದತೆ, ಖಾಕಿ ಕಣ್ಗಾವಲು
ಐಐಟಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ, ಸಿದ್ದಗೊಳ್ಳುತ್ತಿರುವ ವೇದಿಕೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 11, 2023 | 3:22 PM

ಧಾರವಾಡ: ನೂತನವಾಗಿ ಧಾರವಾಡದಲ್ಲಿ ನಿರ್ಮಿಸಲಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT)ಯನ್ನು ನಾಳೆ(ಮಾ.12) ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ, ಐಐಟಿ ಸುತ್ತ ಮುತ್ತ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.  ಸಾರ್ವಜನಿಕ ಸಮಾರಂಭದ ವೇದಿಕೆ, ಪಾರ್ಕಿಂಗ್, ಐಐಟಿಗೆ ಸೇರುವ ರಸ್ತೆಗಳಲ್ಲಿ ಒಟ್ಟು 1484 ಪೊಲೀಸ್​ ಸಿಬ್ಬಂದಿಯ ನಿಯೋಜನೆ ಮಾಡಲಾಗಿದ್ದು, 5 ಎಸ್ಪಿ, 8 ಹೆಚ್ಚುವರಿ ಎಸ್ಪಿ, 28 ಡಿವೈಎಸ್ಪಿ, 63 ಪೊಲೀಸ್ ಇನ್ಸ್ಪೆಕ್ಟರ್, 134 ಪಿಎಸ್ಸೈ, 158 ಎಎಸ್‌ಐ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ. ಭಾನುವಾರ ಮಧ್ಯಾಹ್ನ 3.05ಕ್ಕೆ ಪ್ರಧಾನಿ ಮೋದಿ ಉದ್ಘಾಟನೆ ಮಾಡಿ, ಬಳಿಕ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಮಾರಂಭದಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, ಸಮಾವೇಶಕ್ಕೆ ಬರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. 60ಕ್ಕೂ ಹೆಚ್ಚು ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಿ ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿಯೇ ಒಳ ಬಿಡಲಿದ್ದಾರೆ.

ಹಸಿರು ವಲಯವಾಗಿ ಸಜ್ಜಾಗುತ್ತಿದೆ ಆಡಳಿತ ಭವನ

ಇನ್ನು ಧಾರವಾಡದ ಐಐಟಿ ಮುಖ್ಯ ಕಟ್ಟಡದಲ್ಲಿ ತಯಾರಿ ಭರದಿಂದ ಸಾಗಿದೆ. ಐಐಟಿ ಮುಂಭಾಗದಲ್ಲಿ ಹತ್ತು ಅಡಿ ಎತ್ತರ ಬೃಹತ್ ವೇದಿಕೆ ಸಿದ್ಧಗೊಂಡಿದೆ. ವೇದಿಕೆ ಮುಂಭಾಗದಲ್ಲಿ ಸಿರಿಧಾನ್ಯಗಳ ಕಲಾಕೃತಿ ತಯಾರಿಸಲಾಗದ್ದು, ಇದು ವಿಭಿನ್ನವಾಗಿ ಪ್ರಧಾನಿಯವರನ್ನ ಸ್ವಾಗತಿಸಲಿವೆ. ಆಡಳಿತ ಭವನ ಹಸಿರು ವಲಯವಾಗಿ ಸಜ್ಜಾಗುತ್ತಿದ್ದು, ಫೇಸ್ 1ರಲ್ಲಿ ನಿರ್ಮಾಣ ಆಗಿರುವ 18 ವಿಭಾಗಗಳಲ್ಲಿ ಸದ್ಯ ಫೇಸ್ 1ರ ಕಟ್ಟಡಗಳೊಂದಿಗೆ ಉದ್ಘಾಟನೆ ಮಾಡಲಿದ್ದಾರೆ. ಇನ್ನು ಮುಖ್ಯದ್ವಾರ, ಆಡಳಿತ ಭವನ, 2 ಅಕಾಡೆಮಿಕ ವಿಭಾಗ, ಗ್ರಂಥಾಲಯ, ಕಂಪ್ಯೂಟರ್ ವಿಭಾಗ, ಎರಡು ಹಾಸ್ಟೆಲ್, ಮೆಸ್ , ಗೆಸ್ಟ್ ಹೌಸ್ ಸೇರಿ 18 ವಿಭಾಗವನ್ನ ಸುಮಾರು 850 ಕೋಟಿ ರೂ. ವೆಚ್ಚದಲ್ಲಿ 470 ಎಕರೆ ಪ್ರದೇಶದಲ್ಲಿ ಈ ಕಟ್ಟಡ ನಿರ್ಮಾಣ ಮಾಡಲಾಗಿದೆ. ನೂತನ ಕ್ಯಾಂಪಸ್‌ನಲ್ಲಿ ಒಟ್ಟು 856 ವಿದ್ಯಾರ್ಥಿಗಳು ಕಲಿಯಲಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ಮಾ.12ರಂದು ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂನ್ನು ಉದ್ಘಾಟನೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ

ಐಐಟಿ ಮುಂಭಾಗದಲ್ಲಿ ಸಿದ್ಧಗೊಂಡಿರೋ ಬೃಹತ್ ವೇದಿಕೆ

ನಾಳೆ ಐಐಟಿ ಕಟ್ಟಡ ಉದ್ಘಾಟನೆಗೆ ಪ್ರಧಾನಿ ಆಗಮಿಸಲಿರುವ ಹಿನ್ನಲೆ, ಹತ್ತು ಅಡಿ ಎತ್ತರ ಬೃಹತ್ ವೇದಿಕೆ ನಿಮಾರ್ಣ ಮಾಡಲಾಗಿದೆ. ಜೊತೆಗೆ ವೇದಿಕೆ ಮುಂಭಾಗದಲ್ಲಿ ಸಿರಿಧಾನ್ಯಗಳ ಕಲಾಕೃತಿ ಮಾಡಲಾಗಿದ್ದು ವಿಭಿನ್ನವಾಗಿ ಮೋದಿಗೆ ಸ್ವಾಗತಿಸಲಿವೆ. ಇನ್ನು ವೇದಿಕೆ, ಪೆಂಡಾಲ್, ಊಟದ ವ್ಯವಸ್ಥೆ, ಪಾರ್ಕಿಂಗ್‌‌ಗಾಗಿ 120 ಎಕರೆ ಪ್ರದೇಶ ಬಳಕೆ ಮಾಡಿಕೊಳ್ಳಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Sat, 11 March 23

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ