AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಮತ್ತೆ ವಿದ್ಯಾರ್ಥಿಗಳ ಕಿಚ್ಚು: ಸತ್ಯಾಗಹಕ್ಕೆ ಪೊಲೀಸ್ ಬ್ರೇಕ್, ಜೂ 9ರವರೆಗೆ ಗಡುವು

ಸರ್ಕಾರದ ಖಾಲಿ ಹುದ್ದೆ ಭರ್ತಿ ವಿಚಾರವಾಗಿ ಈಗಾಗಲೇ ಧಾರವಾಡಲ್ಲಿ ಪ್ರತಿಭಟನೆಗಳು ಮಾಡಲಾಗಿದೆ. ಇದೀಗ ಮತ್ತೆ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಆದರೆ ಜೂನ್ 3 ರಂದು ನಿಗದಿಯಾಗಿದ್ದ ಸತ್ಯಾಗ್ರಹಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಹೀಗಾಗಿ ಜೂನ್​​ 9ರವರೆಗೆ ಗಡುವು ನೀಡಿದ್ದು, ಸರ್ಕಾರ ನಮ್ಮೊಂದಿಗೆ ಚರ್ಚಿಸುವಂತೆ ಒತ್ತಾಯಿಸಿದ್ದಾರೆ.

ಧಾರವಾಡದಲ್ಲಿ ಮತ್ತೆ ವಿದ್ಯಾರ್ಥಿಗಳ ಕಿಚ್ಚು: ಸತ್ಯಾಗಹಕ್ಕೆ ಪೊಲೀಸ್ ಬ್ರೇಕ್, ಜೂ 9ರವರೆಗೆ ಗಡುವು
ಸತ್ಯಪ್ರತಿಪಾದನಾ ಸತ್ಯಾಗ್ರಹImage Credit source: tv9 kannada
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Jun 01, 2026 | 3:27 PM

Share

ಧಾರವಾಡ, ಜೂನ್​ 01: ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ (job vacancies) ಆಗ್ರಹಿಸಿ ಇತ್ತೀಚೆಗೆ ನಗರದಲ್ಲಿ  ಉದ್ಯೋಗಾಕಾಂಕ್ಷಿಗಳು ಬೃಹತ್​ ಪ್ರಮಾಣದಲ್ಲಿ ಹೊರಾಟ ಮಾಡಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿತ್ತು. ಆದರೆ ಖಾಲಿ ಹುದ್ದೆಗಳ ಭರ್ತಿ ವಿಳಂಬವಾಗುತ್ತಿದೆ. ಹೀಗಾಗಿ ಇದೀಗ ಮತ್ತೆ ಸಿಡಿದೆದ್ದಿರುವ ವಿದ್ಯಾರ್ಥಿಗಳು (Student) ಸತ್ಯಾಗ್ರಹಕ್ಕೆ ಮುಂದಾಗಿದ್ದು, ಡಿಕೆ ಶಿವಕುಮಾರ್ ಸಿಎಂ ಆಗುತ್ತಿರುವ ಹೊತ್ತಲ್ಲೇ ವಿದ್ಯಾರ್ಥಿಗಳು ಹೋರಾಟಕ್ಕೆ ಮುಂದಾಗುತ್ತಿರುವುದು ದೊಡ್ಡ ಸವಾಲಾಗಿದೆ.

ಮುಖ್ಯಾಂಶಗಳು

  • ಕೇಂದ್ರ ಮತ್ತು ರಾಜ್ಯ ಸರ್ಕಾರದ ಖಾಲಿ ಹುದ್ದೆ ಭರ್ತಿ ವಿಳಂಬ
  • ಧಾರವಾಡದಲ್ಲಿ ಸತ್ಯಾಗ್ರಹಕ್ಕೆ ಮುಂದಾಗಿದ್ದವರಿಗೆ ಪೊಲೀಸ್​ ಶಾಕ್​​
  • ಜೂನ್ 9ರೊಳಗೆ ಸರ್ಕಾರದಿಂದ ಚರ್ಚೆಗೆ ಒತ್ತಾಯ

ಸತ್ಯಾಗ್ರಹಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು

ಕೇಂದ್ರ ಮತ್ತು ರಾಜ್ಯ ಸರ್ಕಾರದ ಖಾಲಿ ಹುದ್ದೆ ಭರ್ತಿ ವಿಳಂಬ ವಿಚಾರವಾಗಿ ಹಿರಿಯ ಹೋರಾಟಗಾರ ಬಿ.ಡಿ.ಹಿರೇಮಠ ನೇತೃತ್ವದಲ್ಲಿ ಧಾರವಾಡದ ಮಿಚಿಗನ್ ಕಾಂಪೌಂಡ್​ನಲ್ಲಿ ಜೂನ್ 3 ರಂದು ಸತ್ಯಪ್ರತಿಪಾದನಾ ಸತ್ಯಾಗ್ರಹಕ್ಕೆ ವಿದ್ಯಾರ್ಥಿಗಳು ಮುಂದಾಗಿದ್ದರು. ಆದರೆ ಈ ಹಿಂದಿನ ಘಟನಾವಳಿ ಉಲ್ಲೇಖಿಸಿ ಉಪನಗರ ಠಾಣೆ ಪೊಲೀಸರು ಸತ್ಯಾಗ್ರಹಕ್ಕೆ ಅನುಮತಿ ನಿರಾಕರಿಸಿದ್ದಾರೆ.

ಜೂ. 9 ರವರೆಗೆ ಗಡುವು ಎಂದ ಎಕೆಎಸ್​ಎಸ್​ಎ ಸಂಘಟನೆಯ ಗೌರವಾಧ್ಯಕ್ಷ ಬಿ.ಡಿ. ಹಿರೇಮಠ

ಇನ್ನು ಈ ಬಗ್ಗೆ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಕೆಎಸ್​ಎಸ್​ಎ ಸಂಘಟನೆಯ ಗೌರವಾಧ್ಯಕ್ಷ ಬಿ.ಡಿ. ಹಿರೇಮಠ, ನಾವು ಜೂ. 9 ರವರೆಗೆ ಗಡುವು ನೀಡುತ್ತೇವೆ. ಅಷ್ಟರಲ್ಲಿ ಖಾಲಿ ಹುದ್ದೆ ಭರ್ತಿ ವಿಚಾರವಾಗಿ ರಾಜ್ಯದ 31 ಜಿಲ್ಲೆಯ ವಿದ್ಯಾರ್ಥಿ ಮುಖಂಡರೊಂದಿಗೆ ಸರ್ಕಾರ ಚರ್ಚೆ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉದ್ಯೋಗಾಕಾಕ್ಷಿಗಳಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಕರೆ: ಧಾರವಾಡದಲ್ಲಿ ನಾಳೆ ನಡೆಯಲಿದ್ಯಾ ಹೈಡ್ರಾಮಾ?

ಹೋರಾಟಕ್ಕೆ ಅನುಮತಿ ನಿರಾಕರಿಸಿದ ಕಮಿಷನರ್ ಅವರೇ ಚರ್ಚೆಗೆ ಅವಕಾಶ ಕೊಡಿಸಬೇಕು. ಇಲ್ಲದಿದ್ದರೆ ಜೂ. 9 ರಿಂದ ಡಿಸಿ ಕಚೇರಿ ಎದುರು ವಿದ್ಯಾರ್ಥಿಗಳೊಂದಿಗೆ ಅನಿರ್ದಿಷ್ಟಾವಧಿ ಸತ್ಯಪ್ರತಿಪಾದನಾ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:20 pm, Mon, 1 June 26

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More