AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್ ಶೆಟ್ಟರ್ ಫೇಸ್​​​ಬುಕ್ ಹ್ಯಾಕ್; ಹಣಕಾಸು ವ್ಯವಹಾರದ ಸಂದೇಶ ರವಾನಿಸಿದ ಕಿಡಿಗೇಡಿಗಳು

ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್​​ಬುಕ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನೀವೂ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ.

ಜಗದೀಶ್ ಶೆಟ್ಟರ್ ಫೇಸ್​​​ಬುಕ್ ಹ್ಯಾಕ್; ಹಣಕಾಸು ವ್ಯವಹಾರದ ಸಂದೇಶ ರವಾನಿಸಿದ ಕಿಡಿಗೇಡಿಗಳು
ಜಗದೀಶ್ ಶೆಟ್ಟರ್ ಫೇಸ್​​​ಬುಕ್ ಹ್ಯಾಕ್; ಹಣಕಾಸಿನ ವ್ಯವಹಾರದ ಬಗ್ಗೆ ಪೋಸ್ಟ್
ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on:Feb 27, 2024 | 5:27 PM

Share

ಹುಬ್ಬಳ್ಳಿ, ಫೆ.27: ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರ ಫೇಸ್​​ಬುಕ್ (Facebook) ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲೇ ಲಾಭ ಬಂದಿದೆ. ನೀವ ಸಹ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೆ, ಕ್ರಿಸ್ಟಿನಾ ಪೆನಾಟೆ ಎಂಬುವರ ಸಲಹೆ ಪಡೆಯಬಹುದು ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ. ತಂದೆಯ ಫೇಸ್​ಬುಕ್ ಖಾತೆ ಹ್ಯಾಕ್ ಆಗಿರುವ ಮಾಹಿತಿ ನೀಡಿದ ಪುತ್ರ ಸಂಕಲ್ಪ ಶೆಟ್ಟರ್, ಯಾರೂ ಕೂಡ ಹಣ ಹಾಕಬಾರದು ಎಂದು ನೆಟ್ಟಿಗರಿಗೆ ಮನವಿ ಮಾಡಿದ್ದಾರೆ.

ಉತ್ತರ ಕರ್ನಾಟಕದ ಲಿಂಗಾಯತ ಪ್ರಭಾವಿ ನಾಯಕ ನಾಯಕ ಜಗದೀಶ್‌ ಶೆಟ್ಟರ್‌ ಅವರು ವಿಧಾನಸಭೆ ಚುನಾವಣೆಗೂ ಮುನ್ನ ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಎಂದು ತತ್ವಸಿದ್ಧಾಂತಗಳನ್ನು ಬಿದಿಗಿಟ್ಟು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್​ನಿಂದ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿ ವಿರುದ್ಧವೇ ಸೋಲು ಅನುಭವಿಸಿದ್ದರು. ಬಳಿಕ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಎಂಎಲ್​ಸಿ ಆಗಿದ್ದರು.

ಇದನ್ನೂ ಓದಿ: ಸಮುದ್ರದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ: ಖರ್ಗೆ ಪ್ರಶ್ನೆಗೆ ಜಗದೀಶ್ ಶೆಟ್ಟರ್ ಕಿಡಿಕಿಡಿ

ಒಟ್ಟಾರೆಯಾಗಿ ಎಂಟು ತಿಂಗಳು ಕಾಂಗ್ರೆಸ್​ನಲ್ಲಿದ್ದ ಶೆಟ್ಟರ್ ಕಳೆದ ತಿಂಗಳಷ್ಟೇ ಬಿಜೆಪಿಗೆ ಘರ್​​ವಾಪ್ಸಿ ಆಗಿದ್ದಾರೆ. ಅಷ್ಟಕ್ಕೂ ಶೆಟ್ಟರ್ ಕಾಂಗ್ರೆಸ್ ತೊರೆಯಲು ಕಾರಣವೇನು ಎನ್ನುವುದನ್ನು ನೋಡುವುದಾದರೆ ಕಾಂಗ್ರೆಸ್ ಸ್ಥಳೀಯ ಮುಖಂಡರಿಂದ ಜಗದೀಶ್ ಶೆಟ್ಟರ್‌ಗೆ ವಿರೋಧವಿತ್ತು. ಶೆಟ್ಟರ್ ವಿರುದ್ಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಅಪಪ್ರಚಾರ ಮಾಡಿರುವ ಆರೋಪವೂ ಇದೆ. ಸಚಿವ ಸ್ಥಾನ ಸಿಗಲಿದೆ ಎಂದು ಶೆಟ್ಟರ್ ನಂಬಿದ್ದರು. ಆದರೆ, ಸಿಗದಿದ್ದಕ್ಕೆ ತೀವ್ರ ನಿರಾಸೆ ಅನುಭವಿಸಿದ್ದರಂತೆ. ಬಿಜೆಪಿಯಲ್ಲಿ ಬಿ.ಎಲ್.ಸಂತೋಷ್ ಹಿಡಿತ ಕಡಿಮೆಯಾಗಿದ್ದೂ ಬಿಜೆಪಿಗೆ ವಾಪಸ್ ಬರಲು ಕಾರಣ ಎನ್ನಲಾಗಿತ್ತು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಮಂಗಳಾ ಅಂಗಡಿಗೆ ಟಿಕೆಟ್ ಸಿಗುವುದು ಅನುಮಾನ​​​ ಎಂಬ ಬಗ್ಗೆ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗುವುದಕ್ಕೂ ಮುನ್ನ ಚರ್ಚೆಯಾಗಿತ್ತು. ಆದರೆ, ಶೆಟ್ಟರ್ ಬಿಜೆಪಿ ಸೇರ್ಪಡೆಯಾಗುತ್ತಿದ್ದಂತೆಯೇ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಲೆಕ್ಕಾಚಾರಗಳು ಬದಲಾಗಿದ್ದವು. ಶೆಟ್ಟರ್​​, ಅಂಗಡಿ ಇಬ್ಬರೂ ಬೀಗರಾಗಿರುವ ಹಿನ್ನೆಲೆ ಅವರಿಗೆ ರಾಜಕೀಯ ಲಾಭ ದೊರೆಯುವ ಮಾತುಗಳು ಮುನ್ನೆಲೆಗೆ ಬಂದಿದ್ದವು.

ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಶೆಟ್ಟರ್, ಲೋಕಸಭೆ ಚುನಾವಣೆಗೆ ಬೆಳಗಾವಿಯಿಂದ ಸ್ಪರ್ಧಿಸುವ ಯಾವುದೇ ನಿರ್ಧಾರ ಮಾಡಿಲ್ಲ ಎಂದಿದ್ದರು. ಅಲ್ಲದೆ, ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನನ್ನ ಹೆಸರು ಕೇಳಿ ಬರುತ್ತಿದೆ. ಯಾವ ಉದ್ದೇಶದಿಂದ ನನ್ನ ಹೆಸರು ಕೇಳಿ ಬರ್ತಿದೆ ಎಂಬುದು ಗೊತ್ತಿಲ್ಲ. ಆ ಕುರಿತು ಇಂದಿನ ಸಭೆಯಲ್ಲಿ ಯಾವುದೂ ಚರ್ಚೆ ಆಗಲ್ಲ. ಲೋಕಸಭೆ ಚುನಾವಣೆ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Tue, 27 February 24

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ