AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​​ ಶೋ ಬಡತನ ನಿವಾರಿಸುವ ಕಾರ್ಯಕ್ರಮನಾ? : ಹೆಚ್​. ಡಿ ಕುಮಾರಸ್ವಾಮಿ

ಏರ್​​ಶೋ ಬಡತನ ನಿವಾರಿಸುವ ಕಾರ್ಯಕ್ರಮನಾ? ಏರ್​​ಶೋಗೆ ಬರುವುದರಿಂದ ಬಡತನ ನಿವಾರಣೆ ಆಗುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಏರ್​ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಏರ್​​ ಶೋ ಬಡತನ ನಿವಾರಿಸುವ ಕಾರ್ಯಕ್ರಮನಾ? : ಹೆಚ್​. ಡಿ ಕುಮಾರಸ್ವಾಮಿ
ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on:Feb 13, 2023 | 1:20 PM

Share

ಹುಬ್ಬಳ್ಳಿ: ಏರ್​​ಶೋ (Air Show) ಬಡತನ ನಿವಾರಿಸುವ ಕಾರ್ಯಕ್ರಮನಾ? ಏರ್​​ಶೋಗೆ ಬರುವುದರಿಂದ ಬಡತನ ನಿವಾರಣೆ ಆಗುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumarswamy) ಏರ್​ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ. ಚುನಾವಣೆ ನೆಪದಲ್ಲಿ ಜನರನ್ನು ದಾರಿ ತಪ್ಪಿಸೋ ಯತ್ನ ನಡೆಸಿದ್ದಾರೆ. ಇದು 14ನೇ ಆವೃತಿಯ ಏರ್ ಶೋ ಆಗಿದೆ. ಇದನ್ನು ಹಿಂದೆ ಇದನ್ನು ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಭಾಗಕ್ಕೆ ಯಾವ ಪಕ್ಷದಿಂದ ಅನ್ಯಾಯವಾಗಿದೆ. ಮಹದಾಯಿ ನೀರಿನ ವಿಚಾರವಾಗಿ ಕಾನೂನಾತ್ಮಕ ಮತ್ತು ತಾಂತ್ರಿಕ ದೋಷ ಸರಿಪಡಿಸಿಕೊಳ್ಳಲು ಹೇಳಿದ್ದೆ. ಆದರೆ ಬಿಜೆಪಿಯವರು ಪ್ರಚಾರವಾದರೆ ಸಾಕು ಎಂದು ಹೇಳಿದರು. ಈಗಲೂ ಬಿಜೆಪಿ ಅದನ್ನೇ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ಬಡವರ ಜೀವನದಲ್ಲಿ ರಾಷ್ಟ್ರೀಯ ಪಕ್ಷಗಳು ಚೆಲ್ಲಾಟವಾಡುತ್ತಿವೆ

ಉತ್ತರ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ಅಂತ ಹೇಳುತ್ತಾರೆ. ಯೋಜನೆಗಳ ಹೆಸರಿನಲ್ಲಿ ಹಣ ಹೊಡೆಯುವ ಕೆಲಸ ಮಾಡಿದರು. ಬಡವರ ಜೀವನದಲ್ಲಿ ರಾಷ್ಟ್ರೀಯ ಪಕ್ಷಗಳು ಚೆಲ್ಲಾಟವಾಡುತ್ತಿವೆ. ನೀರಾವರಿ ಯೋಜನೆ ಹೆಸರಲ್ಲಿ ಈ ಭಾಗದ ನಾಯಕರೇ ದುಡ್ಡು ಹೊಡೆಯೋ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅಲ್ಲ ಸುಳ್ಳಿನ ರಾಮಯ್ಯ

ಸಿದ್ದರಾಮಯ್ಯ ಅಲ್ಲ ಸುಳ್ಳಿನ ರಾಮಯ್ಯ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ. ಮೈತ್ರಿ ಸರ್ಕಾರ ಬಂದ 2 ತಿಂಗಳಲ್ಲೇ ಸರ್ಕಾರ ಪತನ ಬಗ್ಗೆ ಹೇಳಿದರು. ಬಿಜೆಪಿಯ ಅಕ್ರಮ ಹೊರ ತಂದಿದ್ದು ನಾನು, ಸಿದ್ದರಾಮಯ್ಯ ಅಲ್ಲ. ನಿಮ್ಮ ಯೋಗ್ಯತೆಗೆ ಸರಿಯಾದ ರೀತಿಯಲ್ಲೇ ಮಾತನಾಡಿ. ಸಿದ್ದರಾಮಯ್ಯ ಕುರ್ಚಿಗಾಗಿ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯವರೂ ನನಗೆ ಸಿಎಂ ಸ್ಥಾನ ಕೊಡುವುದಕ್ಕೆ ಸಿದ್ದರಿದ್ದರು. ಇನ್ನೂ 10 ವರ್ಷವಾದರೂ ಇವರಿಗೆ ಬಿಜೆಪಿಯನ್ನು ತೆಗೆಯಲು ಆಗಲ್ಲ. ಜೆಡಿಎಸ್​ನಿಂದ ಮಾತ್ರ ಬಿಜೆಪಿಯನ್ನು ತೆಗೆಯೋಕೆ ಸಾಧ್ಯ.

ಮುಂಬೈ ಕರ್ನಾಟಕದಲ್ಲಿ ಪಂಚರತ್ನ ಯಾತ್ರೆ ನಡೆಸಿದ್ದೇನೆ. ಮಾರ್ಚ್ 23 ರವರೆಗೆ ರಥ ಯಾತ್ರೆ ಮುಂದುವರಿಸುತ್ತೇನೆ. ಯಾತ್ರೆ ಮೂಲಕ, ನಮ್ಮ ಯೋಜನೆ ಕುರಿತು ಜನತೆಗೆ ಮನವರಿಕೆ ಮಾಡಲು ಯಾತ್ರೆ ಮಾಡುತ್ತಿದ್ದೇನೆ. ಜನತೆಗೆ ಹೊಸ ಬದಲಾವಣೆ ತರಬೇಕೆಂದಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:19 pm, Mon, 13 February 23

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?