AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಾರವಿಲ್ಲದೇ ಬೆಂಕಿ ಹಚ್ಚುವ ಮಾತುಗಳನ್ನಾಡಬಾರದು: ಕಮಲ್​ ಹಾಸನ್​ ವಿರುದ್ಧ ಪ್ರಲ್ಹಾದ್​ ಜೋಶಿ ಕಿಡಿ

ತಮಿಳಿಂದ ಕನ್ನಡ ಹುಟ್ಟಿದೆ ಅಂತೇಳಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ಕಮಲ್ ಹಾಸನ್‌ ಅಭಿನಯದ ಥಗ್ ಲೈಫ್ ಚಿತ್ರದ ಮೇಲೆ ಬ್ಯಾನ್ ತೂಗುಗತ್ತಿ ನೇತಾಡುತ್ತಿದೆ. ಕರ್ನಾಟಕದಲ್ಲಿ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಸದ್ಯ ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಮಾತನಾಡಿದ್ದು, ಕಮಲ್​ ಹಾಸನ್ ಮಾತನಾಡಿದ್ದು ತಪ್ಪು ಎಂದಿದ್ದಾರೆ.

ಆಧಾರವಿಲ್ಲದೇ ಬೆಂಕಿ ಹಚ್ಚುವ ಮಾತುಗಳನ್ನಾಡಬಾರದು: ಕಮಲ್​ ಹಾಸನ್​ ವಿರುದ್ಧ ಪ್ರಲ್ಹಾದ್​ ಜೋಶಿ ಕಿಡಿ
ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ನಟ ಕಮಲ್ ಹಾಸನ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Jun 02, 2025 | 12:39 PM

Share

ಹುಬ್ಬಳ್ಳಿ, ಜೂನ್​ 02: ಕನ್ನಡ ಭಾಷೆಯ ಬಗ್ಗೆ ನಟ ಕಮಲ ಹಾಸನ್ (kamal haasan) ನೀಡಿದ ಹೇಳಿಕೆಯಿಂದ ಹರಡಿದ ಕಿಚ್ಚು ಕರುನಾಡಿನಾದ್ಯಂತ ವ್ಯಾಪಿಸುತ್ತಲೇ ಇದೆ. ಎಲ್ಲೆಡೆ ಅಸಮಾಧಾನದ ಕಿಡಿ ಹೊತ್ತಿದೆ. ಪ್ರತಿಯೊಬ್ಬರು ಕೂಡ ಕಮಲ ಹಾಸನ್​ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಸದ್ಯ ಈ ಬಗ್ಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಹೇಳಿಕೆ ನೀಡಿದ್ದು, ಕಮಲ್​ ಹಾಸನ್ ಮಾತನಾಡಿದ್ದು ತಪ್ಪು. ವೈಜ್ಞಾನಿಕ ಆಧಾರವಿಲ್ಲದೇ ಬೆಂಕಿ ಹಚ್ಚುವ ಮಾತುಗಳನ್ನಾಡಬಾರದು ಎಂದು ವಾಗ್ದಾಳಿ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ಹಾಗೂ ತಮಿಳು ಎರಡೂ ಭಾಷೆ ಪುರಾತನ ಭಾಷೆಗಳಾಗಿವೆ. ತಮಿಳು ಬಗ್ಗೆ ನಾವು ಕೆಟ್ಟದಾಗಿ ಮಾತನಾಡಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಕರ್ನಾಟಕ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​

ಇದನ್ನೂ ಓದಿ
Image
‘ಥಗ್ ಲೈಫ್’ ಚಿತ್ರಕ್ಕಿಂದು ನಿರ್ಣಾಯಕ ದಿನ; ಸಿನಿಮಾ ಪ್ರದರ್ಶನ ಅನುಮಾನ
Image
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
Image
ಕರ್ನಾಟಕದಲ್ಲಿ ‘ಥಗ್ ಲೈಫ್’ಗೆ ವಿರೋಧ, ತಮಿಳುನಾಡು ಸರ್ಕಾರಕ್ಕೆ ಕಮಲ್ ಮನವಿ
Image
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ

ಕಮಲ್ ಹಾಸನ್ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಈವರೆಗೂ ಮಾತಾಡಿಲ್ಲ. ಕಾಂಗ್ರೆಸ್​ನ ಯಾರು ಕೂಡ ನಟನ ಹೇಳಿಕೆಯನ್ನು ಖಂಡಿಸಿ ಮಾತನಾಡುತ್ತಿಲ್ಲ. ಈ ಬಗ್ಗೆ ಕನ್ನಡ ಪರ ಹೋರಾಟಗಾರರು ಗಮನಹರಿಸಬೇಕು ಎಂದಿದ್ದಾರೆ.

ಭಯೋತ್ಪಾದಕರಿಗೆ ಕರ್ನಾಟಕ ಸುರಕ್ಷಿತ ರಾಜ್ಯವಾಗಿದೆ: ಜೋಶಿ

ಇನ್ನು ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರು ಟಾರ್ಗೆಟ್ ಆಗುತ್ತಿದ್ದಾರೆ. ಭಯೋತ್ಪಾದಕರಿಗೆ ಕರ್ನಾಟಕ ಸುರಕ್ಷಿತ ರಾಜ್ಯವಾಗಿದೆ. ಬಾಯಿಗೆ ಬಂದಂಗೆ ಮಾತನಾಡೋರಿಗೆ ಏನೂ ಮಾಡುವುದಿಲ್ಲ. ಅವರಿಗೆ ವೋಟ್ ಹಾಕದೆ ಇರೋರ ಮೇಲೆ ಕೇಸ್ ಹಾಕುತ್ತಾರೆ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.

ಆರ್​​ಸಿಬಿ ಗೆಲ್ಲಲಿ ಅಂತ ನಾನು ಹಾರೈಸುತ್ತೇನೆ

ಆರ್​ಸಿಬಿ ಫೈನಲ್​ಗೆ ತಲುಪಿದರ ಬಗ್ಗೆ ಮಾತನಾಡಿದ ಅವರು, ಬಹಳ ವರ್ಷದ ನಂತರ ಆರ್​ಸಿಬಿ ಫೈನಲ್​ಗೆ ಬಂದಿದೆ. ಈ ಬಾರಿ ಆರ್​ಸಿಬಿ ಗೆಲ್ಲಲಿ ಅಂತ ನಾನು ಹಾರೈಸುತ್ತೇನೆ. ಮೊದಲ ಕಪ್ ನಮಗೆ ಬರಲಿ ಅಂತ ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಕಮಲ್ ಹಾಸನ್ ವಿಚಾರದಲ್ಲಿ ಯಾವುದೇ ಮೃದು ಧೋರಣೆ ಇಲ್ಲ: ಸಚಿವ ಶಿವರಾಜ್ ತಂಗಡಗಿ

‘ತಮಿಳಿನಿಂದ ಕನ್ನಡ ಹುಟ್ಟಿದ್ದು’ ಕಮಲ್ ಹಾಸನ್ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಕನ್ನಡ-ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ನಟ ಕಮಲ್ ಹಾಸನ್ ವಿಚಾರದಲ್ಲಿ ಯಾವುದೇ ಮೃದು ಧೋರಣೆ ಇಲ್ಲ. ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆ ಈಗಾಗಲೇ ಮಾತನಾಡಿದ್ದೇನೆ. ಥಗ್ ಲೈಫ್​​ ಚಿತ್ರ ಬ್ಯಾನ್​​ ಮಾಡುತ್ತೇವೆ ಎಂದು ಮಂಡಳಿ ಹೇಳಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಮಲ್ ಹಾಸನ್ ಸಿನಿಮಾವೇನಾದರೂ ಬಿಡುಗಡೆ ಮಾಡಿದರೆ ಥೇಟರ್​ಗಳಿಗೆ ಬೆಂಕಿ ಹಾಕ್ತೀವಿ: ಟಿಎ ನಾರಾಯಣಗೌಡ, ಕರವೇ

ಕ್ಷಮೆ ಕೇಳದಿದ್ದರೆ ಥಗ್ ಲೈಫ್​​ ಚಿತ್ರ ನಿಷೇಧ ಮಾಡೋದು ಅನಿವಾರ್ಯ. ಸರ್ಕಾರಕ್ಕಿಂತ ವಾಣಿಜ್ಯ ಮಂಡಳಿ ಕೈಗೊಳ್ಳುವ ನಿರ್ಧಾರವೇ ಅಂತಿಮ. ವಾಣಿಜ್ಯ ಮಂಡಳಿ ಕೈಕೊಳ್ಳುವ ನಿರ್ಧಾರಕ್ಕೆ ಸರ್ಕಾರದ ಬೆಂಬಲವಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ