AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾನಗರ ಪಾಲಿಕೆಗಳಲ್ಲಿ ಇನ್ನು ಇರಲ್ಲ ಆರೋಗ್ಯಾಧಿಕಾರಿ ಹುದ್ದೆ: ಕಾರಣ ಇಲ್ಲಿದೆ

ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಹೊರತುಪಡಿಸಿ, ರಾಜ್ಯದ 18 ಮಹಾನಗರ ಪಾಲಿಕೆಗಳಲ್ಲಿನ ಆರೋಗ್ಯಾಧಿಕಾರಿ ಹುದ್ದೆಗಳನ್ನು ರದ್ದುಪಡಿಸಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆಯೂ ಇದರಲ್ಲಿ ಸೇರಿದ್ದು, ಈ ಹುದ್ದೆಗಳನ್ನು ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಸೀನಿಯರ್ ಪ್ರೋಗ್ರಾಮರ್ ಮತ್ತು ಆಡಳಿತಾಧಿಕಾರಿ ಹುದ್ದೆಗಳಾಗಿ ಮರುನಾಮಕರಣ ಮಾಡಲಾಗಿದೆ. ಆರೋಗ್ಯ ವಿಭಾಗದ ಕಾರ್ಯಗಳು ಇಂಜಿನಿಯರ್‌ಗಳ ಅಧೀನದಲ್ಲಿ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ಮಹಾನಗರ ಪಾಲಿಕೆಗಳಲ್ಲಿ ಇನ್ನು ಇರಲ್ಲ ಆರೋಗ್ಯಾಧಿಕಾರಿ ಹುದ್ದೆ: ಕಾರಣ ಇಲ್ಲಿದೆ
ಮಹಾನಗರ ಪಾಲಿಕೆಗಳಲ್ಲಿ ಇನ್ನು ಇರಲ್ಲ ಆರೋಗ್ಯಾಧಿಕಾರಿ ಹುದ್ದೆ: ಕಾರಣ ಇಲ್ಲಿದೆ
ಸಂಜಯ್ಯಾ ಚಿಕ್ಕಮಠ
| Edited By: |

Updated on: Dec 01, 2025 | 9:45 AM

Share

ಹುಬ್ಬಳ್ಳಿ/ಧಾರವಾಡ, ಡಿಸೆಂಬರ್ 1: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು (Hubballi-Dharwad Municipal Corporation)ಒಳಗೊಂಡಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿನ ಆರೋಗ್ಯಾಧಿಕಾರಿ ಹುದ್ದೆಯನ್ನು ಸರ್ಕಾರ ರದ್ದುಪಡಿಸಿದೆ. ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ (GBA) ಹೊರತುಪಡಿಸಿ ಉಳಿದ ಎಲ್ಲ ಪಾಲಿಕೆಗಳಲ್ಲಿ 18 ಆರೋಗ್ಯಾಧಿಕಾರಿ ಹುದ್ದೆಗಳನ್ನು ರದ್ದುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

18 ಆರೋಗ್ಯಾಧಿಕಾರಿ ಹುದ್ದೆಗಳು ರದ್ದು

ರಾಜ್ಯದ ಹಲವು ಮಹಾನಗರ ಪಾಲಿಕೆಗಳು ತಮ್ಮದೇ ಅನುದಾನಗಳಿಂದ ಆರೋಗ್ಯ ಕೇಂದ್ರಗಳನ್ನು ನಡೆಸುತ್ತವೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯೂ  ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ (ಯುಪಿಎಚ್‌ಸಿ) ಮೂಲಕ ಆರೋಗ್ಯ ಸೇವೆಗಳನ್ನು ನಿರ್ವಹಿಸುತ್ತದೆ ಮತ್ತು ಚಿಟಗುಪ್ಪಿ ಆಸ್ಪತ್ರೆ ಮತ್ತು ಹೆರಿಗೆ ಆಸ್ಪತ್ರೆಯನ್ನು ನಿರ್ವಹಿಸುತ್ತದೆ. ಈ ಆರೋಗ್ಯ ಕೇಂದ್ರಗಳ ನಿರ್ವಹಣೆಗಾಗಿ ಆರೋಗ್ಯಾಧಿಕರಿಗಳನ್ನು ನೇಮಕ ಮಾಡಿ, ಪಾಲಿಕೆಯ ಆರೋಗ್ಯ ವಿಭಾಗದ ಎಲ್ಲಾ ಚಟುವಟಿಕೆಗಳನ್ನು ಅವರಿಗೆ ವಹಿಸಲಾಗುತ್ತಿತ್ತು.

ಹೊಸ ಆದೇಶದಂತೆ ಜಿಬಿಎ ಹೊರತುಪಡಿಸಿ ಉಳಿದ ಪಾಲಿಕೆಗಳ 18 ಆರೋಗ್ಯಾಧಿಕಾರಿ ಹುದ್ದೆಗಳನ್ನು ರದ್ದುಪಡಿಸಿ ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಸೀನಿಯರ್ ಪ್ರೋಗ್ರಾಮರ್ ಮತ್ತು ಆಡಳಿತಾಧಿಕಾರಿ ಹುದ್ದೆಗಳಾಗಿ ಮರುನಾಮಕರಣ ಮಾಡಲಾಗಿದೆ. ಆರೋಗ್ಯ ವಿಭಾಗದ ಕೆಲಸ ಕಾರ್ಯಪಾಲಕ ಇಂಜಿನಿಯರ್‌ಗಳ ಅಧೀನದಲ್ಲಿ ಮುಂದುವರಿಯಲಿದೆ. ಹುದ್ದೆ ಮರುನಾಮಕರಣವಾದರೂ ಸಿಬ್ಬಂದಿಯ ವೇತನ ಶ್ರೇಣಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಈ ಕುರಿತು ಅಗತ್ಯವಾದ ಟಿಪ್ಪಣಿಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್