ವಾರದಲ್ಲಿ ವಿದ್ಯುತ್ ದರ ಏರಿಕೆ ಹಿಂಪಡೆಯದಿದ್ದರೆ ಹೋರಾಟ-ಚೇಂಬರ್​ ಆಫ್ ಕಾಮರ್ಸ್​ ಸಂಸ್ಥೆ ಎಚ್ಚರಿಕೆ

ಏಳು ದಿನಗಳಲ್ಲಿ ಬಿಲ್ ಕಡಿಮೆ ಮಾಡಬೇಕು‌. ಒಂದು ವೇಳೆ ಬಿಲ್ ಕಡಿಮೆ ಮಾಡದೆ ಹೋದ್ರೆ, ಕೈಗಾರಿಕೆಗಳನ್ನ ಬಂದ್ ಮಾಡಿ ಹೋರಾಟ ಮಾಡಬೇಕಾಗುತ್ತದೆ. ಸರ್ಕಾರ ಮಧ್ಯಪ್ರವೇಶ ಮಾಡಿ ವಿದ್ಯುತ್ ದರವನ್ನ ಕಡಿಮೆ ಮಾಡಬೇಕು ಎಂದು ಕರ್ನಾಟಕ ಚೇಂಬರ್​ ಆಫ್ ಕಾಮರ್ಸ್​ ಅಧ್ಯಕ್ಷ ವಿನಯ್ ಒತ್ತಾಯಿಸಿದ್ದಾರೆ.

ವಾರದಲ್ಲಿ ವಿದ್ಯುತ್ ದರ ಏರಿಕೆ ಹಿಂಪಡೆಯದಿದ್ದರೆ ಹೋರಾಟ-ಚೇಂಬರ್​ ಆಫ್ ಕಾಮರ್ಸ್​ ಸಂಸ್ಥೆ ಎಚ್ಚರಿಕೆ
ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ
Follow us
|

Updated on: Jun 09, 2023 | 1:34 PM

ಹುಬ್ಬಳ್ಳಿ: ವಿದ್ಯುತ್ ದರ ಹೆಚ್ಚಿಸಿ(Electricity Price Hike) ಶಾಕ್ ನೀಡಿದ ಹೆಸ್ಕಾಂಗೆ ಚೇಂಬರ್​ ಆಫ್ ಕಾಮರ್ಸ್(Karnataka Chamber Of commerce)​ ತರಾಟೆಗೆ ತೆಗೆದುಕೊಂಡಿದೆ. ಉತ್ತರ ಕರ್ನಾಟಕದ ಚೇಂಬರ್​ ಆಫ್ ಕಾಮರ್ಸ್​ ಸಂಸ್ಥೆ ವಿದ್ಯುತ್ ದರ ಏರಿಕೆಗೆ ಖಂಡನೆ ವ್ಯಕ್ತಪಡಿಸಿದ್ದು ಹೆಸ್ಕಾಂ(Hescom) ಮತ್ತು ಸರ್ಕಾರದ(Karnataka Government) ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ವಿದ್ಯುತ್ ದರ ಏರಿಕೆ ಹಿಂಪಡೆಯಲು ಸರ್ಕಾರಕ್ಕೆ 1 ವಾರ ಗಡವು ನೀಡಿದ್ದು ಹಿಂಪಡೆಯದಿದ್ದರೆ ಕೈಗಾರಿಕೆಗಳನ್ನು ಬಂದ್​ ಮಾಡಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ಸಂದೇಶ ರವಾನಿಸಿದೆ.

ಹೆಸ್ಕಾಂಗೆ ಏಳು ದಿನಗಳ ಕಾಲ ಗಡುವು ನೀಡುತ್ತೇವೆ. ಹೆಸ್ಕಾಂ ನೀಡಿದ ಬಿಲ್‌ನಲ್ಲಿ 75% ರಷ್ಟು ಪಾವತಿ ಮಾಡುತ್ತೇವೆ. ಉಳಿದ ಬಿಲ್‌ನ್ನ ಬಾಕಿ ಉಳಿಸಿಕೊಳ್ಳುತ್ತೇವೆ. ಏಳು ದಿನಗಳಲ್ಲಿ ಬಿಲ್ ಕಡಿಮೆ ಮಾಡಬೇಕು‌. ಒಂದು ವೇಳೆ ಬಿಲ್ ಕಡಿಮೆ ಮಾಡದೆ ಹೋದ್ರೆ, ಕೈಗಾರಿಕೆಗಳನ್ನ ಬಂದ್ ಮಾಡಿ ಹೋರಾಟ ಮಾಡಬೇಕಾಗುತ್ತದೆ. ಸರ್ಕಾರ ಮಧ್ಯಪ್ರವೇಶ ಮಾಡಿ ವಿದ್ಯುತ್ ದರವನ್ನ ಕಡಿಮೆ ಮಾಡಬೇಕು ಎಂದು ಕರ್ನಾಟಕ ಚೇಂಬರ್​ ಆಫ್ ಕಾಮರ್ಸ್​ ಅಧ್ಯಕ್ಷ ವಿನಯ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Bangalore Power Cut: ಬೆಂಗಳೂರಿಗರಿಗೆ ವೀಕೆಂಡ್ ಶಾಕ್, ಜೂ9ರಿಂದ 11ರವರೆಗೆ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲೆ?

ಕೆಇಆರ್‌ಸಿಯಿಂದ ಮನಸ್ಸೋ ಇಚ್ಚೆ ವಿದ್ಯುತ್ ದರ ಏರಿಕೆಯಾಗಿದೆ. ಹೆಸ್ಕಾಂ ಕೆಇಆರ್‌ಸಿ ಮುಂದೆ ಪ್ರತಿ ಯುನಿಟ್ ಗೆ 50% ಹೆಚ್ಚಳದ ಬೇಡಿಕೆ ಇಟ್ಟಿತ್ತು. ಈ ರೀತಿಯ ಬೇಡಿಕೆ ಇಟ್ಟಾಗ 20 ರಿಂದ 30 ಪೈಸೆ ಕೆಇಆರ್‌ಸಿ ಹೆಚ್ಚಳ ಮಾಡ್ತಾ ಇತ್ತು. ಆದ್ರೆ ಈ ವರ್ಷ ಪ್ರತಿ ಯುನಿಟ್‌‌ಗೆ 2.54 ರೂ. ನಿಗದಿ ಮಾಡಿದೆ. ಇದರಿಂದಾಗಿ ಜನಸಾಮಾನ್ಯರ ಮೇಲೆ ಬಹಳಷ್ಟು ಹೊರೆಯಾಗಿದೆ. ಹೆಸ್ಕಾಂ ತಕ್ಷಣ ವಿದ್ಯುತ್ ಬಿಲ್‌ನ್ನ ಕಡಿಮೆ ಮಾಡಬೇಕೆಂದು ವಿನಯ್ ಆಗ್ರಹಿಸಿದ್ದಾರೆ.

ನಷ್ಟದ ಕಾರಣ ನೀಡಿ ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ ಪ್ರತಿ ಯೂನಿಟ್ ಗೆ 70 ಪೈಸೆ ದರ ಏರಿಕೆ ಮಾಡಿ ಮೇ 12ರಂದು ಆದೇಶ ಪ್ರಕಟಿಸಿತ್ತು. ಹೊಸ ಪರಿಷ್ಕೃತ ದರವನ್ನು ಜೂನ್ 1ರಿಂದ ಅನ್ವಯವಾಗುವಂತೆ ಅದೇಶ ಪ್ರಕಟಿಸಲಾಗಿತ್ತು. ಇನ್ನು ಮತ್ತೊಂದೆಡೆ ದರ ಹೆಚ್ಚಳದ ಸಂಬಂಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!