AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಮ್ಹಾನ್ಸ್‌ ಆಸ್ಪತ್ರೆಗೆ ಸೌಕರ್ಯ ಕಲ್ಪಿಸದ ಸರ್ಕಾರ: ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದ ಹೈಕೋರ್ಟ್

ಅಧಿಕಾರಿ ಹಾಜರಾಗದಿರುವುದಕ್ಕೆ ಹೈಕೋರ್ಟ್​ ಸಿಜೆ ರಿತುರಾಜ್ ಅವಸ್ತಿ ಗರಂ ಆಗಿದ್ದಾರೆ. ಕೋರ್ಟ್ ಆದೇಶಗಳನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ. ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳುಹಿಸುತ್ತೇವೆ. ಕೋರ್ಟ್‌ನ ಆದೇಶದ ಪ್ರಾಮುಖ್ಯತೆ ಅರ್ಥ ಮಾಡಿಸುತ್ತೇವೆ ಎಂದಿದ್ದಾರೆ.

ಡಿಮ್ಹಾನ್ಸ್‌ ಆಸ್ಪತ್ರೆಗೆ ಸೌಕರ್ಯ ಕಲ್ಪಿಸದ ಸರ್ಕಾರ: ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್‌
TV9 Web
| Edited By: |

Updated on: Nov 08, 2021 | 1:19 PM

Share

ಧಾರವಾಡ: ಧಾರವಾಡದ ಡಿಮ್ಹಾನ್ಸ್‌ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದೆ. ಧಾರವಾಡದ ಡಿಮ್ಹಾನ್ಸ್‌ ಆಸ್ಪತ್ರೆಗೆ ಸರ್ಕಾರ ಮೂಲಸೌಕರ್ಯ ಕಲ್ಪಿಸಿಲ್ಲ. ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಗೈರು ಹಾಜರಾಗಿದ್ದಾರೆ. ಕ್ಯಾಬಿನೆಟ್ ಮೀಟಿಂಗ್‌ಗೆ ಹಾಜರಾಗಲು ತೆರಳಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದೆ.

ಅಧಿಕಾರಿ ಹಾಜರಾಗದಿರುವುದಕ್ಕೆ ಹೈಕೋರ್ಟ್​ ಸಿಜೆ ರಿತುರಾಜ್ ಅವಸ್ತಿ ಗರಂ ಆಗಿದ್ದಾರೆ. ಕೋರ್ಟ್ ಆದೇಶಗಳನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ. ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳುಹಿಸುತ್ತೇವೆ. ಕೋರ್ಟ್‌ನ ಆದೇಶದ ಪ್ರಾಮುಖ್ಯತೆ ಅರ್ಥ ಮಾಡಿಸುತ್ತೇವೆ. ಡಿಮ್ಹಾನ್ಸ್‌ ಆಸ್ಪತ್ರೆಗೆ ಎಂಆರ್‌ಐ ಸಿಟಿ ಸ್ಕ್ಯಾನ್ ಯಂತ್ರ ಒದಗಿಸಿಲ್ಲ. ಮೆಡಿಕಲ್ ಸೂಪರಿಂಟೆಂಡೆಂಟ್ ನೇಮಕ ಮಾಡಿಲ್ಲ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ ನ್ಯಾಯಪೀಠವು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಜರಿಗೆ ಸೂಚಿಸಿದೆ.

Appu Family Samadhi Pooje: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ಆರಂಭ|Tv9 kannada

(karnataka government fails to provide basic facilities to dharwad dimhans high court orders officer to be present)

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ