AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು!

ಧಾರವಾಡದಿಂದ ಆರಂಭವಾದ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಈಗ ರಾಜ್ಯಾದ್ಯಂತ ವಿಸ್ತರಿಸಲಿದೆ. FRBM ಕಾಯ್ದೆಯಿಂದ ಹುದ್ದೆ ಕಡಿತವಾಗುತ್ತಿದ್ದು, 56 ಸಾವಿರ ಹುದ್ದೆ ಭರ್ತಿ ಘೋಷಣೆಯೂ ವೇಳಾಪಟ್ಟಿ ಇಲ್ಲದೆ ವಿಳಂಬವಾಗಿದೆ. ಯುವಕರ ದುರ್ಬಳಕೆ ಕುರಿತು ರಾಜಕೀಯ ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಾರ್ಚ್ 6ರಿಂದ ಯುವ ಅಧಿವೇಶನ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯಿಸಲು ವೇದಿಕೆ ಮುಂದಾಗಿದೆ.

ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು!
ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು!
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Mar 03, 2026 | 2:17 PM

Share

ಧಾರವಾಡ, ಮಾರ್ಚ್​ 03: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ (Dharwad) ಬೃಹತ್ ಪ್ರತಿಭಟನೆ ಮಾಡಿದ ಬೆನ್ನಲ್ಲೇ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಧಾರವಾಡದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಜನಸಾಮಾನ್ಯರ ವೇದಿಕೆ, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ರೈತ ಸೇನಾ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆರು ತಿಂಗಳಿನಿಂದ ನೀವು ಏನು ಮಾಡುತ್ತಿದ್ದಿರಿ ಎಂದ ವೇದಿಕೆ ಸಂಚಾಲಕ

ಜನಸಾಮಾನ್ಯರ ವೇದಿಕೆ ಸಂಚಾಲಕ ಸಿದ್ಧಲಿಂಗ ಬಾಗೇವಾಡಿ ಮಾತನಾಡಿ, ರಾಜ್ಯ ಸರ್ಕಾರ ಕೂಡಲೇ ಖಾಲಿ ಹುದ್ದೆಗಳ ಅಧಿಸೂಚನೆ ಹೊರಡಿಸಬೇಕು. ಕಳೆದ ಆರು ತಿಂಗಳಿನಿಂದ 21 ಜಿಲ್ಲೆಗಳಲ್ಲಿ ಹೋರಾಟ ರೂಪಿಸಿದ್ದೇವೆ. ಅದರ ಪರಿಣಾಮವಾಗಿ ಬೆಳಗಾವಿ ಅಧಿವೇಶನದಲ್ಲಿ 24 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಲಾಯಿತು. ಆದರೆ ಮೂರು ತಿಂಗಳು ಕಳೆದರೂ ಅಧಿಸೂಚನೆ ಹೊರಬಂದಿಲ್ಲ ಎಂದು ಆರೋಪಿಸಿದ್ದಾರೆ.

ಇತ್ತೀಚೆಗೆ ಸರ್ಕಾರ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದರೂ, ಅದಕ್ಕೆ ಸ್ಪಷ್ಟ ವೇಳಾಪಟ್ಟಿಯಿಲ್ಲ. ಪ್ರತಿಪಕ್ಷ ನಾಯಕರು ತಮ್ಮ ಹೋರಾಟದ ಫಲವೇ ಇದು ಎಂದು ಹೇಳಿಕೊಳ್ಳುತ್ತಿರುವುದನ್ನು ಪ್ರಶ್ನಿಸಿದ ಅವರು, ಆರು ತಿಂಗಳಿನಿಂದ ನೀವು ಏನು ಮಾಡುತ್ತಿದ್ದಿರಿ ಎಂದು ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಯುವಕರನ್ನು ರಾಜಕೀಯಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿರುವ ಸವಾಲುಗಳೇನು? ಇಲ್ಲಿದೆ ಮಾಹಿತಿ

2003ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆಯಡಿ (FRBM) ಸರ್ಕಾರಿ ಹುದ್ದೆಗಳ ಕಡಿತ ನಡೆಯುತ್ತಿದೆ ಎಂದು ಅವರು ಆಕ್ಷೇಪಿಸಿದರು. ಗುತ್ತಿಗೆ ಆಧಾರಿತ ನೇಮಕಾತಿ, ಅತಿಥಿ ಉಪನ್ಯಾಸಕರ ವ್ಯವಸ್ಥೆ ಇವೆಲ್ಲವೂ ಇದೇ ಕಾಯ್ದೆಯ ಪರಿಣಾಮ ಎಂದು ಹೇಳಿದರು. ಆಡಳಿತ ಸುಧಾರಣೆ ಹೆಸರಿನಲ್ಲಿ ಹುದ್ದೆಗಳ ಕಡಿತ ನಡೆಯುತ್ತಿದ್ದು, ಇದರಿಂದ ಉದ್ಯೋಗ ಭದ್ರತೆ ಹದಗೆಟ್ಟಿದೆ ಎಂದು ವಾದಿಸಿದರು.

ಹೀಗಾಗಿ FRBM ಕಾಯ್ದೆ ರದ್ದುಪಡಿಸಬೇಕು ಎಂದು ಆಗ್ರಹಿಸಿ, ಮಾರ್ಚ್ 6ರಿಂದ 22ರವರೆಗೆ ರಾಜ್ಯಾದ್ಯಂತ ಯುವ ಅಧಿವೇಶನ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಪ್ರತಿದಿನ ಒಂದೊಂದು ಜಿಲ್ಲೆಯಲ್ಲಿ ಯುವ ಅಧಿವೇಶನ ನಡೆಸಲಾಗುತ್ತಿದ್ದು, ಈ ಹೋರಾಟ ಧಾರವಾಡದ ಡಿಸಿ ಕಚೇರಿ ಎದುರು ಆರಂಭವಾಗಲಿದೆ. ಧಾರವಾಡದಿಂದ ಆರಂಭವಾದ ಈ ಚಳವಳಿ ಈಗ ರಾಜ್ಯಾದ್ಯಂತ ವಿಸ್ತರಿಸಲು ಸಜ್ಜಾಗಿದ್ದು, ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೊಸ ವೇಗ ಸಿಕ್ಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!