AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ 600 ಜನ ಹುಡ್ಗೀರಿಗೆ ಸೀರೆ ಎಳೆದು, ಪಿನ್ ಚುಚ್ಚಿದಾನೆ; ಯಡಿಯೂರಪ್ಪ, ಜೋಶಿ ಯಾಕೆ ಮಾತಾಡಿಲ್ಲ-ಇಬ್ರಾಹಿಂ

ಲೋಕಸಭೆ ಚುನಾವಣೆ ಬಳಿಕ ಮಠಾಧೀಶರು, ದಲಿತರು, ಮುಸ್ಲಿಂ ರ ಮೂರನೇ ಶಕ್ತಿ ಹುಟ್ಟು ಹಾಕುತ್ತೇವೆ ಜೊತೆಗೆ ಒಬ್ಬರು ಬ್ರಹ್ಮಾಚಾರಿಗೆ ಶಕ್ತಿ ಕೊಡುತ್ತೇವೆ. ಮುಂದೆ ಕರ್ನಾಟಕದಲ್ಲಿ ಮೂರನೇ ಶಕ್ತಿ ಹೊಸ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುತ್ತದೆ. ಈ ಕುರಿತು ನಾನು ದಿಂಗಾಲೇಶ್ವರ ಸ್ವಾಮೀಜಿ ಜೊತೆ ಮೂರು ಗಂಟೆ ಮಾತಾಡಿದ್ದೇನೆ ಎಂದು ಸಿಎಂ ಇಬ್ರಾಹಿಂ ಹೇಳಿದರು.

ಪ್ರಜ್ವಲ್ 600 ಜನ ಹುಡ್ಗೀರಿಗೆ ಸೀರೆ ಎಳೆದು, ಪಿನ್ ಚುಚ್ಚಿದಾನೆ; ಯಡಿಯೂರಪ್ಪ, ಜೋಶಿ ಯಾಕೆ ಮಾತಾಡಿಲ್ಲ-ಇಬ್ರಾಹಿಂ
ಸಿಎಂ ಇಬ್ರಾಹಿಂ
ಶಿವಕುಮಾರ್ ಪತ್ತಾರ್
| Edited By: |

Updated on:Apr 30, 2024 | 6:38 PM

Share

ಹುಬ್ಬಳ್ಳಿ, ಏ.30: ಪ್ರಜ್ವಲ್ 600 ಜನ ಹುಡ್ಗೀರಿಗೆ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಆದರೂ ಯಡಿಯೂರಪ್ಪ, ಜೋಶಿ ಯಾಕೆ ಮಾತಾಡಿಲ್ಲ?, ಇದೇನಾ ಅಚ್ಚೇದಿನ್ ಎಂದು ಸಿಎಂ​ ಇಬ್ರಾಹಿಂ(CM Ibrahim) ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್​ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ. ಅವರು ಗರ್ಭಿಣಿ ಆದ ಮೇಲೆ ಹೊರಗಡೆ ಹಾಕಿದರೇನು, ಅವರ ಮಕ್ಕಳಿಗೆ ಪರಿಹಾರ ಕೊಡುವುದು ಯಾರು?, ನಾನು ಆವತ್ತೆ ದೇವೆಗೌಡರಿಗೆ ಹೇಳಿದ್ದೆ, ಇವತ್ತು ಅವನು ಜರ್ಮನ್​ಗೆ ಹೋಗಿದ್ದಾನೆ. ಯಾವ ವಿಡಿಯೋ ಬರತ್ತೋ ,ಇನ್ನೆಲ್ಲಿ ಹೋಗ್ತಾನೋ ಗೊತ್ತಿಲ್ಲವೆಂದು.

ಮೂರನೇ ಶಕ್ತಿ ಹುಟ್ಟು ಹಾಕ್ತಿವಿ

ಲೋಕಸಭೆ ಚುನಾವಣೆ ಬಳಿಕ ಮಠಾಧೀಶರು, ದಲಿತರು, ಮುಸ್ಲಿಂ ರ ಮೂರನೇ ಶಕ್ತಿ ಹುಟ್ಟು ಹಾಕುತ್ತೇವೆ ಜೊತೆಗೆ ಒಬ್ಬರು ಬ್ರಹ್ಮಾಚಾರಿಗೆ ಶಕ್ತಿ ಕೊಡುತ್ತೇವೆ. ಮುಂದೆ ಕರ್ನಾಟಕದಲ್ಲಿ ಮೂರನೇ ಶಕ್ತಿ ಹೊಸ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುತ್ತದೆ. ಈ ಕುರಿತು ನಾನು ದಿಂಗಾಲೇಶ್ವರ ಸ್ವಾಮೀಜಿ ಜೊತೆ ಮೂರು ಗಂಟೆ ಮಾತಾಡಿದ್ದೇನೆ. ಕರ್ನಾಟಕದಲ್ಲಿ ಕಾಂಗ್ರೆಸ್ ತಪ್ಪಿನಿಂದ ಬಿಜೆಪಿ ಬೆಳೆಯುತ್ತಿದೆ. ಇವತ್ತು ಬಸವತತ್ವದ ಆಧಾರದ ಮೇಲೆ ಸಂಘಟನೆ ಮಾಡಬೇಕಿದೆ. ನಾವು ಇದನ್ನು ತೀರ್ಮಾನ ಮಾಡಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿ ಕೆಲವೇ ದಿನಗಳಲ್ಲಿ ಈ ಕುರಿತು ಹೇಳುತ್ತಾರೆ ಎಂದು ದಿಂಗಾಲೇಶ್ವರ ಸ್ವಾಮೀಜಿ ರಾಜಕೀಯ ನಡೆ ಕುರಿತು ಸಿಎಮ್ ಇಬ್ರಾಹಿಂ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹಾನ್ ನಾಯಕರ ಪಾತ್ರದ ಬಗ್ಗೆ ಚರ್ಚೆಯಾಗಬೇಕು: ಹೆಚ್ ಡಿ ಕುಮಾರಸ್ವಾಮಿ

ಇದೇ ವೇಳೆ ಕುಮಾರಸ್ವಾಮಿ ಮುಸ್ಲಿಂ ರ ವೋಟ್ ತೆಗೆದುಕೊಂಡು 17 ಸೀಟ್ ಗೆದ್ದಿದ್ದು ನನ್ನಿಂದ. ಬಿಜೆಪಿಗೆ ಗತಿ ಇಲ್ಲ, ಅವರಿಗೆ ಮತಿ ಇಲ್ಲ. ಮೇಕಪ್ ನೋಡಿ ಹೋಗಿಬಿಟ್ಟರು, ಹಾಸನ, ಮಂಡ್ಯದಲ್ಲಿ ಏನೂ ಸಿಗಲಿಲ್ಲ. ಬಿಜೆಪಿಯವರು ಮಂಚ ಮುರಿದವರೆ, ಜೆಡಿಎಸ್- ಬಿಜೆಪಿ ಇಬ್ಬರು ಚಿಕ್ಕಪ್ಪ-ದೊಡ್ಡಪ್ಪನ‌ ಮಕ್ಕಳು ಎಂದು ವ್ಯಂಗ್ಯವಾಡಿದ್ದಾರೆ. ನಾನು ಕೇಶವಕೃಪದಲ್ಲಿ ಗೌರವ ಸಿಗಲ್ಲ, ಬಸವಕೃಪದಲ್ಲಿರೋದು ಒಳ್ಳೆದು ಎಂದು ದೇವೆಗೌಡರಿಗೆ ಹೇಳಿದ್ದೆ. ಅದರಂತೆ ದೇವೆಗೌಡರು ಚುನಾವಣೆಯಾದ ಕೆಲವೇ ದಿನಗಳಲ್ಲಿ ಬಿಜೆಪಿಯವರು ಸಹಾಯ ಮಾಡಲಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:16 pm, Tue, 30 April 24

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ