AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಎಕರೆ ಜಮೀನು ಇದ್ದರೆ ಭೂಪರಿವರ್ತನೆಗೆ ಅವಕಾಶ; ಸಚಿವ ಎಂಬಿ ಪಾಟೀಲ್

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಪಾಟೀಲ, ಎರಡು ಎಕರೆ ಜಮೀನು ಇದ್ದರೆ ಪರಿವರ್ತನೆ ಮಾಡಲು ಅವಕಾಶ ಕೊಡುತ್ತೇವೆ. ಫುಡ್ ಇಂಡಸ್ಟ್ರಿ ಮಾಡುವವರಿದ್ದರೆ ಮಾಡಬಹುದು. ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

2 ಎಕರೆ ಜಮೀನು ಇದ್ದರೆ ಭೂಪರಿವರ್ತನೆಗೆ ಅವಕಾಶ; ಸಚಿವ ಎಂಬಿ ಪಾಟೀಲ್
ಎಂಬಿ ಪಾಟೀಲ್
Follow us
Ganapathi Sharma
|

Updated on:Jun 26, 2023 | 10:33 PM

ಧಾರವಾಡ: ಎರಡು ಎಕರೆ ಜಮೀನು ಇದ್ದರೆ ಭೂಪರಿವರ್ತನೆ ಮಾಡಲು ಅವಕಾಶ ನೀಡುತ್ತೇವೆ. ಅಂಥವರು ಭೂಪರಿವರ್ತನೆ ಮಾಡಿಸಿಕೊಂಡು ಆಹಾರ ಉದ್ಯಮ ಮಾಡಬಹುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್​ (MB Patil) ಹೇಳಿದ್ದಾರೆ. ಧಾರವಾಡದಲ್ಲಿ (Dharawad) ಮಾತನಾಡಿದ ಅವರು, ರಾಜ್ಯದಲ್ಲಿ ಆಹಾರ ಉದ್ಯಮ ಬೆಳೆಯಲು ಪ್ರೋತ್ಸಾಹ ನೀಡುತ್ತೇವೆ. ಭೂಪರಿವರ್ತನೆ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಮಾವಿನ ಮಾರುಕಟ್ಟೆ ದರ ಕುಸಿದಾಗ ಆಹಾರ ಸಂಸ್ಕರಣೆ (ಫುಡ್ ಪ್ರೊಸೆಸ್) ಮಾಡಬಹುದು. ಕೈಗಾರಿಕಾ ಪ್ರದೇಶದಲ್ಲಿ ತಪ್ಪು ಏನಿದೆ ನೋಡಿಕೊಂಡು ಸುಧಾರಣೆ ತರ್ತೇವೆ ಎಂದು ಅವರು ಹೇಳಿದ್ದಾರೆ.

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಪಾಟೀಲ, ಎರಡು ಎಕರೆ ಜಮೀನು ಇದ್ದರೆ ಪರಿವರ್ತನೆ ಮಾಡಲು ಅವಕಾಶ ಕೊಡುತ್ತೇವೆ. ಫುಡ್ ಇಂಡಸ್ಟ್ರಿ ಮಾಡುವವರಿದ್ದರೆ ಮಾಡಬಹುದು. ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ. ಆಹಾರ ಉದ್ಯಮ ಬೆಳೆಸಲು ಪ್ರೋತ್ಸಾಹ ನೀಡುತ್ತೇವೆ. ಧಾರವಾಡದಲ್ಲಿ ಮಾವಿನ ಹಣ್ಣಿನ ಜೊತೆಗೆ ಬೇರೆ ಬೇರೆ ರೀತಿಯ ರಸ ತೆಗೆಯುತಿದ್ದಾರೆ. ಇದು ವಿದೇಶಕ್ಕೆ ರಫ್ತಾಗುತ್ತಿದೆ. ಮಾವಿನ ಮಾರುಕಟ್ಟೆ ಬೆಲೆ ಕುಸಿತ ಅದಾಗ ಫುಡ್ ಪ್ರೊಸೆಸ್ ಮಾಡಬಹುದು. ಇದರಿಂದ ಬೆಳೆಗಾರರಿಗೆ ಬೆಂಬಲ ಸಿಗಲಿದೆ. ಇದನ್ನು ನೋಡಲು ಬಂದಿದ್ದೆ ಎಂದು ಅವರು ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: Did DK Suresh warn MB Patil? ಯಾರಿಂದಲೂ ವಾರ್ನ್ ಮಾಡಿಸಿಕೊಳ್ಳುವಷ್ಟು ದುರ್ಬಲ ನಾನಲ್ಲ: ಎಂಬಿ ಪಾಟೀಲ್, ಸಚಿವರು

ಕೈಗಾರಿಕಾ ಪ್ರದೇಶದಲ್ಲಿ ತಪ್ಪು ಏನಿದೆ ನೋಡಿಕೊಂಡು ಸುಧಾರಣೆ ತರಬೇಕಿದೆ. ಲಾರಿಗಳು ಬರಲು ಕೈಗಾರಿಕಾ ಪ್ರದೇಶಕ್ಕೆ ರಸ್ತೆ ಬೇಕು. ಅದನ್ನು ಪರಿಶೀಲಿಸಲೆಂದೇ ಇಲ್ಲಿಗೆ ಬಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:32 pm, Mon, 26 June 23

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು