AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ; ಉಚಿತವಾಗಿ ಕಿಡ್ನಿ ಕಸಿ ಮಾಡಲು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಪರವಾನಗಿ ನೀಡಿದ ಕರ್ನಾಟಕ ಸರ್ಕಾರ

ಕಿಡ್ನಿ ಕಸಿ ಪ್ರಕ್ರಿಯೆಗೆ ಅವಕಾಶ ನೀಡುವಂತೆ ಕೋರಿ ಕಿಮ್ಸ್, ಒಂದೂವರೆ ವರ್ಷದ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿತ್ತು. ಕಳೆದ ತಿಂಗಳು ಫೆಬ್ರವರಿ 18 ರಂದು ಅನುಮೋದನೆ ನೀಡಿದ್ದು, ಆದೇಶ ಬಂದಿದೆ.

ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ; ಉಚಿತವಾಗಿ ಕಿಡ್ನಿ ಕಸಿ ಮಾಡಲು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಪರವಾನಗಿ ನೀಡಿದ ಕರ್ನಾಟಕ ಸರ್ಕಾರ
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ
TV9 Web
| Updated By: sandhya thejappa|

Updated on:Mar 10, 2022 | 10:13 AM

Share

ಹುಬ್ಬಳ್ಳಿ: ಕಿಡ್ನಿ (Kidney) ವೈಫಲ್ಯದಿಂದ ಬಳಲುತ್ತಿರುವ ಉತ್ತರ ಕರ್ನಾಟಕ ಜನರು ಕಿಡ್ನಿ ಕಸಿ ಮಾಡಿಸಿಕೊಳ್ಳಲು ದೂರದ ಬೆಂಗಳೂರಿಗೆ ಹೋಗಬೇಕಾದ ಅಗತ್ಯವಿಲ್ಲ. ಇನ್ನು ಮುಂದೆ ಹುಬ್ಬಳ್ಳಿಯ ಕಿಮ್ಸ್​ನಲ್ಲಿಯೇ (KIMS) ಉಚಿತವಾಗಿ ಕಿಡ್ನಿ ಕಸಿ ಮಾಡಿಸಿಕೊಳ್ಳಬಹುದು. ಇದಕ್ಕಾಗಿ ರಾಜ್ಯ ಸರಕಾರ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಪರವಾನಗಿ ನೀಡಿದೆ. ಈ ಮೂಲಕ ಕಿಮ್ಸ್, ಬೆಂಗಳೂರು ಹೊರತುಪಡಿಸಿ ಕಿಡ್ನಿ ಕಸಿಗೆ ಅನುಮತಿ ಪಡೆದ ಏಕೈಕ ಸರಕಾರಿ ಆಸ್ಪತ್ರೆಯಾಗಿದೆ.

ಕಿಡ್ನಿ ಕಸಿ ಮಾಡಿಸಿಕೊಳ್ಳಲು ಬಡವರು ಬೆಂಗಳೂರಿನಂತಹ ದೂರದ ಸ್ಥಳಗಳಿಗೆ ಹೋಗುವುದು ಕಷ್ಟಸಾಧ್ಯ. ಜೊತೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂ.ಖರ್ಚು ಮಾಡಬೇಕು. ಹಣ ಭರಿಸಲಾಗದೇ, ಬೆಂಗಳೂರಿಗೆ ಹೋಗಿ ಚಿಕಿತ್ಸೆ ಪಡೆಯಲೂ ಆಗದೆ ಸಾಕಷ್ಟು ಬಡ ಜನರು ಸಾವುಗೀಡಾದ ಉದಾಹರಣೆಗಳಿವೆ. ಇದೀಗ ಉತ್ತರ ಕರ್ನಾಟಕದ ಕೇಂದ್ರ ಸ್ಥಾನ ಎನಿಸಿರುವ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯು ವರದಾನವಾಗಲಿದೆ ಅಂತ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಹೇಳಿದ್ದಾರೆ.

ಕಿಡ್ನಿ ಕಸಿ ಪ್ರಕ್ರಿಯೆಗೆ ಅವಕಾಶ ನೀಡುವಂತೆ ಕೋರಿ ಕಿಮ್ಸ್, ಒಂದೂವರೆ ವರ್ಷದ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿತ್ತು. ಕಳೆದ ತಿಂಗಳು ಫೆಬ್ರವರಿ 18 ರಂದು ಅನುಮೋದನೆ ನೀಡಿದ್ದು, ಆದೇಶ ಬಂದಿದೆ.

ಸಕಲ ಸೌಲಭ್ಯ: 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಿಮ್ಸ್ ಸೂಪರ್ ಸ್ಪೇಷಾಲಿಟಿ ಹಾಸ್ಪಿಟಲ್ನಲ್ಲಿ ಮೂತ್ರ ಪಿಂಡ ಆಪರೇಷನ್ ಥಿಯೇಟರ್​ಗಳನ್ನು ಹೊಂದಿದೆ. ಕಿಡ್ನಿ ಕಸಿಗೆ ಸಂಬಂಧಿಸಿದಂತೆ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳು ಹಾಗೂ ಉಪಕರಣಗಳನ್ನು ಅಳವಡಿಸಿಕೊಂಡಿದೆ ಎಂದು ವಿಭಾಗದ ಮುಖ್ಯಸ್ಥ ಡಾ. ವೆಂಕಟೇಶ ಮೋಗೇರ್ ತಿಳಿಸಿದ್ದಾರೆ. ಇಎಸ್ಡಬ್ಲ್ಯೂಎಲ್ ಸೌಲಭ್ಯಗಳು, ಯುರೊಡೈನಾಮಿಕ್ಸ್ ಮತ್ತು ಉನ್ನತ ಮಟ್ಟದ ಶಸ್ತ್ರಚಿಕಿತ್ಸೆಗಳನ್ನು ಮಾಡಲು ಅಗತ್ಯವಿರುವ ಅಡ್ವಾನ್ಸ್ಡ್ ಉಪಕರಣಗಳನ್ನು ಕಿಮ್ಸ್ ಅಳವಡಿಸಿಕೊಂಡಿದೆ ಎಂದು ಅವರು ಹೇಳಿದರು.

ಕಿಮ್ಸ್ನಲ್ಲಿ 30 ಡಯಾಲಿಸಿಸ್ ಯಂತ್ರಗಳಿದ್ದು, ರೋಗಿಗಳ ಆರೈಕೆಗಾಗಿ ಇವುಗಳು ಕಾರ್ಯನಿರ್ವಹಿಸುತ್ತಿವೆ. ಹೊಸದಾಗಿ ನಿರ್ಮಿಸಲಾಗುತ್ತಿರುವ ತುರ್ತು ಚಿಕಿತ್ಸಾ ಬ್ಲಾಕ್​ನಲ್ಲಿ 40 ಹಾಸಿಗೆಗಳ ಅತ್ಯಾಧುನಿಕ ಹೊಸ ಡಯಾಲಿಸಿಸ್ ಘಟಕಗಳನ್ನು ಹೊಂದುವ ಮೂಲಕ ನೆಫ್ರಾಲಜಿ ವಿಭಾಗ ಮತ್ತಷ್ಟು ಬಲಗೊಳ್ಳಲಿದ್ದು, ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ

5 State Election Result: ಪಂಚ ರಾಜ್ಯಗಳಲ್ಲಿ ಪ್ರಾರಂಭವಾದ ವಿಧಾನಸಭಾ ಚುನಾವಣೆ ಮತ ಎಣಿಕೆ; ಯಾವ ರಾಜ್ಯದ ಗದ್ದುಗೆ ಯಾರಿಗೆ?

Gold Price Today: ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆ; ಬೆಂಗಳೂರಿನಲ್ಲಿ ದಾಖಲೆ ಬರೆದ ಬೆಳ್ಳಿ ದರ

Published On - 9:07 am, Thu, 10 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ