AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಬಡ ವಿದ್ಯಾರ್ಥಿಯ ಶಿಕ್ಷಣಕ್ಕೆ ಬೆಳಕಾದ ಕನ್ನಡಿಗ ಕೆ.ಎಲ್. ರಾಹುಲ್ : ನೆರವಿನ ಸೇತುವೆಯಾದ ಹುಬ್ಬಳ್ಳಿಯ ಗೆಳೆಯರು

Hubballi poor student: ಮಹಾಲಿಂಗಪುರದ ಅಮೃತ ಮಾವಿನಕಟ್ಟಿ ಕೇಳಿದ್ದು 50 ಸಾವಿರ ಮಾತ್ರ. ಆದರೆ ಅವನಿಗೆ ಊಟಕ್ಕೆ, ಪುಸ್ತಕಕ್ಕೆ ಹಣ ಬೇಕಾಗುತ್ತದೆ ಅಂತಾ ಪೂರ್ತಿ 75 ಸಾವಿರ ರೂಪಾಯಿ ಹಣವನ್ನ ಸ್ವತಃ ರಾಹುಲ್ ಆ ವಿದ್ಯಾರ್ಥಿಯ ಅಕೌಂಟ್​ಗೆ ಹಾಕಿದ್ದಾರೆ.

KL Rahul: ಬಡ ವಿದ್ಯಾರ್ಥಿಯ ಶಿಕ್ಷಣಕ್ಕೆ ಬೆಳಕಾದ ಕನ್ನಡಿಗ ಕೆ.ಎಲ್. ರಾಹುಲ್ : ನೆರವಿನ ಸೇತುವೆಯಾದ ಹುಬ್ಬಳ್ಳಿಯ ಗೆಳೆಯರು
ಬಡ ವಿದ್ಯಾರ್ಥಿಯ ಶಿಕ್ಷಣಕ್ಕೆ ಬೆಳಕಾದ ಕನ್ನಡಿಗ ಕೆ.ಎಲ್. ರಾಹುಲ್
ಸಾಧು ಶ್ರೀನಾಥ್​
|

Updated on:Jun 12, 2023 | 11:36 AM

Share

ಕೆ.ಎಲ್. ರಾಹುಲ್ (KL Rahul) ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ, ಕನ್ನಡಿಗ. ಸಾಕಷ್ಟು ಜನ ಅಭಿಮಾನಿಗಳನ್ನು ಹೊಂದಿರುವ ಕೆ.ಎಲ್‌.ರಾಹುಲ್ ವಿದ್ಯಾರ್ಥಿಯೊಬ್ಬನಿಗೆ ಆರ್ಥಿಕ ನೆರವು (financial help) ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಹಾಲಿಂಗಪುರದ ಅಮೃತ ಮಾವಿನಕಟ್ಟಿ ಎಂಬ ಸಾಮಾನ್ಯ ಯುವಕ ಮೊನ್ನೆಯಷ್ಟೇ ಪಿಯುಸಿ ಕಾಮರ್ಸ್​​ ವಿಷಯದಲ್ಲಿ 600ಕ್ಕೆ 571 ಅಂಕಗಳನ್ನು ಪಡೆದಿದ್ದಾನೆ. ಈತನನ್ನ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಮಂಜುನಾಥ ಹೆಬಸೂರು ಸಹೋದರ ನಿತೀನ್, ಹುಬ್ಬಳ್ಳಿಯ (Hubballi) ಕೆಎಲ್​​ಇ ಸಂಸ್ಥೆಯಲ್ಲಿರುವ ಬಿಕಾಂ ಜೊತೆಗೆ ಸಿಎ ಕೋಚಿಂಗ್ ಅಡ್ಮಿಷನ್​​ಗೆ ಕರೆದುಕೊಂಡು ಬರ್ತಾನೆ. ಕಾಲೇಜಿನ ಆಡಳಿತ ಮಂಡಳಿ 85 ಸಾವಿರ ರೂಪಾಯಿ ಫೀಸ್ ಕಟ್ಟಬೇಕಾಗುತ್ತದೆ. ಆದರೆ ಒಳ್ಳೆಯ ಮಾರ್ಕ್ಸ್ ತಗೆದುಕೊಂಡಿರುವುದಕ್ಕೆ 10 ಸಾವಿರ ರೂ ರಿಯಾಯ್ತಿ ಕೊಡುತ್ತೇವೆ. ಒಟ್ಟು 75 ಸಾವಿರ ಹಣವನ್ನು ತುಂಬಲು ಹೇಳುತ್ತಾರೆ(poor student).

ವಿದ್ಯಾರ್ಥಿ ಅಮೃತನ ಕುಟುಂಬದ ಆರ್ಥಿಕ ಪರಿಸ್ಥಿತಿ ಸದೃಢವಾಗಿಲ್ಲದ ಕಾರಣ ಜೊತೆಗಿದ್ದ ಸಹೋದರ ನಿತೀನ್​​, ನನಗೆ ಕರೆ ಮಾಡಿ ಪರಿಸ್ಥಿತಿ ವಿವರಿಸಿದ. ಅಲ್ಲದೆ ನಮ್ಮ ಬಳಿ 25 ಸಾವಿರ ಅದಾವಣ್ಣಾ, ಉಳಿದ 50 ಸಾವಿರ ಅಡ್ಜಸ್ಟ್​​ ಮಾಡು ಅಂತಾನೆ. ಆಗಲಿ ಅಂತಾ ಎಂಜಿನಿಯರಿಂಗ್ ಗೆಳೆಯ ಅಕ್ಷಯಗೆ ಕರೆ ಮಾಡಿ ಪರಿಸ್ಥಿತಿ ಎಲ್ಲವನ್ನೂ ಮಂಜುನಾಥನ ಬಳಿ ವಿವರಿಸುತ್ತಾರೆ.

ಜೊತೆಗೆ ನಾನು ಕೂಡ ಸ್ವಲ್ಪ ಹಣ ಕೊಡುತ್ತೇನೆ ಅಂತಾ ಹೇಳುತ್ತಾರೆ‌. ಗೆಳೆಯ ಅಕ್ಷಯ ಕೂಡ ಆಯ್ತು ನೋಡ್ತೇವೆ ಅಂತಾ ಹೇಳಿ, ನೇರವಾಗಿ ಕೆ ಎಲ್ ರಾಹುಲ್ ಅವರಿಗೆ ಕರೆ ಮಾಡಿ ಒಬ್ಬ ಪ್ರತಿಭಾವಂತ ವಿದ್ಯಾರ್ಥಿ ಇದ್ದಾನೆ. ಅವನಿಗೆ ಕಾಲೇಜು ಅಡ್ಮಿಷನ್​​ ಆಗಬೇಕಿದೆ. ಅವನ ಬಳಿ ದುಡ್ಡಿಲ್ಲ ಅಂದಿದ್ದಾನೆ. ಕೂಡಲೇ ಎಚ್ಚೆತ್ತ ರಾಹುಲ್ ಅವರು ಆ ವಿದ್ಯಾರ್ಥಿಯ ಕಾಲೇಜಿನ ಎಲ್ಲ ಫೀಸನ್ನು ನಾನೇ ತುಂಬುತ್ತೇನೆ. ಅವರ ಅಕೌಂಟ್ ಡಿಟೇಲ್ಟ್​​ ತೆಗೆದುಕೊಳ್ಳೀ ಎಂದು ಸೂಚಿಸುತ್ತಾರೆ.

ಕೇಳಿದ್ದು 50 ಸಾವಿರ ಮಾತ್ರ. ಆದರೆ ಅವನಿಗೆ ಊಟಕ್ಕೆ, ಪುಸ್ತಕಕ್ಕೆ ಹಣ ಬೇಕಾಗುತ್ತದೆ ಅಂತಾ ಪೂರ್ತಿ 75 ಸಾವಿರ ರೂಪಾಯಿ ಹಣವನ್ನ ಸ್ವತಃ ರಾಹುಲ್ ಆ ವಿದ್ಯಾರ್ಥಿಯ ಅಕೌಂಟ್​ಗೆ ಹಾಕಿದ್ದಾರೆ. ಎಂಜಿನಿಯರಿಂಗ್ ಗೆಳೆಯ ಅಕ್ಷಯ, ಕ್ರಿಕೆಟ್ ಆಟಗಾರರರ ಜೊತೆಗೆ ಉತ್ತಮ ಸ್ನೇಹ ಸಂಬಂಧದಿಂದ ಇದು ಸಾಧ್ಯವಾಗಿದೆ. ಇನ್ನು ಸಹಾಯವನ್ನು ಪಡೆದ ವಿದ್ಯಾರ್ಥಿ ಅಮೃತ ಮಾವಿನಕಟ್ಟಿ ಸಹ ಕೆಎಲ್ ರಾಹುಲ್, ಮಂಜುನಾಥ ಹೆಬಸೂರು, ನಿತೀನ್ ಹಾಗೂ ಅಕ್ಷಯ ಅವರ ಸಹಾಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಶಿಕ್ಷಣ ಕುರಿತಾದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:33 am, Mon, 12 June 23

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ