AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Cancel: ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ವಿಶೇಷ ರೈಲು 2 ದಿನ ರದ್ದು

ನೈಋತ್ಯ ರೈಲ್ವೆ ಬೆಂಗಳೂರು ವಲಯದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಕಾರಣ ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳನ್ನು ಭಾಗಶಃ ರದ್ದುಗಳಿಸಲಾಗಿದೆ. ಹಾಗಿದ್ದರೆ ಯಾವ ಯಾವ ರೈಲುಗಳು ರದ್ದಾಗಿವೆ ಇಲ್ಲಿದೆ ಮಾಹಿತಿ...

Train Cancel: ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ವಿಶೇಷ ರೈಲು 2 ದಿನ ರದ್ದು
ರೈಲು
ವಿವೇಕ ಬಿರಾದಾರ
|

Updated on:Apr 03, 2024 | 9:35 AM

Share

ಹುಬ್ಬಳ್ಳಿ, ಏಪ್ರಿಲ್​ 03: ನೈಋತ್ಯ ರೈಲ್ವೆ (SWR) ಬೆಂಗಳೂರು ವಲಯದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಕಾರಣ ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಸಂಚರಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿದೆ (Hubballi-Bengaluru Train Cancel). ಇನ್ನು ಕೆಲವು ರೈಲುಗಳನ್ನು ಭಾಗಶಃ ರದ್ದುಗಳಿಸಲಾಗಿದೆ. ವಂದೇ ಭಾರತ ರೈಲಿನ ಸಮಯವನ್ನು ಪರಿಷ್ಕರಿಸಲಾಗಿದೆ. ಹಾಗಿದ್ದರೆ ಯಾವ ಯಾವ ರೈಲುಗಳು ರದ್ದಾಗಿವೆ ಇಲ್ಲಿದೆ ಮಾಹಿತಿ…

ರದ್ದುಗೊಂಡಿರುವ ರೈಲುಗಳು:

ರೈಲು ಸಂಖ್ಯೆ 07339/07340 ಶ್ರೀ ಸಿದ್ಧಾರೂಢ ಸ್ವಾಮಿ (SSS) ಹುಬ್ಬಳ್ಳಿ – ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (KSR) ಬೆಂಗಳೂರು ಮಧ್ಯೆ ಸಂಚರಿಸುವ ಎಸ್​ಎಸ್​ಎಸ್​ ಹುಬ್ಬಳ್ಳಿ ವಿಶೇಷ ರೈಲು ಏಪ್ರಿಲ್​ 6 ಮತ್ತು 7 ರಂದು ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 06255 ಕೆಎಸ್​ಆರ್​ ಬೆಂಗಳೂರು-ಮೈಸೂರು ಮೆಮು ವಿಶೇಷ ಮತ್ತು ರೈಲು ಸಂಖ್ಯೆ 06650 ಮೈಸೂರು KSR ಬೆಂಗಳೂರು ಮೆಮು ವಿಶೇಷ ರೈಲು ಏಪ್ರಿಲ್ 7 ಮತ್ತು 8 ರಂದು ರದ್ದುಪಡಿಸಲಾಗಿದೆ.

ಇದನ್ನೂ ಓದಿ:  Vande Bharat Express: 10 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಭಾಗಶಃ ರದ್ದು ಗೊಂಡಿರುವ ರೈಲುಗಳು

ರೈಲು ಸಂಖ್ಯೆ 17391/17392 ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರಿನ ಯಶವಂತಪುರ ನಡುವೆ ಸಂಚರಿಸುವ ರೈಲು ಏಪ್ರಿಲ್​ 7, 8 ಮತ್ತು 9 ರಂದು ಭಾಗಶಃ ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 06243 ಬೆಂಗಳೂರು ಹೊಸಪೇಟೆ ಮತ್ತು ರೈಲು ಸಂಖ್ಯೆ 06244 ಹೊಸಪೇಟೆ- ಬೆಂಗಳೂರು ರೈಲು ಏಪ್ರಿಲ್ 7, 8 ಮತ್ತು 9 ರಂದು ಭಾಗಶಃ ರದ್ದುಪಡಿಸಲಾಗಿದೆ.

ರೈಲು ಸಂಖ್ಯೆ 16512 ಕೆಎಸ್​​ಆರ್​ ಬೆಂಗಳೂರು-ಕಣ್ಣೂರು ರೈಲು ಏಪ್ರಿಲ್​ 7 ಮತ್ತು 8 ರಂದು ಕೆಎಸ್​ಆರ್​ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದುಪಡಿಸಲಾಗಿದೆ.

ರೈಲುಗಳ ಸಮಯ ಪರಿಷ್ಕೃತ

ರೈಲು ಸಂಖ್ಯೆ 20661 ಕೆಎಸ್​ಆರ್​ ಬೆಂಗಳೂರು ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಏಪ್ರಿಲ್​ 8 ರಂದು ಕೆಎಸ್​ಆರ್​ ಬೆಂಗಳೂರಿನಿಂದ 30 ನಿಮಿಷಗಳ ಕಾಲ ಮರುಹೊಂದಿಸಲಾಗಿದೆ.

ರೈಲು ಸಂಖ್ಯೆ 16591 ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಮೈಸೂರು ಹಂಪಿ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 8 ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ 90 ನಿಮಿಷಗಳ ಕಾಲ ಮರುಹೊಂದಿಸಲಾಗಿದೆ.

ರೈಲು ಸಂಖ್ಯೆ 12079 ಕೆಎಸ್‌ಆರ್ ಬೆಂಗಳೂರು ನಿಂದ ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್ ಅನ್ನು ಏಪ್ರಿಲ್ 8 ಮತ್ತು 9 ರಂದು ಕ್ರಮವಾಗಿ ಕೆಎಸ್‌ಆರ್ ಬೆಂಗಳೂರಿನಿಂದ 30 ನಿಮಿಷ ಮತ್ತು 75 ನಿಮಿಷಗಳ ಕಾಲ ಮರುಹೊಂದಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Wed, 3 April 24

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!