AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಎಕರೆ ಜಮೀನು ಇದ್ದರೆ ಭೂಪರಿವರ್ತನೆಗೆ ಅವಕಾಶ; ಸಚಿವ ಎಂಬಿ ಪಾಟೀಲ್

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಪಾಟೀಲ, ಎರಡು ಎಕರೆ ಜಮೀನು ಇದ್ದರೆ ಪರಿವರ್ತನೆ ಮಾಡಲು ಅವಕಾಶ ಕೊಡುತ್ತೇವೆ. ಫುಡ್ ಇಂಡಸ್ಟ್ರಿ ಮಾಡುವವರಿದ್ದರೆ ಮಾಡಬಹುದು. ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

2 ಎಕರೆ ಜಮೀನು ಇದ್ದರೆ ಭೂಪರಿವರ್ತನೆಗೆ ಅವಕಾಶ; ಸಚಿವ ಎಂಬಿ ಪಾಟೀಲ್
ಎಂಬಿ ಪಾಟೀಲ್
ಗಣಪತಿ ಶರ್ಮಾ
|

Updated on:Jun 26, 2023 | 10:33 PM

Share

ಧಾರವಾಡ: ಎರಡು ಎಕರೆ ಜಮೀನು ಇದ್ದರೆ ಭೂಪರಿವರ್ತನೆ ಮಾಡಲು ಅವಕಾಶ ನೀಡುತ್ತೇವೆ. ಅಂಥವರು ಭೂಪರಿವರ್ತನೆ ಮಾಡಿಸಿಕೊಂಡು ಆಹಾರ ಉದ್ಯಮ ಮಾಡಬಹುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್​ (MB Patil) ಹೇಳಿದ್ದಾರೆ. ಧಾರವಾಡದಲ್ಲಿ (Dharawad) ಮಾತನಾಡಿದ ಅವರು, ರಾಜ್ಯದಲ್ಲಿ ಆಹಾರ ಉದ್ಯಮ ಬೆಳೆಯಲು ಪ್ರೋತ್ಸಾಹ ನೀಡುತ್ತೇವೆ. ಭೂಪರಿವರ್ತನೆ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಮಾವಿನ ಮಾರುಕಟ್ಟೆ ದರ ಕುಸಿದಾಗ ಆಹಾರ ಸಂಸ್ಕರಣೆ (ಫುಡ್ ಪ್ರೊಸೆಸ್) ಮಾಡಬಹುದು. ಕೈಗಾರಿಕಾ ಪ್ರದೇಶದಲ್ಲಿ ತಪ್ಪು ಏನಿದೆ ನೋಡಿಕೊಂಡು ಸುಧಾರಣೆ ತರ್ತೇವೆ ಎಂದು ಅವರು ಹೇಳಿದ್ದಾರೆ.

ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಪಾಟೀಲ, ಎರಡು ಎಕರೆ ಜಮೀನು ಇದ್ದರೆ ಪರಿವರ್ತನೆ ಮಾಡಲು ಅವಕಾಶ ಕೊಡುತ್ತೇವೆ. ಫುಡ್ ಇಂಡಸ್ಟ್ರಿ ಮಾಡುವವರಿದ್ದರೆ ಮಾಡಬಹುದು. ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ. ಆಹಾರ ಉದ್ಯಮ ಬೆಳೆಸಲು ಪ್ರೋತ್ಸಾಹ ನೀಡುತ್ತೇವೆ. ಧಾರವಾಡದಲ್ಲಿ ಮಾವಿನ ಹಣ್ಣಿನ ಜೊತೆಗೆ ಬೇರೆ ಬೇರೆ ರೀತಿಯ ರಸ ತೆಗೆಯುತಿದ್ದಾರೆ. ಇದು ವಿದೇಶಕ್ಕೆ ರಫ್ತಾಗುತ್ತಿದೆ. ಮಾವಿನ ಮಾರುಕಟ್ಟೆ ಬೆಲೆ ಕುಸಿತ ಅದಾಗ ಫುಡ್ ಪ್ರೊಸೆಸ್ ಮಾಡಬಹುದು. ಇದರಿಂದ ಬೆಳೆಗಾರರಿಗೆ ಬೆಂಬಲ ಸಿಗಲಿದೆ. ಇದನ್ನು ನೋಡಲು ಬಂದಿದ್ದೆ ಎಂದು ಅವರು ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: Did DK Suresh warn MB Patil? ಯಾರಿಂದಲೂ ವಾರ್ನ್ ಮಾಡಿಸಿಕೊಳ್ಳುವಷ್ಟು ದುರ್ಬಲ ನಾನಲ್ಲ: ಎಂಬಿ ಪಾಟೀಲ್, ಸಚಿವರು

ಕೈಗಾರಿಕಾ ಪ್ರದೇಶದಲ್ಲಿ ತಪ್ಪು ಏನಿದೆ ನೋಡಿಕೊಂಡು ಸುಧಾರಣೆ ತರಬೇಕಿದೆ. ಲಾರಿಗಳು ಬರಲು ಕೈಗಾರಿಕಾ ಪ್ರದೇಶಕ್ಕೆ ರಸ್ತೆ ಬೇಕು. ಅದನ್ನು ಪರಿಶೀಲಿಸಲೆಂದೇ ಇಲ್ಲಿಗೆ ಬಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:32 pm, Mon, 26 June 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ