AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಗೆ 5 ದಿನ ಮೊದಲೇ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹಿಳೆಯೊಂದಿಗಿನ ಲವ್ವಿಡವ್ವಿಯೇ ಕಾರಣ

ಮದುವೆಗೂ ಐದು ದಿನ ಮೊದಲೇ ಯುವಕ ಭೀಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವಿವಾಹಿತ ಮಹಿಳೆಯೊಂದಿಗಿನ ಲವ್ವಿಡವ್ವಿಯಿಂದಲೇ ಮದ್ವೆಯಾಗಬೇಕಿದ್ದ ಯುವಕ ಹತ್ಯೆಯಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ,

ಮದ್ವೆಗೆ 5 ದಿನ ಮೊದಲೇ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹಿಳೆಯೊಂದಿಗಿನ ಲವ್ವಿಡವ್ವಿಯೇ ಕಾರಣ
ನಿಂಗಪ್ಪ, ಕೊಲೆಯಾದ ಯುವಕ
ರಮೇಶ್ ಬಿ. ಜವಳಗೇರಾ
|

Updated on: Jun 05, 2023 | 9:46 AM

Share

ಮುಖ್ಯಾಂಶಗಳು

  • ಕಲಘಟಗಿಯಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್
  • ವಿವಾಹಿತಳ ಜೊತೆ ಯುವಕನ‌ ಅನೈತಿಕ ಸಂಬಂಧವೇ ಕೊಲೆಗೆ ಕಾರಣ
  • ಎರಡು ದಿನಗಳಲ್ಲಿ ಕೊಲೆ ಪ್ರಕರಣ ಭೇದಿಸಿದ ಕಲಘಟಗಿ ಪೊಲೀಸರು

ಧಾರವಾಡ: ಜಿಲ್ಲೆಯ ಕಲಘಟಗಿಯಲ್ಲಿ ಹಸೆಮಣೆ ಏರಬೇಕಿದ್ದ ನಿಂಗಪ್ಪ ನವಲೂರ  ಎನ್ನುವ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 7ರಂದು ಮದುವೆಯಾಗಬೇಕಿದ್ದ ಯುವಕನ ಹತ್ಯೆ ಪ್ರಕರಣವನ್ನು ಕಲಘಟಗಿ ಪೊಲೀಸರು(kalaburagi police) ಘಟನೆ ನಡೆದ 48 ಗಂಟೆಗಳಲ್ಲಿ ಭೇದಿಸಿದ್ದಾರೆ. ವಿವಾಹಿತಳ ಜೊತೆ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸ್​ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಹಾಗೂ ಆತನ ಸಹೋದರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಐದೇ ದಿನದಲ್ಲಿ ಮದ್ವೆಯಾಗಬೇಕಿದ್ದ ಯುವಕನ ಹತ್ಯೆ: ತೋಟದ ಮನೆಯಲ್ಲಿ ನಡೆಯಿತು ಘೋರ ಕೃತ್ಯ

ಜಿನ್ನೂರು ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಷಯ ಮಹಿಳೆಯ ಪತಿ ಮುತ್ತಪ್ಪ ಹುಲ್ಲೊಳ್ಳಿಗೆ ತಿಳಿದಿದ್ದು, ಬಳಿಕ ಮುತ್ತಪ್ಪ ತನ್ನ ಸಹೋದರ ವೀರಭದ್ರ ಜಾಲಿಹಾಳ ಜೊತೆ ಸೇರಿಕೊಂಡು ನಿಂಗಪ್ಪನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಇಬ್ಬರನ್ನು ಇನ್ಸ್‌ಪೆಕ್ಟರ್ ಶ್ರೀಶೈಲ ಕೌಜಲಗಿ ನೇತೃತ್ವದ ತಂಡ ವಿಚಾರಣೆಗೊಳಪಡಿಸಿದೆ.

ಘಟನೆ ಹಿನ್ನೆಲೆ

ನಿಂಗಪ್ಪನಿಗೆ ಇದೇ ಜೂನ್ 7ರಂದು ತಾವರಗೇರೆ ಗ್ರಾಮದ ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು. ಆದ್ರೆ, ಮದುವೆ ಐದು ದಿನಗಳ ಮುಂಚೆ ಅಂದರೆ ಜೂನ್ 2ರಂದು ನಿಂಗಪ್ಪ ತೋಟದ ಮನೆಯಲ್ಲಿ ಕೊಲೆಯಾಗಿದ್ದ. ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ ತೋಟದ ಮನೆಯಲ್ಲಿ ಮಧ್ಯರಾತ್ರಿ ನಿಂಗಪ್ಪನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಇನ್ನೇನು ಐದೇ ದಿನದಲ್ಲಿ ಮದುವೆಯಾಗಿ ಹೊಸ ಜೀವನ ಆರಂಭಿಸಬೇಕಿದ್ದ ನಿಂಗಪ್ಪ ಮಸಣ ಸೇರಿದ್ದ. ಇದರಿಂದ ಮದುವೆ ಮನೆಯಲ್ಲಿ ನೀರವ ಮೌನ ಆವರಿಸಿತ್ತು.

ವಿಷಯ ತಿಳಿದು ಸ್ಥಳಕ್ಕೆ ಕಲಘಟಗಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಪೊಲೀಸರು ಕೊಲೆಯಾದ ಎರಡೇ ದಿನದಲ್ಲಿ ಪ್ರಕರಣವನ್ನು ಭೇದಿಸಿದ್ದು, ಹತ್ಯೆಗೆ ಅನೈತಿಕ ಸಂಬಂಧವೇ ಕಾರಣ ಎಂದು ತಿಳಿದುಬಂದಿದೆ. ಅಲ್ಲದೇ ಕೊಲೆ ಆರೋಪಿಗಳಾದ ಮಹಿಳೆಯ ಗಂಡ ಮುತ್ತಪ್ಪ ಹಾಗೂ ಆತನ ಸಹೋದರ ವೀರಭದ್ರ ಜಾಲಿಹಾಳ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು