AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಕೇಸ್​: ಪ್ರಕರಣ ಸಿಬಿಐಗೆ ವಹಿಸಿ ಎಂದ ಸಚಿವ ಪ್ರಹ್ಲಾದ್​​ ಜೋಶಿ

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಖಂಡನೀಯ. ಪ್ರಕರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಬೇಕು ಆಗ ಸಂಪೂರ್ಣ ಸತ್ಯ ಹೊರಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಕೇಸ್​: ಪ್ರಕರಣ ಸಿಬಿಐಗೆ ವಹಿಸಿ ಎಂದ ಸಚಿವ ಪ್ರಹ್ಲಾದ್​​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ
ಶಿವಕುಮಾರ್ ಪತ್ತಾರ್
| Edited By: |

Updated on: Jul 09, 2023 | 6:28 PM

Share

ಹುಬ್ಬಳ್ಳಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ (Kamakumaranandi Maharaj) ಹತ್ಯೆ ಖಂಡನೀಯ. ಪ್ರಕರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಬೇಕು ಆಗ ಸಂಪೂರ್ಣ ಸತ್ಯ ಹೊರಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು. ಹುಬ್ಬಳ್ಳಿಯ ವರೂರಿನ ಜೈನ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೈನಮುನಿಗಳ ವಿರುದ್ಧ ಸುಳ್ಳು ಹೇಳಿಕೆಗಳನ್ನು ಸೃಷ್ಟಿ ಮಾಡಲಾಗುತ್ತಿದೆ ಎಂದರು.

ಇದು ಇತಿಹಾಸದಲೇ ಕ್ರೂರ ಘಟನೆ

ವಿದ್ಯುತ್ ಶಾಕ್ ಕೊಟ್ಟು, ಕೈಕಾಲು ಕತ್ತರಿಸಿ ಕೊಳವೆಬಾವಿಗೆ ಹಾಕಿದ್ದಾರೆ. ಇದು ಇತಿಹಾಸದಲೇ ಕ್ರೂರ ಘಟನೆ. ಜೈನ ಸನ್ಯಾಸಿಗಳು ಸರ್ವಸಂಗ ಪರೀತ್ಯಾಗ ಮಾಡುತ್ತಾರೆ. ಅಂತವರನ್ನು ಹೀಗೆ ಹತ್ಯೆ ಮಾಡಿದ್ದು ಹೇಯ ಕೃತ್ಯ. ಶ್ರೀಗಳು ಕಾಣೆಯಾಗಿದ್ದಾರೆ ಎಂದ ಮೇಲೂ ಗಂಭೀರವಾಗಿ ಪರಿಗಣಿಸಲಿಲ್ಲ. ಅಭಯ ಪಾಟೀಲ್ ಗಂಭೀರ ಆರೋಪ ಮಾಡಿದಾಗ ಹೆಸರು ಹೇಳಿದರು.

ಇದನ್ನೂ ಓದಿ: ಹಿರೇಕೋಡಿಯಲ್ಲಿ ನೆರವೇರಿದ ಜೈನಮುನಿ ಮಹಾರಾಜರ ಅಂತ್ಯಸಂಸ್ಕಾರ, ಹತ್ಯೆ ಖಂಡಿಸಿ ನಾಳೆ ಮೌನ ಪ್ರತಿಭಟನೆ

ಕಟ್ಟಡ ಕಟ್ಟಲು ಹಣ ಕೊಟ್ಟಿದ್ದರು ಅಂತ ಮಾಹಿತಿ ಇದೆ. ಬಡ್ಡಿ ವ್ಯವಹಾರ ಮಾಡುತ್ತಿದ್ದರು ಅಂತ ಹೇಳಿಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಸರ್ಕಾರಕ್ಕೆ ಶೋಭೆ ತರುವ ಸಂಗತಿ ಅಲ್ಲಾ. ಯಾರೇ ತಪ್ಪು ಮಾಡಿದರೂ ಅಪರಾಧ. ಇದಕ್ಕೆ ಜಾತಿ ಇರಲ್ಲ. ಸರ್ಕಾರದ ನಿಲುವು ಸರಿ ಪಡಿಸಿಕೊಳ್ಳಬೇಕು ಎಂದರು.

ಉಪವಾಸ ಕೈಬಿಡುವಂತೆ ಮನವಿ

ಪ್ರಕರಣವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಮನಕ್ಕೆ ತರುತ್ತೇನೆ. ಉಪವಾಸ ಕೈಬಿಡುವಂತೆ ಜೈನಮುನಿ ಗುಣಧರನಂದಿ ಶ್ರೀಗಳಿಗೆ ಮನವಿ ಮಾಡಿದ್ದೇನೆ. ನ್ಯಾಯ ಸಿಗದಿದ್ದರೆ ಎಲ್ಲರೂ ಸೇರಿ ಪ್ರತಿಭಟನೆ ಮಾಡೋಣ ಎಂದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ಸಿಎಂ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಸ್ವಾಮೀಜಿ

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ ಖಂಡಿಸಿ ಜೈನಮುನಿ ಗುಣಧರನಂದಿ ಮಹಾರಾಜರು ಹುಬ್ಬಳ್ಳಿಯ ವರೂರಿನ ಜೈನ ಮಂದಿರದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಉಗ್ರನಿಗೆ ನೀಡುವ ಶಿಕ್ಷೆಗಿಂತಲೂ ಬರ್ಬರವಾಗಿ ಕೊಲ್ಲಲಾಗಿದೆ. ಇಂತಹ ಪೈಶಾಚಿಕ ಕೃತ್ಯವೆಸಗಿದರೂ ಸಿಎಂ ಸಿದ್ದರಾಮಯ್ಯ ಸ್ಪಂದನೆ ನೀಡಿಲ್ಲ ಎಂದು ಸಿಎಂ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?