AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ: ಹೆಚ್​ಡಿ ಕುಮಾರಸ್ವಾಮಿ

ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್‌ ರಾದ್ಧಾಂತಕ್ಕೆ ಕಾರಣ ಎಂದು ಘಟನೆಯನ್ನು ಖಂಡಿಸಿದ್ದಾರೆ.

ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ: ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Apr 17, 2022 | 5:09 PM

Share

ಬೆಂಗಳೂರು: ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಘಟನೆಯ ಬಗ್ಗೆ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ. ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್‌ ರಾದ್ಧಾಂತಕ್ಕೆ ಕಾರಣ ಎಂದು ಘಟನೆಯನ್ನು ಖಂಡಿಸಿದ್ದಾರೆ.

ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್‌ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ ಮೇಲೆ ದಾಳಿ, ಠಾಣೆ ಮತ್ತು ಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಕಿಡಿಗೇಡಿ ಯುವಕನ ಬಂಧನವಾಗಿದೆ. ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ. ಅನುಭವದಿಂದ ಪಾಠ ಕಲಿಯುತ್ತಿಲ್ಲ ಎನ್ನುವುದಕ್ಕೆ ಹುಬ್ಬಳ್ಳಿ ಘಟನೆ ಒಂದು ನಿದರ್ಶನ. ಹಿಂದೆ ಬೆಂಗಳೂರಿನಲ್ಲಿ ಕಿಡಿಗೇಡಿ ಯುವಕನೊಬ್ಬ ಒಂದು ಧರ್ಮಗುರುವಿನ ಬಗ್ಗೆ ಪ್ರಚೋದನಾತ್ಮಕ ಪೋಸ್ಟ್‌ ಹಾಕಿದ್ದ ಪರಿಣಾಮ, ಶಾಸಕರೊಬ್ಬರ ಮನೆ, ಡಿಜೆ ಹಳ್ಳಿ ಪೊಲೀಸ್‌ ಠಾಣೆಯೇ ಬೆಂಕಿಗೆ ಆಹುತಿಯಾಗಿತ್ತು ಎಂದು ಬೆಂಗಳೂರಿನಲ್ಲಿ ನಡೆದಿದ್ದ ಗಲಭೆಯನ್ನು ಉಲ್ಲೇಖಿಸಿ ಬೇಸರ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ ಇನ್ನೊಂದು ಡಿಜೆ ಹಳ್ಳಿ ಆಗುವುದನ್ನು ಪರಿಣಾಮಕಾರಿಯಾಗಿ ತಡೆದ ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್‌ ಆಯುಕ್ತರು ಹಾಗೂ ಇಡೀ ಪೊಲೀಸ್‌ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ಸಕಾಲಕ್ಕೆ ಅವರು ಎಚ್ಚೆತ್ತ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಕುಂದಾಪುರದಿಂದ ಹಿಡಿದು ಹುಬ್ಬಳ್ಳಿವರೆಗೆ ನಡೆದ ಎಲ್ಲ ಘಟನೆಗಳನ್ನು ನೋಡಿದರೆ ಎದ್ದು ಕಾಣುವುದು ರಾಜ್ಯ ಸರಕಾರದ ಘೋರ ವೈಫಲ್ಯ. ಬಿಗಿಕ್ರಮ ಕೈಗೊಳ್ಳುವ ಬದಲಿಗೆ ಸರಕಾರ ಬೀಡುಬೀಸಾಗಿ ವರ್ತಿಸಿದ್ದೇ ಇಂಥ ಘಟನೆಗಳಿಗೆ ಕಾರಣ. ಹುಬ್ಬಳ್ಳಿ ಘಟನೆಯನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಗಂಭೀರವಾಗಿ ಪರಿಗಣಿಸಬೇಕು ಎಂದು ಕರ್ನಾಟಕ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ. ಅವರಿಗೆ ಸೋಶಿಯಲ್‌ ಮೀಡಿಯಾ ಹಿಂಸೆ ಹರಡುವ ಟೂಲ್​ಕಿಟ್‌ ಆಗಿಬಿಟ್ಟಿದೆ. ಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ- ಕಾಂಗ್ರೆಸ್‌ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ಬ್ರಿಟೀಷ್‌ ನೀತಿಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಮತ್ತೆ ಸರಣಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ವಿವಾದಿತ ಪೋಸ್ಟ್​ನಿಂದ ಹಳೇ ಹುಬ್ಬಳ್ಳಿ ಉದ್ವಿಗ್ನ: 30 ಜನರ ಬಂಧನ, ನಿಷೇಧಾಜ್ಞೆ ಜಾರಿ

ಇದನ್ನೂ ಓದಿ: ಟ್ರಾಫಿಕ್ ಜಾಮ್, ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹುಬ್ಬಳ್ಳಿಯಲ್ಲಿ ಶೀಘ್ರವೇ ತಲೆ ಎತ್ತಲಿದೆ ಟಿಎಂಸಿ

Published On - 10:17 am, Sun, 17 April 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?