AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಉದ್ಯಮಿ ಗಣೇಶ್ ಸೇಟ್ ಮನೆ ಮೇಲೆ ಐಟಿ ದಾಳಿ

ಹುಬ್ಬಳ್ಳಿಯ ಅಶೋಕನಗರದಲ್ಲಿರುವ ಉದ್ಯಮಿ ಗಣೇಶ್ ಸೇಟ್​ ಎಂಬುವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಉದ್ಯಮಿ ಗಣೇಶ್ ಸೇಟ್ ಅವರಿಗೆ ಸೇರಿದ ಕಚೇರಿ, ಹೋಟೆಲ್ ಸೇರಿದಂತೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿ: ಉದ್ಯಮಿ ಗಣೇಶ್ ಸೇಟ್ ಮನೆ ಮೇಲೆ ಐಟಿ ದಾಳಿ
ಆದಾಯ ತೆರಿಗೆ ಇಲಾಖೆ ದಾಳಿ
ಶಿವಕುಮಾರ್ ಪತ್ತಾರ್
| Edited By: |

Updated on: Jan 24, 2024 | 11:44 AM

Share

ಹುಬ್ಬಳ್ಳಿ, ಜನವರಿ 24: ಇಲ್ಲಿನ ಅಶೋಕನಗರದಲ್ಲಿರುವ ಉದ್ಯಮಿ ಗಣೇಶ್ ಸೇಟ್​ ಎಂಬುವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಉದ್ಯಮಿ ಗಣೇಶ್ ಸೇಟ್ ಅವರಿಗೆ ಸೇರಿದ ಕಚೇರಿ, ಹೋಟೆಲ್ ಸೇರಿದಂತೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಉದ್ಯಮಿ ಗಣೇಶ್​​ ಸೇಟ್​ ಅವರು ಸ್ಟೇಶನ್ ರಸ್ತೆಯಲ್ಲಿ ಕೆಜಿಪಿ ಜ್ಯುವೆಲ್ಲರಿ (KGP Jewellery), ಜವಳಿ ಉದ್ಯಮ ಮತ್ತು ಹೋಟೆಲ್ ನಡೆಸುತ್ತಿದ್ದಾರೆ. ಅಧಿಕಾರಿಗಳು ಸತತ 10 ಗಂಟೆಗಳಿಂದ ಶೋಧಕಾರ್ಯ ನಡೆಸುತ್ತಿದ್ದಾರೆ. ಉದ್ಯಮಿ ಗಣೇಶ್ ಸೇಟ್​​​ ಮತ್ತು ಪುತ್ರ ಶ್ರೀಗಂಧ ಸೇಟ್ ಅವರ​​​ ವಿಚಾರಣೆ ನಡೆಸಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಬಿಲ್​ ಕಲೆಕ್ಟರ್

ಬಳ್ಳಾರಿ: ಕುರಗೋಡು ಪುರಸಭೆ ಬಿಲ್​ ಕಲೆಕ್ಟರ್ ಹೊನ್ನೂರ್ ಸಾಬ್ 6 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೇಶನದ ಸ್ಕೆಚ್ ನೀಡಲು ಮಹೇಶ್ ಎಂಬುವರ ಬಳಿ ಲಂಚ ಸ್ವೀಕರಿಸುವಾಗ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಜುವೆಲ್ಲರಿ ಶಾಪ್ ಮಾಲೀಕರ ಮನೆ ಮೇಲೆ ಐಟಿ ದಾಳಿ ನಡೆಸಿ ಶೋಧ ನಡೆಸುವಾಗ ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆ

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ

ವಿಜಯನಗರ: ಕೂಡ್ಲಿಗಿ ತಾಲೂಕಿನ ಹಾಲಸಾಗರಹಟ್ಟಿ ಗ್ರಾಮದ ಹೊರವಲಯದ ಗದ್ದೆಯಲ್ಲಿನ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಪೋಲಿಸರು ದಾಳಿ ಮಾಡುತ್ತಿದ್ದಂತೆ ಇಸ್ಪೀಟ್ ಆಟಗಾರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ದಾಳಿಯಲ್ಲಿ ಪೊಲೀಸರು ಆರು ಬೈಕ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರನ್ನು ಬಂಧಿಸಿದ್ದಾರೆ. ಗುಡೇಕೋಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್