AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಫಯಾಜ್ ತಂದೆ ತಾಯಿ ವಿರುದ್ಧ ದೂರು ಕೊಡ್ತೀನಿ ಅರೆಸ್ಟ್​ ಮಾಡಿ ಎಂದ ನೇಹಾ ತಂದೆ

ನೇಹಾ ಹತ್ಯೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಯೊಂದಿಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ನೇಹಾ ತಂದೆ ನಿರಂಜನ್​ ಹಿರಮೇಠ, ‘ಸಾಮಾಜಿಕ ಜಾಲಾತಣದಲ್ಲಿ ಮಗಳ ಫೊಟೋಗಳನ್ನ ಹಾಕುತ್ತಿದ್ದಾರೆ. ನನ್ನ ಮಗಳಿಗೆ ಫಯಾಜ್ ಅಕ್ಕ , ಅವರ ತಂದೆ-ತಾಯಿ ಪ್ರವೋಕ್ ಮಾಡಿದ್ದಾರೆ. ಹೀಗಾಗಿ ನಾನು ದೂರು ಕೊಡ್ತೀನಿ ಎಂದಿದ್ದಾರೆ.

ಹುಬ್ಬಳ್ಳಿ: ಫಯಾಜ್ ತಂದೆ ತಾಯಿ ವಿರುದ್ಧ ದೂರು ಕೊಡ್ತೀನಿ ಅರೆಸ್ಟ್​ ಮಾಡಿ ಎಂದ ನೇಹಾ ತಂದೆ
ಮೃತ ನೇಹಾ ತಂದೆ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 20, 2024 | 10:00 PM

Share

ಹುಬ್ಬಳ್ಳಿ, ಏ.20: ನೇಹಾ ಹತ್ಯೆಗೆ ಸಂಬಂಧಿಸಿದಂತೆ ಫಯಾಜ್ ತಂದೆ-ತಾಯಿ ಇಬ್ಬರನ್ನು ಅರೆಸ್ಟ್ ಮಾಡಿ, ನಾನು ಅವರ ವಿರುದ್ದ ದೂರು ಕೊಡುತ್ತೇನೆ ಎಂದು ನೇಹಾ ತಂದೆ ನಿರಂಜನ್​ ಹಿರಮೇಠ ಹೇಳಿದರು. ಮಾಧ್ಯಮ ಪ್ರತಿನಿಧಿಯೊಂದಿಗೆ ಹುಬ್ಬಳ್ಳಿ (Hubballi)ಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಜಾಲಾತಣದಲ್ಲಿ ಮಗಳ ಫೊಟೋಗಳನ್ನ ಹಾಕುತ್ತಿದ್ದಾರೆ. ನನ್ನ ಮಗಳಿಗೆ ಫಯಾಜ್ ಅಕ್ಕ , ಅವರ ತಂದೆ-ತಾಯಿ ಪ್ರವೋಕ್ ಮಾಡಿದ್ದಾರೆ. ಹೀಗಾಗಿ ನಾನು ದೂರು ಕೊಡ್ತೀನಿ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಪೋಟೋಗಳು ಕಾಲೇಜ್ ಫಂಕ್ಷನ್, ಇವೆಂಟ್​ನಲ್ಲಿ ಭಾಗಿಯಾಗಿದ್ದು, ಅದನ್ನ ಈಗ ವೈರಲ್​ ಮಾಡುತ್ತಿದ್ದಾರೆ. ಪೊಲೀಸರು ಇದನ್ನು ಗಮನಿಸಬೇಕು. ಕೂಡಲೇ ಅವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಜೊತೆಗೆ ಫಯಾಜ್ ತಂದೆ-ತಾಯಿ ಇಬ್ಬರು ಕೂಡ ಶಿಕ್ಷಕರು, ಸಣ್ಣ ಮಕ್ಜಳಿಗೆ ಪಾಠ ಮಾಡುವವರು ನನ್ಮ ಮಗಳ ಬ್ರೇನ್ ವಾಶ ಮಾಡಲು ಹೇಳಿದ್ದಾರೆ. ಬಂದ್ರೆ ಕರೆದುಕೊಂಡು ಬಾ,ಇಲ್ಲದಿದ್ದರೆ ಹೊಡೆದು ಬಾ ಎಂದು ಅವರೇ ಹೇಳಿದ್ದಾರೆ. ಹೀಗಾಗಿ ಅವರು ತಂದೆ-ತಾಯಿಯನ್ನು ಅರೆಸ್ಟ್ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ:ನೇಹಾ ತಂದೆ ನಿರಂಜನ್ ಹಿರೇಮಠ ನಿವಾಸಕ್ಕೆ ಮುಸ್ಲಿಂ ಮುಖಂಡರ ಭೇಟಿ

ನೇಹಾಗೆ ನಡೆದಿತ್ತಾ ಲವ್ ಜಿಹಾದ್ ಷಡ್ಯಂತ್ರ?

ನೇಹಾಗೆ ಲವ್ ಜಿಹಾದ್ ಷಡ್ಯಂತ್ರ ನಡೆದಿತ್ತಾ?, ಈ ಷಡ್ಯಂತದಲ್ಲಿ ಫಯಾಜ್ ಕುಟುಂಬದವರು ಪಾಲುದಾರರು ಆಗಿದ್ರಾ ಎಂಬ ಪ್ರಶ್ನೆಯೂ ಮೂಡಿದ್ದು, ಫಯಾಜ್ ಅಕ್ಕ ನಿಶಾ ಅವರು ನೇಹಾ ಜೊತೆ ಮಾಡಿರುವ ಜೊತೆ ಚಾಟಿಂಗ್ ಸಾಕ್ಷಿ ಹೇಳುತ್ತಿವೆ. ಫಯಾಜ್‌ನನ್ನ ಮದುವೆ ಆಗುವಂತೆ ಸಹೋದರಿ ನಿಶಾ ಒತ್ತಾಯಿಸಿರುವುದು ಚಾಟಿಂಗ್‌ನಲ್ಲಿ ಬಯಲಾಗಿದೆ. ಜೊತೆಗೆ ಕಳೆದ ಫೆಬ್ರವರಿಯಲ್ಲಿಯೇ ಬೇಗ ಮದುವೆ ಮಾಡಿಕೊಳ್ಳಿ ಎಂದು ಫಯಾಜ್‌ ಸಹೋದರಿ ನೇಹಾಗೆ ಹೇಳಿದ್ದು, ನೀ ಸ್ಟ್ರಾಂಗ್ ಆಗಿ ಇರು ಎಂದು ಸಂದೇಶ ಕಳಿಸಿದ್ದಾರೆ. ಮದುವೆ ಆದ್ರೆ ನೀವು ಚೆನ್ನಾಗಿ ಇರುತ್ತಿರಿ ಎಂದು ಫಯಾಜ್ ಸಹೋದರಿ ನೇಹಾ ತಲೆ ಕೆಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಮನೆಯಲ್ಲಿ ಮದುವೆ ಪ್ರಪೋಜಲ್ ತಂದಿದ್ದಾರೆ, ಮದುವೆಗೆ ಒತ್ತಾಯ ಮಾಡುತ್ತಿದ್ದಾರೆ, ಜೀವನ ಸಾಕಾಗಿದೆ ಎಂದು ನೇಹಾ ಗೋಳು ತೋಡಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Sat, 20 April 24

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?