AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದಲ್ಲಿ ವಿದ್ಯುತ್ ದರ ಏರಿಕೆ ಹಿಂಪಡೆಯದಿದ್ದರೆ ಹೋರಾಟ-ಚೇಂಬರ್​ ಆಫ್ ಕಾಮರ್ಸ್​ ಸಂಸ್ಥೆ ಎಚ್ಚರಿಕೆ

ಏಳು ದಿನಗಳಲ್ಲಿ ಬಿಲ್ ಕಡಿಮೆ ಮಾಡಬೇಕು‌. ಒಂದು ವೇಳೆ ಬಿಲ್ ಕಡಿಮೆ ಮಾಡದೆ ಹೋದ್ರೆ, ಕೈಗಾರಿಕೆಗಳನ್ನ ಬಂದ್ ಮಾಡಿ ಹೋರಾಟ ಮಾಡಬೇಕಾಗುತ್ತದೆ. ಸರ್ಕಾರ ಮಧ್ಯಪ್ರವೇಶ ಮಾಡಿ ವಿದ್ಯುತ್ ದರವನ್ನ ಕಡಿಮೆ ಮಾಡಬೇಕು ಎಂದು ಕರ್ನಾಟಕ ಚೇಂಬರ್​ ಆಫ್ ಕಾಮರ್ಸ್​ ಅಧ್ಯಕ್ಷ ವಿನಯ್ ಒತ್ತಾಯಿಸಿದ್ದಾರೆ.

ವಾರದಲ್ಲಿ ವಿದ್ಯುತ್ ದರ ಏರಿಕೆ ಹಿಂಪಡೆಯದಿದ್ದರೆ ಹೋರಾಟ-ಚೇಂಬರ್​ ಆಫ್ ಕಾಮರ್ಸ್​ ಸಂಸ್ಥೆ ಎಚ್ಚರಿಕೆ
ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ
ಆಯೇಷಾ ಬಾನು
|

Updated on: Jun 09, 2023 | 1:34 PM

Share

ಹುಬ್ಬಳ್ಳಿ: ವಿದ್ಯುತ್ ದರ ಹೆಚ್ಚಿಸಿ(Electricity Price Hike) ಶಾಕ್ ನೀಡಿದ ಹೆಸ್ಕಾಂಗೆ ಚೇಂಬರ್​ ಆಫ್ ಕಾಮರ್ಸ್(Karnataka Chamber Of commerce)​ ತರಾಟೆಗೆ ತೆಗೆದುಕೊಂಡಿದೆ. ಉತ್ತರ ಕರ್ನಾಟಕದ ಚೇಂಬರ್​ ಆಫ್ ಕಾಮರ್ಸ್​ ಸಂಸ್ಥೆ ವಿದ್ಯುತ್ ದರ ಏರಿಕೆಗೆ ಖಂಡನೆ ವ್ಯಕ್ತಪಡಿಸಿದ್ದು ಹೆಸ್ಕಾಂ(Hescom) ಮತ್ತು ಸರ್ಕಾರದ(Karnataka Government) ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ವಿದ್ಯುತ್ ದರ ಏರಿಕೆ ಹಿಂಪಡೆಯಲು ಸರ್ಕಾರಕ್ಕೆ 1 ವಾರ ಗಡವು ನೀಡಿದ್ದು ಹಿಂಪಡೆಯದಿದ್ದರೆ ಕೈಗಾರಿಕೆಗಳನ್ನು ಬಂದ್​ ಮಾಡಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ಸಂದೇಶ ರವಾನಿಸಿದೆ.

ಹೆಸ್ಕಾಂಗೆ ಏಳು ದಿನಗಳ ಕಾಲ ಗಡುವು ನೀಡುತ್ತೇವೆ. ಹೆಸ್ಕಾಂ ನೀಡಿದ ಬಿಲ್‌ನಲ್ಲಿ 75% ರಷ್ಟು ಪಾವತಿ ಮಾಡುತ್ತೇವೆ. ಉಳಿದ ಬಿಲ್‌ನ್ನ ಬಾಕಿ ಉಳಿಸಿಕೊಳ್ಳುತ್ತೇವೆ. ಏಳು ದಿನಗಳಲ್ಲಿ ಬಿಲ್ ಕಡಿಮೆ ಮಾಡಬೇಕು‌. ಒಂದು ವೇಳೆ ಬಿಲ್ ಕಡಿಮೆ ಮಾಡದೆ ಹೋದ್ರೆ, ಕೈಗಾರಿಕೆಗಳನ್ನ ಬಂದ್ ಮಾಡಿ ಹೋರಾಟ ಮಾಡಬೇಕಾಗುತ್ತದೆ. ಸರ್ಕಾರ ಮಧ್ಯಪ್ರವೇಶ ಮಾಡಿ ವಿದ್ಯುತ್ ದರವನ್ನ ಕಡಿಮೆ ಮಾಡಬೇಕು ಎಂದು ಕರ್ನಾಟಕ ಚೇಂಬರ್​ ಆಫ್ ಕಾಮರ್ಸ್​ ಅಧ್ಯಕ್ಷ ವಿನಯ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Bangalore Power Cut: ಬೆಂಗಳೂರಿಗರಿಗೆ ವೀಕೆಂಡ್ ಶಾಕ್, ಜೂ9ರಿಂದ 11ರವರೆಗೆ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲೆ?

ಕೆಇಆರ್‌ಸಿಯಿಂದ ಮನಸ್ಸೋ ಇಚ್ಚೆ ವಿದ್ಯುತ್ ದರ ಏರಿಕೆಯಾಗಿದೆ. ಹೆಸ್ಕಾಂ ಕೆಇಆರ್‌ಸಿ ಮುಂದೆ ಪ್ರತಿ ಯುನಿಟ್ ಗೆ 50% ಹೆಚ್ಚಳದ ಬೇಡಿಕೆ ಇಟ್ಟಿತ್ತು. ಈ ರೀತಿಯ ಬೇಡಿಕೆ ಇಟ್ಟಾಗ 20 ರಿಂದ 30 ಪೈಸೆ ಕೆಇಆರ್‌ಸಿ ಹೆಚ್ಚಳ ಮಾಡ್ತಾ ಇತ್ತು. ಆದ್ರೆ ಈ ವರ್ಷ ಪ್ರತಿ ಯುನಿಟ್‌‌ಗೆ 2.54 ರೂ. ನಿಗದಿ ಮಾಡಿದೆ. ಇದರಿಂದಾಗಿ ಜನಸಾಮಾನ್ಯರ ಮೇಲೆ ಬಹಳಷ್ಟು ಹೊರೆಯಾಗಿದೆ. ಹೆಸ್ಕಾಂ ತಕ್ಷಣ ವಿದ್ಯುತ್ ಬಿಲ್‌ನ್ನ ಕಡಿಮೆ ಮಾಡಬೇಕೆಂದು ವಿನಯ್ ಆಗ್ರಹಿಸಿದ್ದಾರೆ.

ನಷ್ಟದ ಕಾರಣ ನೀಡಿ ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ ಪ್ರತಿ ಯೂನಿಟ್ ಗೆ 70 ಪೈಸೆ ದರ ಏರಿಕೆ ಮಾಡಿ ಮೇ 12ರಂದು ಆದೇಶ ಪ್ರಕಟಿಸಿತ್ತು. ಹೊಸ ಪರಿಷ್ಕೃತ ದರವನ್ನು ಜೂನ್ 1ರಿಂದ ಅನ್ವಯವಾಗುವಂತೆ ಅದೇಶ ಪ್ರಕಟಿಸಲಾಗಿತ್ತು. ಇನ್ನು ಮತ್ತೊಂದೆಡೆ ದರ ಹೆಚ್ಚಳದ ಸಂಬಂಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ