AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Cancel: ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ವಿಶೇಷ ರೈಲು 2 ದಿನ ರದ್ದು

ನೈಋತ್ಯ ರೈಲ್ವೆ ಬೆಂಗಳೂರು ವಲಯದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಕಾರಣ ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳನ್ನು ಭಾಗಶಃ ರದ್ದುಗಳಿಸಲಾಗಿದೆ. ಹಾಗಿದ್ದರೆ ಯಾವ ಯಾವ ರೈಲುಗಳು ರದ್ದಾಗಿವೆ ಇಲ್ಲಿದೆ ಮಾಹಿತಿ...

Train Cancel: ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ವಿಶೇಷ ರೈಲು 2 ದಿನ ರದ್ದು
ರೈಲು
ವಿವೇಕ ಬಿರಾದಾರ
|

Updated on:Apr 03, 2024 | 9:35 AM

Share

ಹುಬ್ಬಳ್ಳಿ, ಏಪ್ರಿಲ್​ 03: ನೈಋತ್ಯ ರೈಲ್ವೆ (SWR) ಬೆಂಗಳೂರು ವಲಯದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಕಾರಣ ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ (Hubballi-Bengaluru Train Cancel). ಇನ್ನು ಕೆಲವು ರೈಲುಗಳನ್ನು ಭಾಗಶಃ ರದ್ದುಗಳಿಸಲಾಗಿದೆ. ವಂದೇ ಭಾರತ ರೈಲಿನ ಸಮಯವನ್ನು ಪರಿಷ್ಕರಿಸಲಾಗಿದೆ. ಹಾಗಿದ್ದರೆ ಯಾವ ಯಾವ ರೈಲುಗಳು ರದ್ದಾಗಿವೆ ಇಲ್ಲಿದೆ ಮಾಹಿತಿ…

ರದ್ದುಗೊಂಡಿರುವ ರೈಲುಗಳು:

ರೈಲು ಸಂಖ್ಯೆ 07339/07340 ಶ್ರೀ ಸಿದ್ಧಾರೂಢ ಸ್ವಾಮಿ (SSS) ಹುಬ್ಬಳ್ಳಿ – ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (KSR) ಬೆಂಗಳೂರು ಮಧ್ಯೆ ಸಂಚರಿಸುವ ಎಸ್​ಎಸ್​ಎಸ್​ ಹುಬ್ಬಳ್ಳಿ ವಿಶೇಷ ರೈಲು ಏಪ್ರಿಲ್​ 6 ಮತ್ತು 7 ರಂದು ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 06255 ಕೆಎಸ್​ಆರ್​ ಬೆಂಗಳೂರು-ಮೈಸೂರು ಮೆಮು ವಿಶೇಷ ಮತ್ತು ರೈಲು ಸಂಖ್ಯೆ 06650 ಮೈಸೂರು KSR ಬೆಂಗಳೂರು ಮೆಮು ವಿಶೇಷ ರೈಲು ಏಪ್ರಿಲ್ 7 ಮತ್ತು 8 ರಂದು ರದ್ದುಪಡಿಸಲಾಗಿದೆ.

ಇದನ್ನೂ ಓದಿ:  Vande Bharat Express: 10 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಭಾಗಶಃ ರದ್ದು ಗೊಂಡಿರುವ ರೈಲುಗಳು

ರೈಲು ಸಂಖ್ಯೆ 17391/17392 ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರಿನ ಯಶವಂತಪುರ ನಡುವೆ ಸಂಚರಿಸುವ ರೈಲು ಏಪ್ರಿಲ್​ 7, 8 ಮತ್ತು 9 ರಂದು ಭಾಗಶಃ ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 06243 ಬೆಂಗಳೂರು ಹೊಸಪೇಟೆ ಮತ್ತು ರೈಲು ಸಂಖ್ಯೆ 06244 ಹೊಸಪೇಟೆ- ಬೆಂಗಳೂರು ರೈಲು ಏಪ್ರಿಲ್ 7, 8 ಮತ್ತು 9 ರಂದು ಭಾಗಶಃ ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 16512 ಕೆಎಸ್​​ಆರ್​ ಬೆಂಗಳೂರು-ಕಣ್ಣೂರು ರೈಲು ಏಪ್ರಿಲ್​ 7 ಮತ್ತು 8 ರಂದು ಕೆಎಸ್​ಆರ್​ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದುಪಡಿಸಲಾಗಿದೆ.

ರೈಲುಗಳ ಸಮಯ ಪರಿಷ್ಕೃತ

ರೈಲು ಸಂಖ್ಯೆ 20661 ಕೆಎಸ್​ಆರ್​ ಬೆಂಗಳೂರು ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಏಪ್ರಿಲ್​ 8 ರಂದು ಕೆಎಸ್​ಆರ್​ ಬೆಂಗಳೂರಿನಿಂದ 30 ನಿಮಿಷಗಳ ಕಾಲ ಮರುಹೊಂದಿಸಲಾಗಿದೆ.

ರೈಲು ಸಂಖ್ಯೆ 16591 ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಮೈಸೂರು ಹಂಪಿ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 8 ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ 90 ನಿಮಿಷಗಳ ಕಾಲ ಮರುಹೊಂದಿಸಲಾಗಿದೆ.

ರೈಲು ಸಂಖ್ಯೆ 12079 ಕೆಎಸ್‌ಆರ್ ಬೆಂಗಳೂರು ನಿಂದ ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್ ಅನ್ನು ಏಪ್ರಿಲ್ 8 ಮತ್ತು 9 ರಂದು ಕ್ರಮವಾಗಿ ಕೆಎಸ್‌ಆರ್ ಬೆಂಗಳೂರಿನಿಂದ 30 ನಿಮಿಷ ಮತ್ತು 75 ನಿಮಿಷಗಳ ಕಾಲ ಮರುಹೊಂದಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 3 April 24

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ