AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಗೆ 5 ದಿನ ಮೊದಲೇ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹಿಳೆಯೊಂದಿಗಿನ ಲವ್ವಿಡವ್ವಿಯೇ ಕಾರಣ

ಮದುವೆಗೂ ಐದು ದಿನ ಮೊದಲೇ ಯುವಕ ಭೀಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವಿವಾಹಿತ ಮಹಿಳೆಯೊಂದಿಗಿನ ಲವ್ವಿಡವ್ವಿಯಿಂದಲೇ ಮದ್ವೆಯಾಗಬೇಕಿದ್ದ ಯುವಕ ಹತ್ಯೆಯಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ,

ಮದ್ವೆಗೆ 5 ದಿನ ಮೊದಲೇ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹಿಳೆಯೊಂದಿಗಿನ ಲವ್ವಿಡವ್ವಿಯೇ ಕಾರಣ
ನಿಂಗಪ್ಪ, ಕೊಲೆಯಾದ ಯುವಕ
ರಮೇಶ್ ಬಿ. ಜವಳಗೇರಾ
|

Updated on: Jun 05, 2023 | 9:46 AM

Share

ಧಾರವಾಡ: ಜಿಲ್ಲೆಯ ಕಲಘಟಗಿಯಲ್ಲಿ ಹಸೆಮಣೆ ಏರಬೇಕಿದ್ದ ನಿಂಗಪ್ಪ ನವಲೂರ  ಎನ್ನುವ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 7ರಂದು ಮದುವೆಯಾಗಬೇಕಿದ್ದ ಯುವಕನ ಹತ್ಯೆ ಪ್ರಕರಣವನ್ನು ಕಲಘಟಗಿ ಪೊಲೀಸರು(kalaburagi police) ಘಟನೆ ನಡೆದ 48 ಗಂಟೆಗಳಲ್ಲಿ ಭೇದಿಸಿದ್ದಾರೆ. ವಿವಾಹಿತಳ ಜೊತೆ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸ್​ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಹಾಗೂ ಆತನ ಸಹೋದರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಐದೇ ದಿನದಲ್ಲಿ ಮದ್ವೆಯಾಗಬೇಕಿದ್ದ ಯುವಕನ ಹತ್ಯೆ: ತೋಟದ ಮನೆಯಲ್ಲಿ ನಡೆಯಿತು ಘೋರ ಕೃತ್ಯ

ಜಿನ್ನೂರು ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಷಯ ಮಹಿಳೆಯ ಪತಿ ಮುತ್ತಪ್ಪ ಹುಲ್ಲೊಳ್ಳಿಗೆ ತಿಳಿದಿದ್ದು, ಬಳಿಕ ಮುತ್ತಪ್ಪ ತನ್ನ ಸಹೋದರ ವೀರಭದ್ರ ಜಾಲಿಹಾಳ ಜೊತೆ ಸೇರಿಕೊಂಡು ನಿಂಗಪ್ಪನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಇಬ್ಬರನ್ನು ಇನ್ಸ್‌ಪೆಕ್ಟರ್ ಶ್ರೀಶೈಲ ಕೌಜಲಗಿ ನೇತೃತ್ವದ ತಂಡ ವಿಚಾರಣೆಗೊಳಪಡಿಸಿದೆ.

ಘಟನೆ ಹಿನ್ನೆಲೆ

ನಿಂಗಪ್ಪನಿಗೆ ಇದೇ ಜೂನ್ 7ರಂದು ತಾವರಗೇರೆ ಗ್ರಾಮದ ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು. ಆದ್ರೆ, ಮದುವೆ ಐದು ದಿನಗಳ ಮುಂಚೆ ಅಂದರೆ ಜೂನ್ 2ರಂದು ನಿಂಗಪ್ಪ ತೋಟದ ಮನೆಯಲ್ಲಿ ಕೊಲೆಯಾಗಿದ್ದ. ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ ತೋಟದ ಮನೆಯಲ್ಲಿ ಮಧ್ಯರಾತ್ರಿ ನಿಂಗಪ್ಪನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಇನ್ನೇನು ಐದೇ ದಿನದಲ್ಲಿ ಮದುವೆಯಾಗಿ ಹೊಸ ಜೀವನ ಆರಂಭಿಸಬೇಕಿದ್ದ ನಿಂಗಪ್ಪ ಮಸಣ ಸೇರಿದ್ದ. ಇದರಿಂದ ಮದುವೆ ಮನೆಯಲ್ಲಿ ನೀರವ ಮೌನ ಆವರಿಸಿತ್ತು.

ವಿಷಯ ತಿಳಿದು ಸ್ಥಳಕ್ಕೆ ಕಲಘಟಗಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಪೊಲೀಸರು ಕೊಲೆಯಾದ ಎರಡೇ ದಿನದಲ್ಲಿ ಪ್ರಕರಣವನ್ನು ಭೇದಿಸಿದ್ದು, ಹತ್ಯೆಗೆ ಅನೈತಿಕ ಸಂಬಂಧವೇ ಕಾರಣ ಎಂದು ತಿಳಿದುಬಂದಿದೆ. ಅಲ್ಲದೇ ಕೊಲೆ ಆರೋಪಿಗಳಾದ ಮಹಿಳೆಯ ಗಂಡ ಮುತ್ತಪ್ಪ ಹಾಗೂ ಆತನ ಸಹೋದರ ವೀರಭದ್ರ ಜಾಲಿಹಾಳ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್